Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಚಳಿಗಾಲದ ಅಧಿವೇಶ: ಬಿಜೆಪಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಕಾಂಗ್ರೆಸ್, ಎಲ್ಲರ ಚಿತ್ತ ರಾಜ್ಯಪಾಲರತ್ತ

belagavi winter session 2024: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಸಲು ರಾಜ್ಯಪಾಲ ಥಾವರ್ ಸಿಂಗ್ ಗೆಹ್ಲೋಟ್​ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದ್ರೆ, ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ತೀವ್ರ ಕುತೂಹಲ ಮೂಡಿಸಿದೆ. ಹಾಗಾದ್ರೆ, ಅಧಿವೇಶನ ಎಲ್ಲಿಂದ ಎಲ್ಲಿಯವರೆಗೆ ನಡೆಯಲಿದೆ ಎನ್ನುವ ವಿವರ ಇಲ್ಲಿದೆ.

ಬೆಳಗಾವಿ ಚಳಿಗಾಲದ ಅಧಿವೇಶ: ಬಿಜೆಪಿ ಅಸ್ತ್ರಕ್ಕೆ ಪ್ರತ್ಯಾಸ್ತ್ರ ಹೂಡಿದ ಕಾಂಗ್ರೆಸ್, ಎಲ್ಲರ ಚಿತ್ತ ರಾಜ್ಯಪಾಲರತ್ತ
Follow us
ರಮೇಶ್ ಬಿ. ಜವಳಗೇರಾ
| Updated By: Digi Tech Desk

Updated on:Nov 19, 2024 | 4:07 PM

ಬೆಂಗಳೂರು, (ನವೆಂಬರ್ 19): ಬೆಳಗಾವಿಯಲ್ಲಿ ( ನಡೆಯಲಿರುವ ಚಳಿಗಾಲದ ಅಧಿವೇಶನಕ್ಕೆ (Belagavi) Winter Session) ದಿನಾಂಕ ನಿಗದಿಯಾಗಿದೆ. ಡಿಸೆಂಬರ್ 9 ರಿಂದ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನ ಡಿ.20ವರೆಗೆ ನಡೆಯಲಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯು ಅಧಿವೇಶನ ಕರೆಯುವ ಸಂಬಂಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‍ ಅವರಿಗೆ ಕಡತ ರವಾನಿಸಿದ್ದು, ರಾಜ್ಯಪಾಲರು ಇಂದು(ನವೆಂಬರ್ 19) ಒಪ್ಪಿಗೆ ಸೂಚಿಸಿದ್ದಾರೆ.

ಇತ್ತೀಚೆಗೆ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ್ದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಮತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಅಧಿಕಾರಿಗಳ ಸಭೆ ನಡೆಸಿದ್ದರು. ಅಲ್ಲದೆ, ಅಧಿವೇಶನ ನಡೆಸಲು ಅಗತ್ಯವಾದ ಸಿದ್ಧತೆಗಳನ್ನು ಮಾಡುವಂತೆ ಸೂಚನೆ ನೀಡಿದ್ದರು. ಇದೀಗ ರಾಜ್ಯಪಾಲರ ಸಹ ಅಧಿವೇಶನಕ್ಕೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಆದ್ರೆ, ಅವರ ಭಾಷಣ ಈ ಬಾರಿ ಮಹತ್ವ ಪಡೆದುಕೊಳ್ಳಲಿದೆ. ಯಾಕಂದ್ರೆ ರಾಜ್ಯಪಾಲರು ಮತ್ತು ಸರ್ಕಾರದ ನಡುವೆ ಮುಡಾ ಸೇರಿದಂತೆ ಕೆಲ ವಿಚಾರಗಳಲ್ಲಿ ಸಂಘರ್ಷ ಏರ್ಪಟ್ಟಿತ್ತು. ಹಾಗೇ ಸರ್ಕಾರದ ವಿರುದ್ಧ ವಿರೋಧ ಪಕ್ಷ ಕೆಲ ದೂರುಗಳನ್ನು ನೀಡಿದೆ. ಇದರಿಂದ ಬೆಳಗಾವಿ ಚಳಿಗಾಲದ ಅಧಿವೇಶದಲ್ಲಿ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಏನೆಲ್ಲಾ ಹೇಳಲಿದ್ದಾರೆ ಎನ್ನುವುದು ಕುತೂಹಲ.

ಇದನ್ನೂ ಓದಿ: ಶಾಸಕರನ್ನು ವಿಶ್ವಾಸದಲ್ಲಿಟ್ಟುಕೊಳ್ಳುವಂತೆ ಸಚಿವರಿಗೆ ಸಿಎಂ ಟಾಸ್ಕ್, ಸರ್ಕಾರಕ್ಕೆ ಇದ್ಯಾ ಆಪರೇಷನ್ ಕಮಲ ಭೀತಿ?

ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಸನ್ನದ್ಧ

ಇನ್ನು ಬೆಳಗಾವಿ ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​ ಸನ್ನದ್ಧವಾಗಿವೆ. ಈಗಾಗಲೇ ಸಾಲು ಸಾಲು ಆರೋಪಗಳನ್ನು ಮಾಡಿರುವ ವಿಪಕ್ಷಗಳು ಅವುಗಳನ್ನೇ ಅಸ್ತ್ರವಾಗಿ ಮಾಡಿಕೊಂಡು ಸದನದಲ್ಲಿ ಧ್ವನಿ ಎತ್ತಲಿವೆ. ಮುಡಾ ಹಾಗೂ ವಾಲ್ಮೀಕಿ ಹಗರಣ ಈಗಾಗಲೇ ಕಳೆದ ಮುಂಗಾರು ಅಧಿವೇಶನದಲ್ಲಿ ಚರ್ಚೆಯಾಗಿದೆ. ಈಗ ಹೊಸದಾಗಿ ವಕ್ಫ್​ ವಿವಾದ, ಬಿಪಿಎಲ್ ಕಾರ್ಡ್​ ರದ್ದು ಸೇರಿದಂತೆ ಇತರೆ ಅಂಶಗಳನ್ನು ಮುಂದಿಟ್ಟುಕೊಂಡು ಸದನದಲ್ಲಿ ಆರ್ಭಟಿಸಲು ಸಜ್ಜಾಗಿದೆ.

ವಿಪಕ್ಷಗಳಿಗೆ ತಿರುಗೇಟು ಕೊಡಲು ಸರ್ಕಾರ ಸಿದ್ಧ

ಈಗಾಗಲೇ ಸರ್ಕಾರದ ವಿರುದ್ಧ ಸಾಲು ಸಾಲು ಆರೋಪ ಮಾಡಿರುವ ಬಿಜೆಪಿ, ಸದನದಲ್ಲೂ ಧ್ವನಿ ಎತ್ತುವುದು ಖಚಿತ ಎಂದು ಗೊತ್ತಾಗುತ್ತಿದ್ದಂತೆಯೇ ಇತ್ತ ಸಿಎಂ ಸಿದ್ದರಾಮಯ್ಯ ಎಚ್ಚೆತ್ತುಕೊಂಡಿದ್ದಾರೆ. ಈ ಸಂಬಂಧ ನಿನ್ನೆ (ನವೆಂಬರ್ 18) ಹಿರಿಯ ಸಚಿವ ಜೊತೆ ಮಹತ್ವದ ಸಭೆ ನಡೆಸಿದ್ದು, ವಿಪಕ್ಷಗಳಿಗೆ ಹೇಗೆಲ್ಲಾ ತಿರುಗೇಟು ನೀಡಬೇಕೆನ್ನುವ ಬಗ್ಗೆ ಸಚಿವರಿಗೆ ಪಾಠ ಮಾಡಿದ್ದಾರೆ. ಅಲ್ಲದೇ ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ಬಿಪಿಎಲ್ ಕಾರ್ಡ್​ ಗೊಂದಲ ಬೇಗ ಬಗೆಹರಿಸುವಂತೆ ಸಚಿವ ಮುನಿಯಪ್ಪ ಅವರಿಗೆ ಖಡಕ್ ಸೂಚನೆ ನೀಡಿದ್ದಾರೆ.

ಇನ್ನು ಸರ್ಕಾರ ವಿರುದ್ಧ ಹಗರಣ ಬಗ್ಗೆ ಬಿಜೆಪಿ ಧ್ವನಿ ಎತ್ತಿದರೆ ಇದಕ್ಕೆ ಪ್ರತಿಯಾಗಿ ಕೋವಿಡ್ ಹಗರಣವನ್ನು ಎತ್ತಲು ಸರ್ಕಾರ ಮುಂದಾಗಿದೆ. ಹೀಗೆ ವಿಪಕ್ಷಗಳ ಆರೋಪಗಳಿಗೆ ತಕ್ಕನಾಗಿ ತಿರುಗೇಟು ನೀಡಲು ಸಿದ್ದರಾಮಯ್ಯ ಸರ್ಕಾರ ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಲುತ್ತಿದೆ.

ಹೀಗಾಗಿ ಈ ಬಾರಿ ಚಳಿಗಾಲದ ಅಧಿವೇಶನ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಸದನ ಕೋಲಾಹಲವಾಗುವುದರಲ್ಲಿ ಅನುಮಾನವೇ ಇಲ್ಲ. ಇನ್ನು ಪ್ರಮುಖವಾಗಿ ಉತ್ತರ ಕರ್ನಾಟದ ಸಮಸ್ಯೆ ಬಗ್ಗೆ ಚರ್ಚೆ ಮಾಡಲು ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನ ನಡೆಸಲಾಗುತ್ತದೆ ಎಂದು ಈಗಾಗಲೇ ಸ್ಪೀಕರ್​ ಹೇಳಿದ್ದಾರೆ. ಆದ್ರೆ, ಸರ್ಕಾರ ಮತ್ತು ವಿಪಕ್ಷಗಳ ಆರೋಪ-ಪ್ರತ್ಯಾರೋಪ ಮಧ್ಯ ಎಷ್ಟರಮಟ್ಟಿಗೆ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗುತ್ತವೆ ಎನ್ನುವುದನ್ನು ಕಾದುನೋಡಬೇಕಿದೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:34 pm, Tue, 19 November 24

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಡೀಸೆಲ್ ಬೆಲೆ ಹೆಚ್ಚಳದಿಂದ ಹಲವಾರು ವಸ್ತುಗಳ ಬೆಲೆ ಜಾಸ್ತಿಯಾಗುತ್ತದೆ: ಅಶೋಕ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ