AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ

ಮುಖ್ಯಮಂತ್ರಿ ಅಧ್ಯಕ್ಷತೆಯ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಅರಣ್ಯ ಮತ್ತು ಪರಿಸರ ಇಲಾಖೆ ಆದೇಶಿಸಿದೆ.

ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಪುನರ್ ರಚನೆ; ಸಚಿವರ, ಶಾಸಕರ ಮಕ್ಕಳ ನೇಮಕ
ಸಿಎಂ ಸಿದ್ದರಾಮಯ್ಯ
ಪ್ರಸನ್ನ ಗಾಂವ್ಕರ್​
| Edited By: |

Updated on:Jul 27, 2024 | 7:19 AM

Share

ಬೆಂಗಳೂರು, ಜುಲೈ.27: ಸಿಎಂ ಸಿದ್ದರಾಮಯ್ಯ (Siddaramaiah) ಅಧ್ಯಕ್ಷತೆಯಲ್ಲಿರುವ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು (Karnataka Wildlife Board) ಮೂರು ವರ್ಷಗಳ ಅವಧಿಗೆ ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರಜ್ಞರು, ಪರಿಸರವಾದಿಗಳ ಕೋಟಾದಡಿಯಲ್ಲಿ ಸಚಿವರ, ಶಾಸಕರ ಮಕ್ಕಳನ್ನು ನೇಮಕ ಮಾಡಿಕೊಳ್ಳಲಾಗಿದೆ.

ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಎಂ ಪಾಟೀಲ್, ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಮಂಡಳಿಯ ಸದಸ್ಯರಾಗಿ ನೇಮಕ ಮಾಡಲಾಗಿದೆ. ರಾಜ್ಯ ವನ್ಯಜೀವಿ ಮಂಡಳಿಗೆ ಸಿಎಂ ಅಧ್ಯಕ್ಷರಾಗಿರುತ್ತಾರೆ. ಅರಣ್ಯ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಸದ್ಯ ಈಗ ಶಾಸಕರ ಕೋಟಾದಡಿ 10 ಸದಸ್ಯರನ್ನ ನೇಮಕ ಮಾಡಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.

ರಾಮದುರ್ಗ ಶಾಸಕ ಅಶೋಕ್ ಎಂ. ಪಟ್ಟಣ, ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ಸರ್ಕಾರೇತರ ಸಂಸ್ಥೆಗಳ ಕೋಟಾದಡಿ ವೈಲ್ಡ್‌ಲೈಫ್‌ ಅಸೋಸಿಯೇಷನ್‌ ಆಫ್ ಸೌತ್ ಇಂಡಿಯಾ ವನ್ಯಜೀವಿ ಸಂಘದಿಂದ ಸುಶೀಲಗೈನಚಂದ್, ಟೈಗರ್ಸ್‌ ಅನ್‌ಲಿಮಿಟೆಡ್ ವನ್ಯಜೀವಿ ಸಮಾಜದಿಂದ ಸೀಮಾ ಬೇಗಂ ಖಲೀಲ್, ಬೆಂಗಳೂರು ಪರಿಸರ ಟ್ರಸ್ಟ್‌ನಿಂದ ಡಾ.ಆರ್.ವಿ.ದಿನೇಶ್ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

ಇದನ್ನೂ ಓದಿ: ಸಂಸತ್​​ ನಲ್ಲಿ ವಾಲ್ಮೀಕಿ, ಮುಡಾ ಹಗರಣ ಚರ್ಚೆಗೆ ಕಾಂಗ್ರೆಸ್ ಅಡ್ಡಿ; ಪ್ರಲ್ಹಾದ ಜೋಶಿ ಕಿಡಿ

ಸಂರಕ್ಷಣಾ ವಿಶೇಷ ತಜ್ಞರು, ಜೀವಿಶಾಸ್ತ್ರ ತಜ್ಞರು ಹಾಗೂ ಪರಿಸರವಾದಿಗಳ ಕೋಟಾದಿಂದ ಬೆಂಗಳೂರಿನ ರವೀಂದ್ರ ರಘುನಾಥ, ಡಾ.ರಾಜಕುಮಾರ್ ಎಸ್ ಅಲ್ಲೆ, ಅಜಿತ್ ಕರಿಗುಡ್ಡಯ್ಯ, ಧ್ರುವ ಎಂ ಪಾಟೀಲ್, ಮಲ್ಲಪ್ಪ ಎಸ್ ಅಂಗಡಿ, ವಿರಾಜಪೇಟೆಯಿಂದ ಸಂಕೇತ ಪೂವಯ್ಯ, ಧಾರವಾಡದ ವೈಶಾಲಿ ಕುಲಕರ್ಣಿ, ಬೀದರ್‌ನ ವಿನಯ್ ಕುಮಾರ್ ಮಾಳಿಗೆ, ಮೈಸೂರಿನ ಡಾ.ಸಂತೃಪ್ತ ಅವರನ್ನು ನೇಮಕ ಮಾಡಲಾಗಿದೆ.

ಮಂಡಳಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು, ಸಂಸ್ಥೆಗಳ ಹತ್ತು ಅಧಿಕಾರಿಗಳು ಪದನಿಮಿತ್ತ ಸದಸ್ಯರು ರಾಜ್ಯದ ವನ್ಯಜೀವಿ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:18 am, Sat, 27 July 24

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More