ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ

ವಕ್ಫ್​ ಆಸ್ತಿ ವಿವಾದ ಸಂಬಂಧ ಸಚಿವ ಜಮೀರ್ ಅಹಮ್ಮದ್ ಖಾನ್​ ಆಕ್ರೋಗಳು ಭುಗಿಲೆದ್ದಿವೆ. ವಿಪಕ್ಷಗಳು ಮಾತ್ರವಲ್ಲ ಸ್ವಪಕ್ಷದ ನಾಯಕರ ಕೆಂಗಣ್ಣಿಗೆ ಜಮೀರ್ ಅಹಮ್ಮದ್ ಗುರಿಯಾಗಿದ್ದಾರೆ. ಇದರಿಂದ ಜಮೀರ್ ಅಹಮ್ಮದ್ ಖಾನ್ ಮುಜುಗರಕ್ಕೀಡಾಗಿದ್ದಾರೆ. ಇದರ ಮಧ್ಯ ಜಮೀರ್​​ ಅಹಮ್ಮದ್ ಅವರಿಗೆ ರಾಜ್ಯಪಾಲರು ಬಿಗ್ ಶಾಕ್ ಕೊಟ್ಟಿದ್ದಾರೆ.

ಸಿಎಂ ಬಳಿಕ ಸಚಿವ ಜಮೀರ್ ಅಹಮ್ಮದ್ ಖಾನ್ ಬಿಗ್ ಶಾಕ್ ಕೊಟ್ಟ ರಾಜ್ಯಪಾಲ
ಥಾವರ್ ಚೆಂದ್ ಗೆಹ್ಲೋಟ್, ಜಮೀರ್ ಅಹಮ್ಮದ್ ಖಾನ್
Follow us
ಪ್ರಸನ್ನ ಗಾಂವ್ಕರ್​
| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2024 | 5:36 PM

ಬೆಂಗಳೂರು, (ನವೆಂಬರ್ 10): ಮುಡಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್​ ಆದೇಶದ ಬಗ್ಗೆ ಮಾತನಾಡಿದ್ದ ಸಚಿವ ಜಮೀರ್ ಅಹಮ್ಮದ್ ಖಾನ್ ಇದೀಗ ಸಂಕಷ್ಟ ಎದುರಾಗಿದೆ. ಮುಡಾ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್‌ (Karnataka Highcourt) ನೀಡಿದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ನ್ಯಾಯಾಂಗ ನಿಂದನೆ ಆರೋಪ ಎದುರಿಸುತ್ತಿರುವ ಜಮೀರ್‌ ಅಹ್ಮದ್‌ ಖಾನ್‌ (Zameer Ahmed Khan) ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯಾಪಾಲರ ಥಾವರ್ ಚೆಂದ್ ಗೆಹ್ಲೋಟ್ ಅವರು ಸರ್ಕಾರದ ಅಡ್ವೋಕೇಟ್ ಜನರಲ್ ಗೆ ಸೂಚನೆ ನೀಡಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಾಹಮ್ ದೂರಿನ ಮೇರೆಗೆ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ಸಂಬಂಧ ಅಡ್ವೋಕೇಟ್ ಜನರಲ್‌ಗೆ ರಾಜ್ಯಪಾಲರು ಪತ್ರ ಬರೆದಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ತಿಂಗಳು ಕಳೆದರೂ ಜಮೀರ್ ವಿರುದ್ಧ ಕ್ರಮಕ್ಕೆ ಮುಂದಾಗದ ಎಜಿಯನ್ನು ವಜಾ ಮಾಡಬೇಕು: ಅಬ್ರಹಾಂ

ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಟಿಜೆ ಅಬ್ರಾಹಮ್ ರಾಜ್ಯಪಾಲರಿಗೆ ದೂರು ನೀಡಿದ್ದರು. ಬಳಿಕ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ತನಿಗೆ ಅನುಮತಿ ನೀಡಿದ್ದರು. ಇದನ್ನು ಪ್ರಶ್ನಿಸಿ ಸಿಎಂ, ಕೋರ್ಟ್​ ಮೆಟ್ಟಿಲೇರಿದ್ದರು. ಆದ್ರೆ, ಹೈಕೋರ್ಟ್​ ಸಿಎಂ ವಿರುದ್ಧದ ತನಿಖೆಗೆ ಆದೇಶಿಸಿತ್ತು. ಈ ತೀರ್ಪನ್ನು ಜಮೀರ್ ಅಹಮ್ಮದ್ ಖಾನ್, ರಾಜಕೀಯ ಪ್ರೇರಿತವಾಗಿದ್ದು, ಅದೊಂದು ರಾಜಕೀಯ ತೀರ್ಪು ಎಂದು ಹೇಳಿದ್ದರು. ಆ ಹಿನ್ನೆಲೆಯಲ್ಲಿ ಮುಡಾ ದೂರುದಾರರಲ್ಲೊಬ್ಬರಾದ ಟಿ.ಜೆ. ಅಬ್ರಹಾಂ ಅವರು ಜಮೀರ್ ಅವರ ವಿರುದ್ಧ ನ್ಯಾಯಾಂಗ ನಿಂದನೆ ಕೇಸ್ ದಾಖಲಿಸಿ ಪಾಠ ಕಲಿಸುವುದಾಗಿ ಹೇಳಿದ್ದರು.

ಜಮೀರ್ ಅಹಮ್ಮದ್ ಖಾನ್ ಅವರು  ಈ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಅಲ್ಲದೇ ಜಮೀರ್ ಅಹಮ್ಮದ್ ಖಾನ್ ಅವರು ನ್ಯಾಯಾಂಗ ನಿಂದನೆ ಮಾಡಿದ್ದಾರೆ ಎಂದು ಅಬ್ರಾಹಂ ಕಿಡಿಕಾರಿದ್ದರು. ಮತ್ತೊಂದು ಹೆಜ್ಜೆ ಮುಂದೆ ಹೋಗಿ ಜಮೀರ್ ಅಹಮ್ಮದ್ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದರು. ಇದೀಗ ಈ ದೂರಿನ ಮೇರೆಗೆ ರಾಜ್ಯಪಾಲರು ಜಮೀರ್ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್