AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ ಸರ್ಕಾರದ ಎಲ್ಲ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣಕ್ಕೆ ನಿಷೇಧ

ಅನಧಿಕೃತವಾಗಿ ಫೋಟೊ / ವಿಡಿಯೊ ತೆಗೆಯುವ ಪ್ರವೃತ್ತಿಯಿಂದ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ ಎಂದು ನೌಕರರ ಸಂಘವು ಅಹವಾಲು ಸಲ್ಲಿಸಿತ್ತು.

ಕರ್ನಾಟಕ ಸರ್ಕಾರದ ಎಲ್ಲ ಕಚೇರಿಗಳಲ್ಲಿ ಫೋಟೊ, ವಿಡಿಯೊ ಚಿತ್ರೀಕರಣಕ್ಕೆ ನಿಷೇಧ
ಪ್ರಾತಿನಿಧಿಕ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 15, 2022 | 2:45 PM

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರು ಫೋಟೊ ಹಾಗೂ ವಿಡಿಯೊ ಚಿತ್ರೀಕರಣ ನಡೆಸುವಂತಿಲ್ಲ ಎಂದು ಆಡಳಿತ ಸುಧಾರಣಾ ಇಲಾಖೆಯಿಂದ ಆದೇಶ ಹೊರಡಿಸಿದೆ. ಕೆಲವರು ಸರ್ಕಾರಿ ಕಚೇರಿಗಳ ವಿಡಿಯೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ದುರ್ಬಳಕೆ ಮಾಡಿಕೊಳ್ಳುತ್ತಿದ್ದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಈ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ನೌಕರರ ಸಂಘವು ಸರ್ಕಾರಕ್ಕೆ ಮನವಿ ಸಲ್ಲಿಸಿತ್ತು. ‘ಸರ್ಕಾರಿ ಕಚೇರಿಗಳಿಗೆ ಕಚೇರಿ ವೇಳೆಯಲ್ಲಿ ಬಂದು, ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೊ / ವಿಡಿಯೊ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವ ಮೂಲಕ ಇಲಾಖೆ ಹಾಗೂ ಸರ್ಕಾರದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ವಿಶೇಷವಾಗಿ ಮಹಿಳಾ ನೌಕರರಿಗೆ ಸಮಸ್ಯೆಯಾಗುತ್ತಿದೆ’ ಎಂದು ನೌಕರರ ಸಂಘವು ಅಹವಾಲು ಸಲ್ಲಿಸಿತ್ತು.

ಈ ಮನವಿಯನ್ನು ಪರಿಶೀಲಿಸಿದ ರಾಜ್ಯ ಸರ್ಕಾರವು, ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳ ಕಚೇರಿಗಳಲ್ಲಿ ಕಚೇರಿ ವೇಳೆಯಲ್ಲಿ ಅನುಮತಿಯಿಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೊ / ವಿಡಿಯೊ ಮಾಡುವುದನ್ನು ನಿಷೇಧಿಸಿ ಆದೇಶಿಸಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸಿ.ವೆಂಕಟೇಶಪ್ಪ ಆದೇಶ ಹೊರಡಿಸಿದ್ದಾರೆ.

ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ