AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್‌ ನೇಮಕ

ವಾರಗಳ ಹಿಂದೆ ನಿಗಮ ಮಂಡಳಿ ನೇಮಕಾತಿ ವಿಚಾರದಲ್ಲಿ ಮಾಡಿದ ಎಡವಟ್ಟನ್ನು ಸರ್ಕಾರ ಸರಿಪಡಿಸಿದೆ. ಕರ್ನಾಟಕ ಕ್ರೀಡಾ ಪ್ರಾಧಿಕಾರ ಅಧ್ಯಕ್ಷರಾಗಿ ಶಾಸಕ ವಿಜಯಾನಂದ ಕಾಶಪ್ಪನವರ್‌ (Vijayananda Kashappanavar) ಅವರ ನೇಮಕ ಆದೇಶವನ್ನಜು ರದ್ದುಪಡಿಸಲಾಗಿದ್ದು, ಇದೀಗ ಅವರಿಗೆ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ವಿಜಯಾನಂದ ಕಾಶಪ್ಪನವರ್‌ ನೇಮಕ
ರಮೇಶ್ ಬಿ. ಜವಳಗೇರಾ
|

Updated on:Feb 17, 2024 | 5:22 PM

Share

ಬೆಂಗಳೂರು, (ಫೆಬ್ರವರಿ 17): ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರನ್ನು ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ (Veerashaiva lingayat development Corporation) ನೇಮಕ ಮಾಡಲಾಗಿದೆ. ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ಮುಂದಿನ ಎರರು ವರ್ಷಗಳ ಅವಧಿಗೆ ನೇಮಕ ಮಾಡಿ ಆದೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಅವರು ಶಿಫಾರಸು ಮಾಡಿದ್ದಾರೆ. ಈ ಹಿಂದೆ ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷ ಸ್ಥಾನರನ್ನಾಗಿ ಮಾಡಿತ್ತು. ಆದ್ರೆ, ಕೆಲ ಕಾನೂನು ತೊಡಕುಗಳು ಎದುರಾಗಿದ್ದರಿಂದ ಇದೀಗ ಹಿಂದಿನ ಆದೇಶವನ್ನು ರದ್ದುಪಡಿಸಿ ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ ನೀಡಲಾಗಿದೆ.

ಕಳೆದ ಜನವರಿ 27ರಂದು ರಾಜ್ಯ ಸರ್ಕಾರವು 35 ಮಂದಿ ಶಾಸಕರನ್ನು ನಿಗಮ ಮಂಡಳಿಗೆ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿತ್ತು. ಅದರಲ್ಲಿ ಹುನಗುಂದ ಶಾಸಕ ವಿಜಯಾನಂದ ಕಾಶಪ್ಪನವರ್‌ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ(Sports Authority) ಅಧ್ಯಕ್ಷರನ್ನಾಗಿ ನೇಮಕ ಮಾಡಿತ್ತು. ಆದರೆ ಕ್ರೀಡಾ ಪ್ರಾಧಿಕಾರದ ಬೈಲಾದಲ್ಲಿ ಇದಕ್ಕೆ ಅವಕಾಶವಿಲ್ಲ. ಕರ್ನಾಟಕ ಕ್ರೀಡಾ ಪ್ರಾಧಿಕಾರದ ಬೈಲಾದ ನಿಯಮದ ಪ್ರಕಾರ ಸಚಿವರೇ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರಾಗುತ್ತಾರೆ. ಅಂದರೆ ಈಗ ಕ್ರೀಡಾ ಸಚಿವರಾಗಿರುವ ನಾಗೇಂದ್ರ ಅವರೇ ಅಧ್ಯಕ್ಷರು. ಬೇಕಿದ್ದರೆ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಬಹುದು. ಈ ಎಡವಟ್ಟನ್ನು ಅರ್ಥ ಮಾಡಿಕೊಂಡ ಸರ್ಕಾರ ವಿಜಯಾನಂದ ಕಾಶಪ್ಪನವರ್‌ ಅವರನ್ನು ಈಗ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷರಾಗಿ ನೇಮಕ ಮಾಡಿದೆ. ಕಾಶಪ್ಪನವರ್‌ ಅವರು ಪಂಚಮಸಾಲಿ ಲಿಂಗಾಯತ 2A ಮೀಸಲಾತಿ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದವರು.

ಸಿದ್ದರಾಮಯ್ಯ ಶಿಫಾರಸ್ಸಿನಲ್ಲೇನಿದೆ?

ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್​ ಅವರನ್ನು ಕರ್ನಾಟಕ ಕ್ರೀಡಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಿಸಿರುವುದನ್ನು ರದ್ದುಪಡಿಸಿ, ಮಾನ್ಯ ಶಾಸಕರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ಸಚಿವ ಸಂಪುಟ ದರ್ಜೆಯ ಸ್ಥಾನಮಾನದೊಂದಿಗೆ ನೇಮಿಸಿ, ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲು ಸೂಚಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 4:29 pm, Sat, 17 February 24

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು