Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ

ವಕ್ಫ್​ ಆಸ್ತಿ ವಿವಾದ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್​ ಆಕ್ರೋಗಳು ಭುಗಿಲೆದ್ದಿವೆ. ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಜಮೀರ್ ಅಹಮ್ಮದ್ ಗುರಿಯಾಗಿದ್ದಾರೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಮುಜುಗರಕ್ಕೀಡಾಗಿದ್ದಾರೆ. ಇದರ ಮಧ್ಯ ಜಮೀರ್​​ ಅಹಮ್ಮದ್ ಅವರಿಗೆ ರಾಜ್ಯಪಾಲರು ಬಿಗ್ ಶಾಕ್ ಕೊಟ್ಟಿದ್ದಾರೆ.

ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ
ಥಾವರ್ ಚೆಂದ್ ಗೆಹ್ಲೋಟ್, ಜಮೀರ್ ಅಹಮ್ಮದ್ ಖಾನ್
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2024 | 5:36 PM

ಬೆಂಗಳೂರು, (ನವೆಂಬರ್ 10): ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ (Karnataka Highcourt) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.

ಜಮೀರ್ ಅಹಮ್ಮದ್ ಖಾನ್ ಅವರು  ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು