AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್

ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಈಗಾಗಲೇ ಉಪಚುನಾವಣೆ ಘೋಷಣೆಯಾಗಿದ್ದು, ಇದೇ ನವೆಂಬರ್ 13ರಂದು ಮತದಾನ ನಡೆಯಲಿದೆ. ಹೀಗಾಗಿ ಕಾಂಗ್ರೆಸ್, ಬಿಜೆಪಿ-ಜೆಡಿಎಸ್​ ನಾಯಕರು ತಮ್ಮ ಅಭ್ಯರ್ಥಿ ಗೆಲುವಿಗಾಗಿ ಕಾಲಿಗೆ ಚಕ್ರಕಟ್ಟಿಕೊಂಡವಂತೆ ಹಳ್ಳಿ ಹಳ್ಳಿಗಳಲ್ಲಿ ಸುತ್ತಾಡುತ್ತಿದ್ದಾರೆ. ಇದರ ಮಧ್ಯ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರು ಸಿದ್ದರಾಮಯ್ಯ ಸರ್ಕಾರ ಪತನಗೊಳ್ಳುವ ಬಗ್ಗೆ ಹೊಸ ಬಾಂಬ್ ಸಿಡಿಸಿದ್ದಾರೆ. ಈ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

ಉಪಚುನಾವಣೆ ಬಳಿಕ ರಾಜ್ಯದಲ್ಲಿ ರಾಜ್ಯಪಾಲರ ಆಳ್ವಿಕೆ ಜಾರಿ: ಕುಮಾರಸ್ವಾಮಿ ಬಾಂಬ್
ಎಚ್​ಡಿ ಕುಮಾರಸ್ವಾಮಿ
ರಾಮ್​, ಮೈಸೂರು
| Edited By: |

Updated on: Oct 30, 2024 | 8:17 PM

Share

ರಾಮನಗರ, (ಅಕ್ಟೋಬರ್ 30): 2028ರ ವರೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆಯಲ್ಲ, ಮತ್ತೆ ನಾನೇ ಈ ರಾಜ್ಯದ ಮುಖ್ಯಮಂತ್ರಿಯಾಗಲಿದ್ದೇನೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಭವಿಷ್ಯ ನುಡಿದಿದ್ದರು. ಈ ಹೇಳಿಕೆ ಕಾಂಗ್ರೆಸ್​​ನಲ್ಲಿ ಮಾತ್ರವಲ್ಲದೇ ಕರ್ನಾಟಕ ಬಿಜೆಪಿಯಲಲ್ಲೂ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಇದೀಗ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆಯಲ್ಲಿ ಜೆಡಿಎಸ್​​-ಬಿಜೆಪಿ ಮೈತ್ರಿ ಗೆದ್ದರೆ ಈ ಸರ್ಕಾರ ಇರುವುದಿಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್(ರಾಜ್ಯಪಾಲ) ಆಳ್ವಿಕೆ ಜಾರಿಯಾಗಬಹುದು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ರಾಮನಗರ ಜಿಲ್ಲೆ ಚನ್ನಪಟ್ಟಣದಲ್ಲಿ ನಡೆದ ಬಿಜೆಪಿ, ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಕುಮಾರಸ್ವಾಮಿ, ಉಪಚುನಾವಣೆಯಲ್ಲಿ ನಾವು 3 ಕ್ಷೇತ್ರ ಗೆದ್ದರೆ ಈ ಸರ್ಕಾರ ಉಳಿಯಲ್ಲ. ಉಪಚುನಾವಣೆ ಬಳಿಕ ರಾಜ್ಯದಲ್ಲಿ ಗವರ್ನರ್ ಆಳ್ವಿಕೆ ಜಾರಿಯಾಗಬಹುದು. ರಾಜ್ಯದಲ್ಲಿ ಮುಂದೆ ಏನು ಆಗುತ್ತದೆ ಅನ್ನೋದು ದೇವರ ಇಚ್ಛೆ ಎಂದು ಹೇಳಿದರು.

ಇದನ್ನೂ ಓದಿ: ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಶಕ್ತಿ ಯೋಜನೆ ಸ್ಥಗಿತ? ಡಿಕೆ ಶಿವಕುಮಾರ್​ ಸುಳಿವು

ಮೋದಿ ಸರ್ಕಾರವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್ ಪ್ರಯತ್ನ ಮಾಡುತ್ತಿದೆ. ಪ್ರಧಾನಿ ಮೋದಿಗಾಗಿ ನಾವು ಮೂರು ಕ್ಷೇತ್ರಗಳಲ್ಲಿ ಗೆಲ್ಲಬೇಕು. ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಮೇಲೆ ನಂಬಿಕೆ ಇದೆ ಮೋದಿ ದೇವೇಗೌಡರ ನಾಯಕತ್ವಕ್ಕೆ ಬೆಂಬಲ ಸಿಗಲಿದೆ ಅನ್ನೋ ವಿಶ್ವಾಸ ಇದೆ. ಯಡಿಯೂರಪ್ಪ ಹಬ್ಬ ಮುಗಿದ ಮೇಲೆ ಪ್ರಚಾರಕ್ಕೆ ಬರಲಿದ್ದಾರೆ. ಬಿಜೆಪಿ ಜೆಡಿಎಸ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಸ್ಪಷ್ಟಪಸಿದರು.

ಬಿಜೆಪಿ ಜೆಡಿಎಸ್ ಸಂಬಂಧ ಅಧಿಕಾರಕ್ಕಾಗಿ ಅಲ್ಲ. ಇದು ರಾಜ್ಯದ ಅಭಿವೃದ್ಧಿಗಾಗಿ ಆಗಿರುವುದು. ಬಿಜೆಪಿ ಜೆಡಿಎಸ್ ನಡುವೆ ಉತ್ತಮ ಬಾಂಧವ್ಯ ಇದೆ. ಬಿಜೆಪಿ ಜೆಡಿಎಸ್ ಅಣ್ಣ ತಮ್ಮಂದಿರಂತೆ ಇದ್ದೇವೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯಲು ನಮ್ಮ ಮೈತ್ರಿ. ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಅಭ್ಯರ್ಥಿ ಅಲ್ಲ ಎನ್​ಡಿಎ ಅಭ್ಯರ್ಥಿ ಎಂದು ಹೇಳಿದರು.

ಕರ್ನಾಟಕ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ