AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆಗಿಲ್ಲ ಕಡಿವಾಣ, ಗೃಹ ಇಲಾಖೆಯಲ್ಲೇ ಫೈಲ್ ಪೆಂಡಿಂಗ್

ಬೆಂಗಳೂರು: ಕೊರೊನಾ ವಾರಿಯರ್ಸ್‌ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ತಡೆಯಲು ತಂದಿರುವ ಸುಗ್ರೀವಾಜ್ಞೆಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಕಾಯ್ದೆಗೆ ರಾಜ್ಯಪಾಲರ ಅಂಕಿತ ಬಿದ್ದರೂ ಗ್ರೀನ್‌ಸಿಗ್ನಲ್ ಸಿಕ್ಕಿಲ್ಲ. ಕಾಯಿದೆ ಅನುಷ್ಠಾನ ಮಾಡುವ ಸಂಬಂಧ ಗೃಹ ಇಲಾಖೆಯಿಂದ ಇನ್ನೂ ಸ್ಪಷ್ಟ ಸಂದೇಶ ರವಾನೆಯಾಗಿಲ್ಲ. ಕಳೆದ ವಾರ ರಾಜ್ಯಪಾಲರಿಂದ ಅಂಕಿತ ಪಡೆದಿರುವ ಸುಗ್ರೀವಾಜ್ಞೆಯಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ ಮತ್ತು ಹಲ್ಲೆಗೆ ಯತ್ನಿಸಿದವರಿಗೆ ಶಿಕ್ಷೆ ನೀಡುವ ಅಧಿಕಾರವನ್ನು ನೀಡಲಾಗಿತ್ತು. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದ ದಿನವೇ ಕೇಂದ್ರ […]

ಕೊರೊನಾ ವಾರಿಯರ್ಸ್ ಮೇಲಿನ ಹಲ್ಲೆಗಿಲ್ಲ ಕಡಿವಾಣ, ಗೃಹ ಇಲಾಖೆಯಲ್ಲೇ ಫೈಲ್ ಪೆಂಡಿಂಗ್
ಸಾಧು ಶ್ರೀನಾಥ್​
|

Updated on:Apr 30, 2020 | 12:13 PM

Share

ಬೆಂಗಳೂರು: ಕೊರೊನಾ ವಾರಿಯರ್ಸ್‌ ಮೇಲಿನ ಹಲ್ಲೆ ವಿಚಾರಕ್ಕೆ ಸಂಬಂಧಿಸಿದಂತೆ ಹಲ್ಲೆ ತಡೆಯಲು ತಂದಿರುವ ಸುಗ್ರೀವಾಜ್ಞೆಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಕಾಯ್ದೆಗೆ ರಾಜ್ಯಪಾಲರ ಅಂಕಿತ ಬಿದ್ದರೂ ಗ್ರೀನ್‌ಸಿಗ್ನಲ್ ಸಿಕ್ಕಿಲ್ಲ. ಕಾಯಿದೆ ಅನುಷ್ಠಾನ ಮಾಡುವ ಸಂಬಂಧ ಗೃಹ ಇಲಾಖೆಯಿಂದ ಇನ್ನೂ ಸ್ಪಷ್ಟ ಸಂದೇಶ ರವಾನೆಯಾಗಿಲ್ಲ.

ಕಳೆದ ವಾರ ರಾಜ್ಯಪಾಲರಿಂದ ಅಂಕಿತ ಪಡೆದಿರುವ ಸುಗ್ರೀವಾಜ್ಞೆಯಲ್ಲಿ ಕೊರೊನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ ಮತ್ತು ಹಲ್ಲೆಗೆ ಯತ್ನಿಸಿದವರಿಗೆ ಶಿಕ್ಷೆ ನೀಡುವ ಅಧಿಕಾರವನ್ನು ನೀಡಲಾಗಿತ್ತು. ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಜಾರಿ ಮಾಡಿದ ದಿನವೇ ಕೇಂದ್ರ ಸರ್ಕಾರದಿಂದಲೂ ಸುಗ್ರೀವಾಜ್ಞೆ ಜಾರಿಯಾಗಿತ್ತು. ಆದರೆ ಅದನ್ನು ಗೃಹ ಇಲಾಖೆ ಇನ್ನೂ ಅನುಷ್ಠಾನಕ್ಕೆ ತಂದಿಲ್ಲ.

ಅಲ್ಲದೆ ರಾಜ್ಯದ ಸುಗ್ರೀವಾಜ್ಞೆಯಲ್ಲಿ ದಾಳಿ ಮಾಡುವವರಿಗೆ 3 ವರ್ಷದವರೆಗೆ ಶಿಕ್ಷಿಸುವ ಬಗ್ಗೆ ಉಲ್ಲೇಖಿಸಲಾಗಿದೆ. ಆದರೆ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯಲ್ಲಿ ಶಿಕ್ಷೆಯನ್ನು 7 ವರ್ಷಕ್ಕೆ ತರಲಾಗಿದೆ. ಹೀಗಾಗಿ ಯಾವ ನಿಯಮ ಅನ್ವಯವಾಗುತ್ತೆ ಎಂಬ ಗೊಂದಲ ಹೆಚ್ಚಾಗಿದೆ.

ಕೇಂದ್ರ ಸರ್ಕಾರದ ಸುಗ್ರೀವಾಜ್ಞೆ ಇಡೀ ದೇಶಕ್ಕೆ ಅನ್ವಯವಾಗೋದ್ರಿಂದ ಕಾಯಿದೆಯ ಅನುಷ್ಠಾನಕ್ಕೆ ಗೊಂದಲ ಉಂಟಾಗಿದೆ. ಕೇಂದ್ರದ ಸುಗ್ರೀವಾಜ್ಞೆಯ ನಿಯಮಗಳಿಗೆ ರಾಜ್ಯ ಗೃಹ ಇಲಾಖೆ ಕಾಯುತ್ತಿದೆ. ಕೇಂದ್ರದ ಸುಗ್ರೀವಾಜ್ಞೆಯೇ ಅಂತಿಮವಾಗಿರುವುದರಿಂದ ರಾಜ್ಯದ ಸುಗ್ರೀವಾಜ್ಞೆಯ ಕೆಲವು ಅಂಶಗಳು ಮಾತ್ರ ಅನುಷ್ಠಾನವಾಗುವ ಸಾಧ್ಯತೆ ಇದೆ.

ಕೇಂದ್ರದ ಸುಗ್ರೀವಾಜ್ಞೆಯಲ್ಲಿರುವ ಪ್ರಮುಖ ಅಂಶಗಳು ಮತ್ತು ರಾಜ್ಯದ ಸುಗ್ರೀವಾಜ್ಞೆಯಲ್ಲಿರುವ ಪ್ರಮುಖ ಅಂಶಗಳನ್ನು ಗುರುತಿಸುವಲ್ಲಿ ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿದೆ. ಅಲ್ಲದೆ ಕೇಂದ್ರ ಸರ್ಕಾರದ ಸುಗ್ರೀವಾಜ್ಞೆಯ ಅಂಶಗಳು ಉತ್ತಮವಾಗಿದ್ದರೆ ಅದನ್ನೇ ರಾಜ್ಯ ಸರಕಾರ ಪಾಲಿಸಬೇಕಿದೆ. ಹೀಗಾಗಿ ಸುಗ್ರೀವಾಜ್ಞೆಯ ಅನುಷ್ಠಾನದಲ್ಲಿ ವಿಳಂಬವಾಗಿದೆ.

ಕಾಯಿದೆ ಅನುಷ್ಠಾನ ವಿಳಂಬ ಹಿನ್ನೆಲೆಯಲ್ಲಿ ತನಿಖಾಧಿಕಾರಿಗಳು ಹಳೆಯ ಕಲಂಗಳ ಪ್ರಕಾರವೇ ಕೇಸ್​ಗಳನ್ನು ದಾಖಲು ಮಾಡಿಕೊಳ್ಳುತ್ತಿದ್ದಾರೆ. ಇಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆಸುವ ಸಾಧ್ಯತೆ ಇದೆ. ಯಾವ ಸುಗ್ರೀವಾಜ್ಞೆಯ ಪ್ರಕಾರ ಸರ್ಕಾರ ಕ್ರಮ ಜರುಗಿಸಬೇಕು ಎಂಬ ಕುರಿತು ಚರ್ಚೆ ಮಾಡಲಿದ್ದಾರೆ.

Published On - 11:37 am, Thu, 30 April 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!