AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ​ತಾಂತ್ರಿಕ ಸಲಹಾ ಸಮಿತಿ ನೀಡಿದ ಆತಂಕಕಾರಿ ವರದಿ ಇದು..; ಕಠಿಣ ನಿಯಮ ಜಾರಿಗೊಳಿಸದೆ ಇದ್ರೆ ಅಪಾಯ ತಪ್ಪಿದ್ದಲ್ಲ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸದೆ ಇದ್ದರೆ ರಾಜ್ಯದಲ್ಲಿ ಕೊವಿಡ್​ 19 ಸಂಖ್ಯೆ 3 ಪಟ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮೇ ತಿಂಗಳ ಹೊತ್ತಿಗೆ ಬೆಂಗಳೂರಿನಲ್ಲೇ ಪ್ರತಿದಿನ 20,000 ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ !

ಕೊವಿಡ್ 19 ​ತಾಂತ್ರಿಕ ಸಲಹಾ ಸಮಿತಿ ನೀಡಿದ ಆತಂಕಕಾರಿ ವರದಿ ಇದು..; ಕಠಿಣ ನಿಯಮ ಜಾರಿಗೊಳಿಸದೆ ಇದ್ರೆ ಅಪಾಯ ತಪ್ಪಿದ್ದಲ್ಲ
ಕೊರೊನಾ ತಪಾಸಣೆ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 17, 2021 | 9:29 AM

Share

ಬೆಂಗಳೂರು: ಎರಡನೇ ಅಲೆಯಲ್ಲಿ ಮಿತಿಮೀರುತ್ತಿರುವ ಕೊರೊನಾಕ್ಕೆ ಕಡಿವಾಣ ಹಾಕುವುದು ಸದ್ಯದ ಮಟ್ಟಿಗೆ ಒಂದು ಸವಾಲಾಗಿ ಪರಿಣಮಿಸಿದೆ. ಸೋಂಕಿನ ನಿಯಂತ್ರಣಕ್ಕೆ ಸರ್ಕಾರ ನೈಟ್​ ಕರ್ಫ್ಯೂ ಜಾರಿ ಮಾಡಿದ್ದು, ಅದರಲ್ಲಿ ಕೆಲವು ಬದಲಾವಣೆ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಮತ್ತೆ ಲಾಕ್​ಡೌನ್ ಜಾರಿಯಾಗುವ ಸಾಧ್ಯತೆಯನ್ನೂ ಸಂಪೂರ್ಣವಾಗಿ ಅಲ್ಲಗಳೆಯುವಂತಿಲ್ಲ. ಇದೀಗ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಆತಂಕಕಾರಿ ವರದಿಯೊಂದನ್ನು ಸಲ್ಲಿಸಿದೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸದೆ ಇದ್ದರೆ ರಾಜ್ಯದಲ್ಲಿ ಕೊವಿಡ್​ 19 ಸಂಖ್ಯೆ 3 ಪಟ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮೇ ತಿಂಗಳ ಹೊತ್ತಿಗೆ ಬೆಂಗಳೂರಿನಲ್ಲೇ ಪ್ರತಿದಿನ 20,000 ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ ತಿಳಿಸಿದೆ. ಅಲ್ಲದೆ, ಕೊರೊನಾ ಮರಣದ ಪ್ರಮಾಣವೂ 2 ಪಟ್ಟು ಹೆಚ್ಚಲಿದ್ದು, ಆಸ್ಪತ್ರೆಗಳಲ್ಲಿ ವೆಂಟಿಲೇಟರ್​, ಐಸಿಯು ಕೊರತೆ ಆಗಬಹುದು. ಚಿತಾಗಾರಗಳಲ್ಲಿ ಜಾಗದ ಸಮಸ್ಯೆ ಉಂಟಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಹೀಗೆ ಬಿಟ್ಟರೆ ಕೊರೊನಾ ಸೋಂಕು ಹಳ್ಳಿಗಳಿಗೂ ಹರಡಬಹುದು. ಓರ್ವ ಸೋಂಕಿತನಿಂದ ಮನೆಮಂದಿಗೆಲ್ಲ ಕೊರೊನಾ ತಗುಲುತ್ತದೆ. ಮಾರುಕಟ್ಟೆಗಳು ಸೇರಿ ಇನ್ನಿತರ ಜನನಿಬಿಡ ಸ್ಥಳಗಳಲ್ಲಿ ಕೊರೊನಾ ಸೋಂಕು ಉಲ್ಬಣ ಆಗಬಹುದು. ಹಾಗಾಗಿ ಶೀಘ್ರವೇ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಕೊವಿಡ್​ ತಾಂತ್ರಿಕ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಸಾವು: ಎದೆಗೆ ಕಲ್ಲು ಎಸೆಯಲು ಮೊದಲೇ ನಡೆದಿತ್ತು ಪ್ಲ್ಯಾನ್; ಶಾಕಿಂಗ್ ಮಾಹಿತಿ ಬಹಿರಂಗ

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

(Government Should enforce strict regulations for corona control says Covid-19 Technical Advisory Committee)

Published On - 9:28 am, Sat, 17 April 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ