AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ​ತಾಂತ್ರಿಕ ಸಲಹಾ ಸಮಿತಿ ನೀಡಿದ ಆತಂಕಕಾರಿ ವರದಿ ಇದು..; ಕಠಿಣ ನಿಯಮ ಜಾರಿಗೊಳಿಸದೆ ಇದ್ರೆ ಅಪಾಯ ತಪ್ಪಿದ್ದಲ್ಲ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸದೆ ಇದ್ದರೆ ರಾಜ್ಯದಲ್ಲಿ ಕೊವಿಡ್​ 19 ಸಂಖ್ಯೆ 3 ಪಟ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮೇ ತಿಂಗಳ ಹೊತ್ತಿಗೆ ಬೆಂಗಳೂರಿನಲ್ಲೇ ಪ್ರತಿದಿನ 20,000 ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ !

ಕೊವಿಡ್ 19 ​ತಾಂತ್ರಿಕ ಸಲಹಾ ಸಮಿತಿ ನೀಡಿದ ಆತಂಕಕಾರಿ ವರದಿ ಇದು..; ಕಠಿಣ ನಿಯಮ ಜಾರಿಗೊಳಿಸದೆ ಇದ್ರೆ ಅಪಾಯ ತಪ್ಪಿದ್ದಲ್ಲ
ಕೊರೊನಾ ತಪಾಸಣೆ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 17, 2021 | 9:29 AM

Share

ಬೆಂಗಳೂರು: ಎರಡನೇ ಅಲೆಯಲ್ಲಿ ಮಿತಿಮೀರುತ್ತಿರುವ ಕೊರೊನಾಕ್ಕೆ ಕಡಿವಾಣ ಹಾಕುವುದು ಸದ್ಯದ ಮಟ್ಟಿಗೆ ಒಂದು ಸವಾಲಾಗಿ ಪರಿಣಮಿಸಿದೆ. ಸೋಂಕಿನ ನಿಯಂತ್ರಣಕ್ಕೆ ಸರ್ಕಾರ ನೈಟ್​ ಕರ್ಫ್ಯೂ ಜಾರಿ ಮಾಡಿದ್ದು, ಅದರಲ್ಲಿ ಕೆಲವು ಬದಲಾವಣೆ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಮತ್ತೆ ಲಾಕ್​ಡೌನ್ ಜಾರಿಯಾಗುವ ಸಾಧ್ಯತೆಯನ್ನೂ ಸಂಪೂರ್ಣವಾಗಿ ಅಲ್ಲಗಳೆಯುವಂತಿಲ್ಲ. ಇದೀಗ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಆತಂಕಕಾರಿ ವರದಿಯೊಂದನ್ನು ಸಲ್ಲಿಸಿದೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸದೆ ಇದ್ದರೆ ರಾಜ್ಯದಲ್ಲಿ ಕೊವಿಡ್​ 19 ಸಂಖ್ಯೆ 3 ಪಟ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮೇ ತಿಂಗಳ ಹೊತ್ತಿಗೆ ಬೆಂಗಳೂರಿನಲ್ಲೇ ಪ್ರತಿದಿನ 20,000 ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ ತಿಳಿಸಿದೆ. ಅಲ್ಲದೆ, ಕೊರೊನಾ ಮರಣದ ಪ್ರಮಾಣವೂ 2 ಪಟ್ಟು ಹೆಚ್ಚಲಿದ್ದು, ಆಸ್ಪತ್ರೆಗಳಲ್ಲಿ ವೆಂಟಿಲೇಟರ್​, ಐಸಿಯು ಕೊರತೆ ಆಗಬಹುದು. ಚಿತಾಗಾರಗಳಲ್ಲಿ ಜಾಗದ ಸಮಸ್ಯೆ ಉಂಟಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಹೀಗೆ ಬಿಟ್ಟರೆ ಕೊರೊನಾ ಸೋಂಕು ಹಳ್ಳಿಗಳಿಗೂ ಹರಡಬಹುದು. ಓರ್ವ ಸೋಂಕಿತನಿಂದ ಮನೆಮಂದಿಗೆಲ್ಲ ಕೊರೊನಾ ತಗುಲುತ್ತದೆ. ಮಾರುಕಟ್ಟೆಗಳು ಸೇರಿ ಇನ್ನಿತರ ಜನನಿಬಿಡ ಸ್ಥಳಗಳಲ್ಲಿ ಕೊರೊನಾ ಸೋಂಕು ಉಲ್ಬಣ ಆಗಬಹುದು. ಹಾಗಾಗಿ ಶೀಘ್ರವೇ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಕೊವಿಡ್​ ತಾಂತ್ರಿಕ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಸಾವು: ಎದೆಗೆ ಕಲ್ಲು ಎಸೆಯಲು ಮೊದಲೇ ನಡೆದಿತ್ತು ಪ್ಲ್ಯಾನ್; ಶಾಕಿಂಗ್ ಮಾಹಿತಿ ಬಹಿರಂಗ

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

(Government Should enforce strict regulations for corona control says Covid-19 Technical Advisory Committee)

Published On - 9:28 am, Sat, 17 April 21

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?