AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ 19 ​ತಾಂತ್ರಿಕ ಸಲಹಾ ಸಮಿತಿ ನೀಡಿದ ಆತಂಕಕಾರಿ ವರದಿ ಇದು..; ಕಠಿಣ ನಿಯಮ ಜಾರಿಗೊಳಿಸದೆ ಇದ್ರೆ ಅಪಾಯ ತಪ್ಪಿದ್ದಲ್ಲ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸದೆ ಇದ್ದರೆ ರಾಜ್ಯದಲ್ಲಿ ಕೊವಿಡ್​ 19 ಸಂಖ್ಯೆ 3 ಪಟ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮೇ ತಿಂಗಳ ಹೊತ್ತಿಗೆ ಬೆಂಗಳೂರಿನಲ್ಲೇ ಪ್ರತಿದಿನ 20,000 ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ !

ಕೊವಿಡ್ 19 ​ತಾಂತ್ರಿಕ ಸಲಹಾ ಸಮಿತಿ ನೀಡಿದ ಆತಂಕಕಾರಿ ವರದಿ ಇದು..; ಕಠಿಣ ನಿಯಮ ಜಾರಿಗೊಳಿಸದೆ ಇದ್ರೆ ಅಪಾಯ ತಪ್ಪಿದ್ದಲ್ಲ
ಕೊರೊನಾ ತಪಾಸಣೆ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on:Apr 17, 2021 | 9:29 AM

Share

ಬೆಂಗಳೂರು: ಎರಡನೇ ಅಲೆಯಲ್ಲಿ ಮಿತಿಮೀರುತ್ತಿರುವ ಕೊರೊನಾಕ್ಕೆ ಕಡಿವಾಣ ಹಾಕುವುದು ಸದ್ಯದ ಮಟ್ಟಿಗೆ ಒಂದು ಸವಾಲಾಗಿ ಪರಿಣಮಿಸಿದೆ. ಸೋಂಕಿನ ನಿಯಂತ್ರಣಕ್ಕೆ ಸರ್ಕಾರ ನೈಟ್​ ಕರ್ಫ್ಯೂ ಜಾರಿ ಮಾಡಿದ್ದು, ಅದರಲ್ಲಿ ಕೆಲವು ಬದಲಾವಣೆ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ. ಮತ್ತೆ ಲಾಕ್​ಡೌನ್ ಜಾರಿಯಾಗುವ ಸಾಧ್ಯತೆಯನ್ನೂ ಸಂಪೂರ್ಣವಾಗಿ ಅಲ್ಲಗಳೆಯುವಂತಿಲ್ಲ. ಇದೀಗ ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ಆತಂಕಕಾರಿ ವರದಿಯೊಂದನ್ನು ಸಲ್ಲಿಸಿದೆ.

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕಠಿಣ ನಿಯಮಗಳನ್ನು ಜಾರಿಗೊಳಿಸದೆ ಇದ್ದರೆ ರಾಜ್ಯದಲ್ಲಿ ಕೊವಿಡ್​ 19 ಸಂಖ್ಯೆ 3 ಪಟ್ಟು ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಮೇ ತಿಂಗಳ ಹೊತ್ತಿಗೆ ಬೆಂಗಳೂರಿನಲ್ಲೇ ಪ್ರತಿದಿನ 20,000 ಸೋಂಕಿತರು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಕೊವಿಡ್​ ತಾಂತ್ರಿಕ ಸಲಹಾ ಸಮಿತಿ ವರದಿಯಲ್ಲಿ ತಿಳಿಸಿದೆ. ಅಲ್ಲದೆ, ಕೊರೊನಾ ಮರಣದ ಪ್ರಮಾಣವೂ 2 ಪಟ್ಟು ಹೆಚ್ಚಲಿದ್ದು, ಆಸ್ಪತ್ರೆಗಳಲ್ಲಿ ವೆಂಟಿಲೇಟರ್​, ಐಸಿಯು ಕೊರತೆ ಆಗಬಹುದು. ಚಿತಾಗಾರಗಳಲ್ಲಿ ಜಾಗದ ಸಮಸ್ಯೆ ಉಂಟಾಗಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದೆ.

ಹೀಗೆ ಬಿಟ್ಟರೆ ಕೊರೊನಾ ಸೋಂಕು ಹಳ್ಳಿಗಳಿಗೂ ಹರಡಬಹುದು. ಓರ್ವ ಸೋಂಕಿತನಿಂದ ಮನೆಮಂದಿಗೆಲ್ಲ ಕೊರೊನಾ ತಗುಲುತ್ತದೆ. ಮಾರುಕಟ್ಟೆಗಳು ಸೇರಿ ಇನ್ನಿತರ ಜನನಿಬಿಡ ಸ್ಥಳಗಳಲ್ಲಿ ಕೊರೊನಾ ಸೋಂಕು ಉಲ್ಬಣ ಆಗಬಹುದು. ಹಾಗಾಗಿ ಶೀಘ್ರವೇ ಕಠಿಣ ನಿಯಮಗಳನ್ನು ಜಾರಿಗೊಳಿಸಬೇಕು ಎಂದು ಕೊವಿಡ್​ ತಾಂತ್ರಿಕ ಸಮಿತಿ ತಿಳಿಸಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿ ಚಾಲಕ ಸಾವು: ಎದೆಗೆ ಕಲ್ಲು ಎಸೆಯಲು ಮೊದಲೇ ನಡೆದಿತ್ತು ಪ್ಲ್ಯಾನ್; ಶಾಕಿಂಗ್ ಮಾಹಿತಿ ಬಹಿರಂಗ

ಕೊವಿಡ್-19 ನಿಯಂತ್ರಣಕ್ಕೆ ಹೊಸ ಅಸ್ತ್ರ; ಲಾಕ್​ಡೌನ್​ ಮಾಡುವ ಬದಲು ಈ ಯೋಜನೆಗೆ ಸಿದ್ಧವಾಗ್ತಿದೆಯಾ ಸರ್ಕಾರ?

(Government Should enforce strict regulations for corona control says Covid-19 Technical Advisory Committee)

Published On - 9:28 am, Sat, 17 April 21

Follow Us
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಎಲ್​ಪಿಜಿ ಬೆಲೆ ಏರಿಕೆ, ಹೋಟೆಲ್​​ಗಳಲ್ಲಿ ತಿಂಡಿಗಳ ಬೆಲೆ ಏರಿಕೆ ಸಾಧ್ಯತೆ
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಮಾರಿ ಹಬ್ಬದಲ್ಲಿ ನೂರಾರು ಕುರಿಗಳ ಬಲಿ, ರಕ್ತ ಹೀರಿದ ಅರ್ಚಕ: ವಿಡಿಯೋ ವೈರಲ್
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಟಿವಿ9 ಎಕ್ಸ್​​ಪೋದಲ್ಲಿ ಹಯಗ್ರೀವ ಯಶಸ್ಸಿನ ಬಗ್ಗೆ ಧನ್ವೀರ್​-ಸಂಜನಾ ಮಾತು
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಶ್ರೀಕೃಷ್ಣನಿಗೆ 16 ಸಾವಿರ ಪತ್ನಿಯರಿದ್ದಿದ್ದು ನಿಜವೇ? ಅಸಲಿಯತ್ತು ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮಾರ್ಚ್ 7 ಶನಿವಾರ, ಇಂದಿನ ದ್ವಾದಶ ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ಬಾರ್ ಮುಂದೆ ಪ್ರತಿಭಟನೆ ವೇಳೆ ಕಲ್ಲು ತೂರಾಟ: ಪೊಲೀಸರಿಗೆ ಗಾಯ
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
ರಸ್ತೆಯಲ್ಲಿ ಮಲಗಿದ್ದ ಹಸುವನ್ನು ತಳ್ಳಿಕೊಂಡು ಹೋದ ಕಾರು
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
GST ಹೊಡೆತ ಬಿದ್ದರೂ ಕರ್ನಾಟಕ 2ನೇ ಸ್ಥಾನ: ರಾಜ್ಯದ ಬೆಳವಣಿಗೆ ಉತ್ತಮ; ಸಿಎಂ
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಮನೆಯ ಮುಂದಿದ್ದ ಮುದ್ದಾದ ನಾಯಿಮರಿಗಳನ್ನು ಎತ್ತಿ ಗೋಡೆಗೆ ಬಡಿದ ಯುವತಿ!
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ
ಕುವೈತ್​​ನ ಯುಎಸ್​ ನೆಲೆಗಳ ಮೇಲೆ ಇರಾನ್​ನಿಂದ ಅರಾಶ್-2 ಡ್ರೋನ್ ದಾಳಿ