AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್

ಹಾಲಿನ ದರ ಏರಿಕೆ: ಹಾಲು ಒಕ್ಕೂಟಗಳು ಮತ್ತು ಹಲವಾರು ರೈತರು ಖಾಸಗಿ ಡೇರಿಗಳಿಗೆ ವಲಸೆ ಹೋಗುತ್ತಿರುವ ಬಗ್ಗೆ ಉಲ್ಲೇಖಿಸಿದ ಅವರು ಹಾಲು ಒಕ್ಕೂಟಗಳನ್ನು ಉಳಿಸುವ ಸಲುವಾಗಿ ಹಾಲಿನ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಸಚಿವ ಕೆ ವೆಂಕಟೇಶ್ ಹೇಳಿದರು.

Milk Price Hike: ರೈತರ ರಕ್ಷಣೆಗಾಗಿ ಹಾಲಿನ ದರ ಏರಿಕೆಗೆ ಸರ್ಕಾರ ಬದ್ಧ: ಸಚಿವ ಕೆ ವೆಂಕಟೇಶ್
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 12, 2023 | 12:41 PM

Share

ಸರ್ಕಾರ ಈಗಾಗಲೇ ಹಾಲಿನ ದರವನ್ನು(Milk Price) ಹೆಚ್ಚಿಸುವ ಬಗ್ಗೆ ನಿರ್ಧಾರ ತೆಗೆದುಕೊಂಡಿದೆ, ಇದನ್ನು ಜಾರಿ ಮಾಡಲು ಆದೇಶ ಒಂದು ಬಾಕಿ ಇದೆ. ಇನ್ನೂ ಈ ಬಗ್ಗೆ ವಿಧಾನಪರಿಷತ್​ನಲ್ಲಿ ಸದಸ್ಯರೊಬ್ಬರು ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಉತ್ತರ ನೀಡಿದ ಪಶುಸಂಗೋಪನಾ ಸಚಿವ ಕೆ ವೆಂಕಟೇಶ್ ಅವರು ಹಾಲು ಒಕ್ಕೂಟಗಳು ಮತ್ತು ಹಲವಾರು ರೈತರು ಖಾಸಗಿ ಡೇರಿಗಳಿಗೆ ವಲಸೆ ಹೋಗುತ್ತಿರುವ ಬಗ್ಗೆ ಉಲ್ಲೇಖಿಸಿದ ಅವರು ಹಾಲು ಒಕ್ಕೂಟಗಳನ್ನು ಉಳಿಸುವ ಸಲುವಾಗಿ ಹಾಲಿನ ದರವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮಂಗಳವಾರ ಹೇಳಿದರು. ವಿಧಾನ ಪರಿಷತ್ತಿನಲ್ಲಿ ಜೆಡಿಎಸ್ ಸದಸ್ಯರಾದ ಕೆ.ಎ.ತಿಪ್ಪೇಸ್ವಾಮಿ ಮತ್ತು ಎಸ್.ಎಲ್.ಭೋಜೇಗೌಡ ಅವರು ಹಾಲಿನ ದರ ಹೆಚ್ಚಳದ ಬಗ್ಗೆ ಪ್ರಸ್ತಾಪಿಸಿದ್ದಾರೆ, ಇದಕ್ಕೆ ಉತ್ತರ ನೀಡಿದ ಸಚಿವ ವೆಂಕಟೇಶ್, ಹಾಲಿನ ದರ ಹೆಚ್ಚಳದ ಪ್ರಸ್ತಾವನೆ ಸಿದ್ಧವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಂತಿಮ ಒಪ್ಪಿಗೆಗಾಗಿ ಕಾಯುತ್ತಿದ್ದೇನೆ ಎಂದು ಹೇಳಿದರು. ಹಾಲಿನ ದರ ಏರಿಕೆಯ ಮಾಡುವ ಬಗ್ಗೆ ಅಂತಿಮ ನಿರ್ಧಾರವನ್ನು ನಾವು ತೆಗೆದುಕೊಳ್ಳುವುದಿಲ್ಲ, ಆದರೆ ಸಿಎಂ ಜೊತೆ ಚರ್ಚಿಸಿದ ನಂತರ ಅದನ್ನು ಅಂತಿಮಗೊಳಿಸಲಾಗುವುದು ಎಂದು ಅವರು ಹೇಳಿದರು.

ಬೆಲೆ ಪರಿಷ್ಕರಣೆಯ ಕೊರತೆ, ಹೆಚ್ಚುತ್ತಿರುವ ಆಮದು ವೆಚ್ಚಗಳು ಮತ್ತು ಖಾಸಗಿ ಡೈರಿಗಳ ತೀವ್ರ ಪೈಪೋಟಿಯು ಭಾರತದ ಎರಡನೇ ಅತಿದೊಡ್ಡ ಹಾಲು ಉತ್ಪಾದಕರಾದ ಕರ್ನಾಟಕದ ಹೈನುಗಾರರನ್ನು ಹತಾಶೆಗೆ ದೂಡುತ್ತಿದೆ ಎಂದು ಸಚಿವರು ಹೇಳಿದರು. ದಕ್ಷಿಣ ಭಾರತದಲ್ಲಿ ಹೆಚ್ಚಿನ ಸಂಖ್ಯೆಯ ಡೈರಿ ಸಹಕಾರಿ ಸಂಸ್ಥೆಗಳು ಮತ್ತು ಉತ್ಪಾದಕ ಸದಸ್ಯರ ಹೊಂದಿರುವ ನಾವು ಬಿಕ್ಕಟ್ಟಿನತ್ತ ಸಾಗುತ್ತಿದೆ ಎಂದು ಚಿಂತೆಯಾಗುತ್ತಿದೆ. ಈ ಕಾರಣದಿಂದ ರಾಜ್ಯದಲ್ಲಿ ತಕ್ಷಣದಿಂದಲೇ ಹಾಲಿನ ದರ ಏರಿಕೆ ಮಾಡುವ ನಿರ್ಧಾರಕ್ಕೆ ಬರಬೇಕಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ:Milk Price Hike: ವಿದ್ಯುತ್​ ಆಯ್ತು ಈಗ ಗ್ರಾಹಕರಿಗೆ ತಟ್ಟಲಿದೆಯಾ ಹಾಲಿನ ದರ ಏರಿಕೆ ಬಿಸಿ?

ಹೊಸ ಈ ನಿಯಮಗಳು ಜಾರಿಗೆ ಬರುವುದರ ಜತೆಗೆ, ಹಾಲು ಒಕ್ಕೂಟಗಳು ರೈತರಿಗೆ 70% ಸಬ್ಸಿಡಿಯನ್ನು ವಿತರಿಸಬೇಕಾಗುತ್ತದೆ ಮತ್ತು ರಾಜ್ಯ ಸರ್ಕಾರವು ಬಿಡುಗಡೆ ಮಾಡುವ 30% ಸಬ್ಸಿಡಿಯನ್ನು ಉಳಿಸಿಕೊಳ್ಳಲು ಅವರಿಗೆ ಅವಕಾಶ ನೀಡಬಹುದು ಎಂದು ಅವರು ಹೇಳಿದರು. ಒಬಿಸಿ ಮತ್ತು ಸಾಮಾನ್ಯ ವರ್ಗದ ರೈತರಿಗೆ ಫೆಬ್ರವರಿಯಿಂದ ಬಾಕಿ ಉಳಿದಿರುವ ಮತ್ತು ಎಸ್‌ಸಿ/ಎಸ್‌ಟಿ ರೈತರಿಗೆ ಏಪ್ರಿಲ್‌ನಿಂದ ಬಾಕಿ ಉಳಿದಿರುವ ಹಾಲಿನ ಬಾಕಿಯನ್ನು ಬಿಡುಗಡೆ ಮಾಡಲು ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಸಚಿವರು ಸದನಕ್ಕೆ ಭರವಸೆ ನೀಡಿದರು.

ಸರಕಾರ ಜಾತಿವಾರು ಅನುದಾನ ಬಿಡುಗಡೆ ಮಾಡುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಎಂಎಲ್ ಸಿ ವೈ.ಎ.ನಾರಾಯಣಸ್ವಾಮಿ, ಸರಕಾರ ಹಣ ಬಿಡುಗಡೆ ಮಾಡುವಾಗ ಎಸ್ ಸಿ/ಎಸ್ ಟಿ ಮತ್ತು ಸಾಮಾನ್ಯ ರೈತರಿಗೆ ಬೇರೆ ಬೇರೆ ಮಾನದಂಡಗಳನ್ನು ಅಳವಡಿಸಿಕೊಳ್ಳಬಾರದು ಎಂದು ಆಗ್ರಹಿಸಿದರು. ರೈತರನ್ನು ಜಾತಿವಾರು ವಿಂಗಡಣೆ ಮಾಡದೆ ಒಂದೇ ಘಟಕವಾಗಿ ನೋಡಬೇಕು ಎಂದರು.

ಕರ್ನಾಟಕಕ್ಕೆ  ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ