AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್​ ಆಯ್ತು

ಬೆಂಗಳೂರು: 7 ತಿಂಗಳ ಬಳಿಕ ರಾಜ್ಯಾದ್ಯಂತ ಕಾಲೇಜು ಓಪನ್​ಗೆ ಡೇಟ್ ಫಿಕ್ಸ್ ಆಗಿದೆ. ನವೆಂಬರ್​ 17ರಿಂದ ಕಾಲೇಜುಗಳನ್ನು ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ. ಸಿಎಂ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ನವೆಂಬರ್ 17 ರಿಂದ ಪದವಿ ಕಾಲೇಜು ಆರಂಭ ಮಾಡಲಾಗುತ್ತೆ. ಇಂಜಿನಿಯರಿಂಗ್, ಡಿಪ್ಲೋಮಾ, ಪದವಿ ಕಾಲೇಜುಗಳು ಕೊವಿಡ್​ ಮಾರ್ಗಸೂಚಿ, ಮುಂಜಾಗ್ರತೆಯಿಂದ ಆರಂಭವಾಗಲಿವೆ. ಕ್ಲಾಸ್​ಗೆ ಹಾಜರಾಗಬಹುದಾ ಅಥವಾ ಆನ್ ಲೈನ್ ಕ್ಲಾಸ್​ಗೆ ಹಾಜರಾಗಬಹುದು ಎಂಬುವುದನ್ನು ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬಹುದು. […]

ರಾಜ್ಯದಲ್ಲಿ ಪದವಿ ಕಾಲೇಜುಗಳ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್​ ಆಯ್ತು
ಆಯೇಷಾ ಬಾನು
|

Updated on:Oct 23, 2020 | 3:49 PM

Share

ಬೆಂಗಳೂರು: 7 ತಿಂಗಳ ಬಳಿಕ ರಾಜ್ಯಾದ್ಯಂತ ಕಾಲೇಜು ಓಪನ್​ಗೆ ಡೇಟ್ ಫಿಕ್ಸ್ ಆಗಿದೆ. ನವೆಂಬರ್​ 17ರಿಂದ ಕಾಲೇಜುಗಳನ್ನು ಆರಂಭ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್​ ನಾರಾಯಣ ತಿಳಿಸಿದ್ದಾರೆ.

ಸಿಎಂ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಲಾಗಿದ್ದು, ನವೆಂಬರ್ 17 ರಿಂದ ಪದವಿ ಕಾಲೇಜು ಆರಂಭ ಮಾಡಲಾಗುತ್ತೆ. ಇಂಜಿನಿಯರಿಂಗ್, ಡಿಪ್ಲೋಮಾ, ಪದವಿ ಕಾಲೇಜುಗಳು ಕೊವಿಡ್​ ಮಾರ್ಗಸೂಚಿ, ಮುಂಜಾಗ್ರತೆಯಿಂದ ಆರಂಭವಾಗಲಿವೆ. ಕ್ಲಾಸ್​ಗೆ ಹಾಜರಾಗಬಹುದಾ ಅಥವಾ ಆನ್ ಲೈನ್ ಕ್ಲಾಸ್​ಗೆ ಹಾಜರಾಗಬಹುದು ಎಂಬುವುದನ್ನು ವಿದ್ಯಾರ್ಥಿಗಳೇ ಆಯ್ಕೆ ಮಾಡಿಕೊಳ್ಳಬಹುದು. ಯಾರಿಗೂ ಕೂಡಾ ತರಗತಿಗೆ ಹಾಜರಾಗಲು ಒತ್ತಾಯ ಇಲ್ಲ. ಹಾಸ್ಟೆಲ್​ಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸಲಾಗುತ್ತದೆ. ಪ್ರಾಕ್ಟಿಕಲ್ ಕ್ಲಾಸ್, ಲ್ಯಾಬ್​ಗಳಲ್ಲಿ ಮುಂಜಾಗ್ರತೆವಹಿಸಿ ಮೊದಲಿನಂತೆ ಎಲ್ಲವನ್ನೂ ಆರಂಭಿಸಲಾಗುತ್ತೆ ಎಂದು ಡಾ.ಅಶ್ವತ್ಥ್​ ನಾರಾಯಣ ಹೇಳಿದ್ದಾರೆ.

ಪ್ರತಿ ಕಾಲೇಜಿನಲ್ಲಿ ಟಾಸ್ಕ್ ಫೋರ್ಸ್: ಅಲ್ಲದೆ ಯುಜಿಸಿ ಮಾರ್ಗಸೂಚಿ ಪ್ರಕಾರ ನವೆಂಬರ್​ನಲ್ಲಿ ಆಫ್ ಲೈನ್ ಕ್ಲಾಸ್ ಆರಂಭಕ್ಕೆ ಅವಕಾಶ ಇದೆ. ಎಲ್ಲಾ ಪೂರ್ವಭಾವಿ ಸಭೆ ಸಾಕಷ್ಟು ನಡೆಸಿ ನಿರ್ಧಾರ ಮಾಡಲಾಗಿದೆ. ಪಿಜಿ ಕಾಲೇಜುಗಳು ಕೂಡಾ ಆರಂಭವಾಗುತ್ತೆ. ಮಾರ್ಗಸೂಚಿ ಉನ್ನತ ಶಿಕ್ಷಣ ಇಲಾಖೆಯಿಂದ ಈ ಬಗ್ಗೆ ಪ್ರಕಟನೆ ಹೊರಡಿಸಲಾಗುತ್ತೆ. ಪ್ರತಿ ಕಾಲೇಜಿನಲ್ಲಿ ಜಿಲ್ಲಾಮಟ್ಟದಲ್ಲಿ ಡಿಸಿ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗುತ್ತೆ. ಮಕ್ಕಳು ತರಗತಿಗೆ ಬರಲು ಪೋಷಕರ ಲಿಖಿತ ಅನುಮತಿ ಬೇಕು. ವಿದ್ಯಾರ್ಥಿಗಳ ಸಂಖ್ಯೆ ಆಧರಿಸಿ ಶಿಫ್ಟ್, ಬ್ಯಾಚ್ ಎಲ್ಲಾ ತೀರ್ಮಾನ ತೆಗೆದುಕೊಳ್ಳಲಾಗುತ್ತೆ. ನವೆಂಬರ್ 17 ರಂದು ಸಿಎಂ ಲರ್ನಿಂಗ್ ಮ್ಯಾನೇಜ್ಮೆಂಟ್ ಪೋರ್ಟಲ್ ಲಾಂಚ್ ಮಾಡುತ್ತಾರೆ.

ಕಾಲೇಜುಗಳ ಪಠ್ಯಕ್ರಮ ಕಡಿತ ಮಾಡದಿರಲು ಸರ್ಕಾರ ಚಿಂತನೆ: ಸರ್ಕಾರ ಕಾಲೇಜುಗಳ ಪಠ್ಯಕ್ರಮ ಕಡಿತ ಮಾಡದಿರಲು ಚಿಂತಿಸಿದೆ. ಇಯರ್ ಆಫ್ ಕ್ಯಾಲೆಂಡರ್ ಬದಲಾಯಿಸದಿರಲು ನಿರ್ಧರಿಸಿದೆ. ಈಗಾಗ್ಲೇ 1ನೇ ತರಗತಿಯಿಂದ ಪಿಯುವರೆಗೆ ಪಠ್ಯಕಡಿತ ಆಗಿದೆ. ಪದವಿ, ಪಿಜಿ, ಇಂಜಿನಿಯರಿಂಗ್ ಪಠ್ಯಕ್ರಮದಲ್ಲಿ ಕಡಿತವಿಲ್ಲ. ಆದರೆ 1, 3, 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಕೆಲವು ರಿಯಾಯಿತಿ ನೀಡಲಾಗುತ್ತೆ. ಈ ಸೆಮಿಸ್ಟರ್​ಗೆ ಮಾತ್ರ ಪಠ್ಯೇತರ, ಅಸೆಸ್​ಮೆಂಟ್ ಗ್ರೇಸ್ ಮಾರ್ಕ್ಸ್ ನೀಡಲು ಚಿಂತನೆ ನಡೆಸಿದೆ.

ಕೊವಿಡ್ ನಿಯಂತ್ರಣಕ್ಕೆ ಬಂದ್ರೆ ರಜಾದಿನಗಳಲ್ಲೂ ತರಗತಿ: ಇನ್ನು ಯುಜಿಸಿಯ ಗೈಡ್ ಲೈನ್ಸ್ ಆಧಾರದ ಮೇಲೆ ಪದವಿ ತರಗತಿ ಶುರುವಾಗಲಿದ್ದು, ನವೆಂಬರ್ 17ರಿಂದ 90 ದಿನಗಳ ಕಾಲ ಮೊದಲ ಸೆಮಿಸ್ಟರ್, ಫೆಬ್ರವರಿಯಲ್ಲಿ ಮೊದಲ, 3ನೇ, ಐದನೇ ಸೆಮಿಸ್ಟರ್ ಪರೀಕ್ಷೆ, ಮಾರ್ಚ್​ನಿಂದ 2, 5, 6ನೇ ಸೆಮಿಸ್ಟರ್ ತರಗತಿಗಳು ಆರಂಭವಾಗಲಿವೆ. ಕೊವಿಡ್ ನಿಯಂತ್ರಣಕ್ಕೆ ಬಂದ್ರೆ ಭಾನುವಾರ, ರಜಾ ದಿನಗಳಲ್ಲೂ ತರಗತಿ ನಡೆಸಲು ಚಿಂತಿಸಲಾಗಿದೆ.

Published On - 12:24 pm, Fri, 23 October 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?