AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಡಿಪಿಆರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ ಸರ್ಕಾರ

Corona Warriors: 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿರುವುದು ಮಹತ್ವದ ತೀರ್ಮಾನವಾಗಿದೆ.

ಆರ್​ಡಿಪಿಆರ್, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿದ ಸರ್ಕಾರ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 02, 2021 | 8:33 PM

Share

ಬೆಂಗಳೂರು: ಆರ್​ಡಿಪಿಆರ್​ನ ಎಲ್ಲಾ ಸಿಬ್ಬಂದಿ, ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್​ ಇಲಾಖೆ ಸಿಬ್ಬಂದಿಗಳನ್ನು ಕೊರೊನಾ ವಾರಿಯರ್ಸ್ ಎಂದು ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. 2020ರ ಏಪ್ರಿಲ್ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ನೀಡಲಾಗಿರುವುದು ಮಹತ್ವದ ತೀರ್ಮಾನವಾಗಿದೆ.

ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರನ್ನು ಕೊವಿಡ್ ವಾರಿಯರ್ಸ್ ಎಂದು ಪರಿಗಣಿಸಿ ಆದ್ಯತೆ ಮೇರೆಗೆ ಮೊದಲ ಡೋಸ್​ ಕೊವಿಡ್ ಲಸಿಕೆ ನೀಡುವಂತೆ ಮಾಜಿ ಸಿಎಂ ಯಡಿಯೂರಪ್ಪ ಸೂಚನೆ ನೀಡಿದ್ದರು. ಈ ಕುರಿತು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್​ ಅವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚನೆ ನೀಡಿದ್ದು, ಸಚಿವ ಕೋಟ ಶ್ರೀನಿವಾಸ ಪೂಜಾರಿ ಸಿಎಂಗೆ ಪತ್ರ ಬರೆದು ಮನವಿ ಮಾಡಿದ್ದರು. ಈ ಮೂಲಕ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಮನವಿಯನ್ನು ಸಿಎಂ ಯಡಿಯೂರಪ್ಪ ಪುರಸ್ಕರಿಸಿದಂತಾಗಿತ್ತು.

ಶಿಕ್ಷಕರನ್ನು ಫ್ರಂಟ್ ಲೈನ್ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ, ವಿಮಾ ಸೌಲಭ್ಯದೊಂದಿಗೆ ಆದೇಶ ಹೊರಡಿಸಬೇಕು. ಕೊರೊನಾ ವಾರಿಯರ್ಸ್ ಸಹಿತವಾಗಿ ಕೊವಿಡ್​ನಿಂದ ಮೃತಪಟ್ಟ ಎಲ್ಲಾ ಶಿಕ್ಷಕರಿಗೂ ಪರಿಹಾರ ಒದಗಿಸಲು ಪ್ರಯತ್ನಿಸಬೇಕು. ಕೊವಿಡ್ ಕರ್ತವ್ಯಕ್ಕೆ ನಿಯೋಜಿಸುವಾಗ 50 ವರ್ಷಕ್ಕಿಂತ ಹೆಚ್ಚು ವಯಸ್ಸಿನ, ಗಂಭೀರ ಖಾಯಿಲೆ ಉಳ್ಳ, ಗರ್ಭಿಣಿ/ ಚಿಕ್ಕ ಮಕ್ಕಳುಳ್ಳ ಶಿಕ್ಷಕಿಯರನ್ನು ಹೊರತುಪಡಿಸಿ ಕರ್ತವ್ಯಕ್ಕೆ ನಿಯೋಜನೆ ಮಾಡಬೇಕು. ಕೊವಿಡ್ ಕರ್ತವ್ಯಕ್ಕೆ ನಿಯೋಜನೆ ಮಾಡಲ್ಪಟ್ಟ ಶಿಕ್ಷಕರಿಗೆ ಅಗತ್ಯ ಸುರಕ್ಷಾ ಪರಿಕರಗಳನ್ನು ಒದಗಿಸಬೇಕು. ಮತ್ತು ವಾಸವಿರುವ ಸ್ಥಳದಲ್ಲಿಯೇ ನಿಯೋಜಿಸಬೇಕು ಎಂದು ಈ ಮೊದಲು ಆಗ್ರಹ ಕೇಳಿಬಂದಿತ್ತು.

ಕೊವಿಡ್ ಆರ್ಥಿಕ ಸಂಕಷ್ಟ ಹಿನ್ನೆಲೆಯಲ್ಲಿ ಖಾಸಗಿ ಶಾಲಾ ಶಿಕ್ಷಕರು ಕೊವಿಡ್ ನಿಂದ ಆರ್ಥಿಕ ಸಂಕಷ್ಟಕ್ಕೆ ಈಡಾಗಿದ್ದಾರೆ. ಹೀಗಾಗಿ ಖಾಸಗಿ ಶಾಲೆಯ ಶಿಕ್ಷಕರಿಗೆ ಒಂದು ದಿನದ ವೇತನವನ್ನು ಸರ್ಕಾರಿ ಶಾಲಾ ಶಿಕ್ಷಕರು ನೀಡುವಂತೆ ಈ ಮುನ್ನ ಕೇಳಲಾಗಿತ್ತು. ಆದರೆ ಖಾಸಗಿ ಶಾಲೆಗಳ ಒಕ್ಕೂಟ ಇಂದು ಆನ್​ಲೈನ್ ಸಭೆ ಮಾಡಿ ಈ ಮನವಿಗೆ ವಿರೋಧ ಹೊರಹಾಕಿತ್ತು. ಎಲ್ಲಾ ಜಿಲ್ಲೆಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಮತ್ತು ರಾಜ್ಯದ ಎಲ್ಲಾ ಪದಾಧಿಕಾರಿಗಳು ಸರ್ಕಾರದ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Viral Video: ಕೊರೊನಾ ವಾರಿಯರ್ಸ್​ಗೆ ಗೌರವ ಸೂಚಿಸಲು ಐಟಿಬಿಪಿ ಕಾನ್​ಸ್ಟೇಬಲ್​ ಭಾವ ಪೂರ್ಣರಾಗ

ಕೊರೊನಾ ಸೋಂಕಿತೆಗೆ ಸಹಜ ಹೆರಿಗೆ ಮಾಡಿಸಿದ ಹಾವೇರಿ ಆಸ್ಪತ್ರೆ ವೈದ್ಯರು; ಕೊವಿಡ್ ವಾರಿಯರ್ಸ್​ಗೆ ಸಾರ್ವಜನಿಕರಿಂದ ಮೆಚ್ಚುಗೆ

(Govt Announces RDPR Rural Development Panchayat Raj workers as Corona Warriors)

Published On - 8:23 pm, Mon, 2 August 21

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?