AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ

Cauvery water dispute: ತಮಿಳುನಾಡಿಗೆ 5,000 ಕ್ಯೂಸೆಕ್‌ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ನಿರ್ದೇಶನ ನೀಡಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, CWRC ಸಭೆಗಳಿಗೆ ಅಧಿಕಾರಿಗಳು ವರ್ಚುವಲ್ ಮೂಲಕ ಹಾಜರಾದರೆ. ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಯಾವ ಕಾರಣಕ್ಕೂ ತಮಿಳುನಾಡಿಗೆ ನೀರು ಬಿಡಬಾರದು: ಸರ್ಕಾರಕ್ಕೆ ಕುಮಾರಸ್ವಾಮಿ ಆಗ್ರಹ
ಹೆಚ್​ಡಿ ಕುಮಾರಸ್ವಾಮಿ
TV9 Web
| Edited By: |

Updated on: Sep 13, 2023 | 10:09 AM

Share

ಬೆಂಗಳೂರು, (ಸೆಪ್ಟೆಂಬರ್ 13): ತಮಿಳುನಾಡಿಗೆ(tamil nadu) 5,000 ಕ್ಯೂಸೆಕ್‌ ಕಾವೇರಿ ನೀರು(Cauvery water) ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ ನಿರ್ದೇಶನ ನೀಡಿದೆ. ಇದರಿಂದ ರಾಜ್ಯದಲ್ಲಿ ರೈತರ ಆಕ್ರೋಶದ ಭುಗಿಲೆದಿದ್ದು, ಮೈಸೂರು ಮಂಡ್ಯ ಭಾಗದಲ್ಲಿ ಪ್ರತಿಭಟನೆಗಳು ಶುರುವಾಗಿವೆ. ಇನ್ನು ಈ ಬಗ್ಗೆ ಹೆಚ್​ಡಿ ಕುಮಾರಸ್ವಾಮಿ(HD kumaraswamy) ಪ್ರತಿಕ್ರಿಯಿಸಿ, ಯಾವ ಕಾರಣಕ್ಕೂ ರಾಜ್ಯ ಸರ್ಕಾರ ನೀರು ಹರಿಸಬಾರದು ಎಂದು ಸಲಹೆ ನೀಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, CWRC ಸಭೆಗಳಿಗೆ ಅಧಿಕಾರಿಗಳು ವರ್ಚುವಲ್ ಮೂಲಕ ಹಾಜರಾದರೆ. ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ಇಂದು ತುರ್ತು ಸಭೆ ಕರೆದ ಸಿದ್ದರಾಮಯ್ಯ, ಪ್ರತಿಪಕ್ಷಗಳ ನಾಯಕರಿಗೂ ಆಹ್ವಾನ

ಕಾವೇರಿ ಜಲ ನಿಯಂತ್ರಣ ಸಮಿತಿ ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಸರ್ಕಾರ ನೀರು ಹರಿಸಬಾರದು. ತಮಿಳುನಾಡಿಗೆ ಯಾವ ಸಂಕಷ್ಟವೂ ಇಲ್ಲ, ಕರ್ನಾಟಕಕ್ಕಷ್ಟೇ ಸಂಕಷ್ಟವೇ? ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು.ಆ ರಾಜ್ಯ ಎಷ್ಟು ವಿಸ್ತೀರ್ಣದಲ್ಲಿ ಬೆಳೆ ಬೆಳೆಯುತ್ತಿದೆ ಎಂಬ ಬಗ್ಗೆ ಚರ್ಚಿಸಿಲ್ಲ. ಸಮಿತಿಯಲ್ಲಿ ಚರ್ಚಿಸಿಲ್ಲ ಎನ್ನುವುದಕ್ಕೆ ಆ ಸಮಿತಿಯ ಆದೇಶವೇ ಸಾಕ್ಷಿ. ಸಮಿತಿ & ಪ್ರಾಧಿಕಾರದ ಸಭೆಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. CWRC ಸಭೆಗಳಿಗೆ ಅಧಿಕಾರಿಗಳು ವರ್ಚುವಲ್ ಮೂಲಕ ಹಾಜರಾದರೆ. ನೆರೆ ರಾಜ್ಯದವರು ಖುದ್ದು ಹಾಜರಿದ್ದು ಅಂಕಿ-ಅಂಶ ಸಮೇತ ವಾದ ಮಂಡಿಸುತ್ತಾರೆ. ನೆಲ, ಜಲ, ಭಾಷೆ ಬಗ್ಗೆ ತಮಿಳುನಾಡಿನವರಿಗೆ ಇರುವ ಬದ್ಧತೆ ನಮ್ಮವರಿಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಮ್ಮವರಲ್ಲಿ ಉಪೇಕ್ಷೆ, ಉಡಾಫೆ ಹೆಚ್ಚು. ಟ್ರಿಬ್ಯುನಲ್‌ ಆದೇಶ ಉಲ್ಲಂಘಿಸಿರುವ ತಮಿಳುನಾಡು ವಿರುದ್ಧ ಸಮರ್ಥ ವಾದ ಮಂಡಿಸಲು ಏಕೆ ಸಾಧ್ಯವಾಗಿಲ್ಲ? ನೀರಾವರಿ ಪ್ರದೇಶವನ್ನು ನೆರೆರಾಜ್ಯ ಅಕ್ರಮವಾಗಿ ವಿಸ್ತರಣೆ ಮಾಡಿಕೊಂಡಿರುವುದನ್ನು ಹೇಳಲೇಬೇಕಿತ್ತು. ಮೊದಲು ಸಂಕಷ್ಟಸೂತ್ರ ರೂಪಿಸಿ ಎಂದು ಪಟ್ಟು ಹಿಡಿಯಬೇಕಿತ್ತು. ಜಲ ನಿರ್ವಹಣೆ ಪ್ರಾಧಿಕಾರ, ಜಲ ನಿಯಂತ್ರಣ ಸಮಿತಿ ಏನು ಮಾಡುತ್ತಿವೆ? ಟ್ರಿಬ್ಯುನಲ್ ಆದೇಶ ಉಲ್ಲಂಘಿಸಿ, ನೀರಾವರಿ ಪ್ರದೇಶ ಹೆಚ್ಚಿಸಿಕೊಂಡಿರುವ ತಮಿಳುನಾಡು ಬಗ್ಗೆ ಇವುಗಳಿಗೆ ಮಾಹಿತಿ ಇಲ್ಲವೇ? ರಾಜ್ಯಗಳ ನೈಜಸ್ಥಿತಿ ಅರಿಯುವ ಕರ್ತವ್ಯ ಅವುಗಳಿಗೆ ಇಲ್ಲವೇ? ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಎನ್ನುವ ನೀತಿ ಯಾಕೆ? ಎಂದು ಪ್ರಶ್ನಿಸಿದ್ದಾರೆ.

ನಮ್ಮ ರೈತರಿಗೇ ನೀರಿಲ್ಲದಿದ್ದರೂ, ಅವರು ಬೆಳೆಯನ್ನೇ ಬೆಳೆಯದಿದ್ದರೂ ನೀರು ಬಿಡಲು ಸರ್ಕಾರ ಒಪ್ಪಿದೆ. ಈ ವಿಷಯದಲ್ಲಿ ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ. ರೈತರ ತಾಳ್ಮೆಯನ್ನೂ ದುರುಪಯೋಗ ಮಾಡಿಕೊಂಡಿದೆ. ಸುಪ್ರೀಂ ಕೋರ್ಟ್ ಏನು ಹೇಳುತ್ತದೋ ಅಲ್ಲಿಯವರೆಗೆ ಕಾಯಬೇಕಿತ್ತು. ಪ್ರಾಧಿಕಾರ, ಸಮಿತಿ ಹೇಳಿದವೆಂದು ನೀರು ಬಿಟ್ಟಿದ್ದು ತಪ್ಪು ಎಂದಿದ್ದಾರೆ.

ರೈತರ ಬಗ್ಗೆ ಕಾಳಜಿ, ಬೆಂಗಳೂರಿನ ಜನರ ಕುಡಿಯುವ ನೀರಿನ ಬಗ್ಗೆ ಆತಂಕ ಇದ್ದಿದ್ದರೆ ಸರ್ಕಾರ ನೀರು ಹರಿಸುತ್ತಿರಲಿಲ್ಲ. ಬೆಂಗಳೂರಿಗರ ಮೌನ ನನಗೆ ಅಚ್ಚರಿ ತಂದಿದೆ. ನೆರೆ ರಾಜ್ಯಗಳಿಂದ ವಲಸೆ ಬಂದು ನಮ್ಮ ನೆಲ, ಜಲ, ಆರ್ಥಿಕತೆಯ ಆಸರೆಯಲ್ಲಿ ನೆಮ್ಮದಿಯಾಗಿರುವವರು ಕೂಡ ಕಾವೇರಿ ಬಗ್ಗೆ ದನಿ ಎತ್ತಬೇಕು. ಇವರಾರಿಗೂ ಕಾವೇರಿ ನೀರಿನ ಚಿಂತೆಯೇ ಇಲ್ಲ. ಸರ್ಕಾರ ಹೆಜ್ಜೆಹೆಜ್ಜೆಗೂ ಎಡವಿದೆ. ತಮಿಳುನಾಡು ಸುಪ್ರೀಂ ಕೋರ್ಟಿಗೆ ಅರ್ಜಿ ಹಾಕಿದಾಕ್ಷಣ ರಾಜ್ಯ ಸರಕಾರವೂ ತಕ್ಷಣವೇ ಆಕ್ಷೇಪ ಸಲ್ಲಿಸಬೇಕಿತ್ತು. ವಾಸ್ತವ ಸ್ಥಿತಿಯ ಬಗ್ಗೆ ದಾಖಲೆಗಳನ್ನು ಒದಗಿಸಿ, ಸಮರ್ಥವಾಗಿ ಎದುರಿಸಬೇಕಿತ್ತು. ಕಾಲಹರಣ ಮಾಡಿದ್ದಲ್ಲದೆ, ಈಗ ಕಾವೇರಿ ಬಗ್ಗೆ ಮೊಸಳೆ ಕಣ್ಣೀರು ಹಾಕಿದರೆ ಕನ್ನಡಿಗರು ನಂಬಬೇಕಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ