AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಸಕ್ತ ಶೈಕ್ಷಣಿಕ ವರ್ಷದ ಬೋಧನಾ ಶುಲ್ಕ ಮಾತ್ರ ತೆಗೆದುಕೊಳ್ಳಿ; ಬೇರೆ ಯಾವ ಬಾಬತ್ತಿನಲ್ಲೂ ಹಣ ಪಡೆಯಬೇಡಿ: ಸರ್ಕಾರದ ಖಡಕ್ ಆದೇಶ

2019-20ನೇ ಸಾಲಿನಲ್ಲಿ ಪಡೆದ ಬೋಧನಾ ಶುಲ್ಕದ ಶೇಕಡಾ 70ರಷ್ಟನ್ನು ಮಾತ್ರ ಪಡೆಯಲು ಷರತ್ತುಗಳೊಂದಿಗೆ ಅನುಮತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದ ಬೋಧನಾ ಶುಲ್ಕ ಮಾತ್ರ ತೆಗೆದುಕೊಳ್ಳಿ; ಬೇರೆ ಯಾವ ಬಾಬತ್ತಿನಲ್ಲೂ ಹಣ ಪಡೆಯಬೇಡಿ: ಸರ್ಕಾರದ ಖಡಕ್ ಆದೇಶ
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on: Apr 29, 2021 | 12:54 PM

Share

ಬೆಂಗಳೂರು: 2020-21ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ ಅನ್ವಯಿಸುವಂತೆ ವಿದ್ಯಾರ್ಥಿಗಳ ಬೋಧನಾ ಶುಲ್ಕ ಪಡೆಯಲು ಖಾಸಗಿ ಅನುದಾನ ರಹಿತ ಶಾಲೆಗಳಿಗೆ ಸರ್ಕಾರದ ಅನುಮತಿ ನೀಡಿದೆ. 2019-20ನೇ ಸಾಲಿನಲ್ಲಿ ಪಡೆದ ಬೋಧನಾ ಶುಲ್ಕದ ಶೇಕಡಾ 70ರಷ್ಟನ್ನು ಮಾತ್ರ ಪಡೆಯಲು ಷರತ್ತುಗಳೊಂದಿಗೆ ಅನುಮತಿ ನೀಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಶಾಲಾ ಅಭಿವೃದ್ಧಿ ಶುಲ್ಕ, ಐಚ್ಛಿಕ ಶುಲ್ಕ ಸೇರಿದಂತೆ ಉಳಿದ ಯಾವುದೇ ಶುಲ್ಕಗಳನ್ನು ಪಡೆಯುವಂತಿಲ್ಲ. ಟ್ರಸ್ಟ್‌, ಸೊಸೈಟಿಗಳಿಗೆ ದೇಣಿಗೆ ಸ್ವೀಕರಿಸುವಂತಿಲ್ಲ. ಈಗಾಗಲೇ ಪೂರ್ಣ ಶುಲ್ಕ ಪಾವತಿಸಿದ್ದಲ್ಲಿ ಹೆಚ್ಚುವರಿ ಶುಲ್ಕ ಪೋಷಕರಿಗೆ ಹಿಂತಿರುಗಿಸಬೇಕು ಅಥವಾ 2021-22ನೇ ಸಾಲಿನ ಶುಲ್ಕಕ್ಕೆ ಹೊಂದಿಸಿಕೊಳ್ಳಬೇಕು. ಶುಲ್ಕ ಕಡಿಮೆ ಮಾಡಲು ಇಚ್ಛಿಸಿದರೆ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗೆ ಸ್ವಾತಂತ್ರ್ಯ ನೀಡಲಾಗಿದೆ. ಪೋಷಕರಿಗೆ 2 ಕಂತುಗಳಲ್ಲಿ ಪಾವತಿಗೆ ಅವಕಾಶ ಕಲ್ಪಿಸಬೇಕು ಎಂದು ಆದೇಶ ನೀಡಿದೆ.

ಬೋಧನಾ ಶುಲ್ಕ ಪಡೆಯಲು ಸರ್ಕಾರದ ಅನುಮತಿ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆ ಆದೇಶವನ್ನು ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸ್ವಾಗತಿಸಿದ್ದಾರೆ. ಪೋಷಕರು ಕಳೆದ ವರ್ಷದ ಶುಲ್ಕವನ್ನೇ ಇನ್ನೂ ಪಾವತಿಸಿಲ್ಲ. ಶಿಕ್ಷಕರಿಗೆ ವೇತನವನ್ನು ನೀಡಲು ಆಗುತ್ತಿಲ್ಲ. ಖಾಸಗಿ ಶಾಲೆಗಳ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಶೇ.70ರಷ್ಟು ಶುಲ್ಕ ಪಡೆಯಲು ಅನುಮತಿ ಸಮಾಧಾನವಾಗಿದೆ ಎಂದು ಟಿವಿ9ಗೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ತಿಳಿಸಿದ್ದಾರೆ.

ರುಪ್ಸಾ ಖಾಸಗಿ ಶಾಲೆಗಳ ಒಕ್ಕೂಟದ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ

ಇದನ್ನೂ ಓದಿ: ಶಾಲಾ ಫೀಸ್ ಕಡಿತ: ಸರ್ಕಾರದ ವಿರುದ್ಧ ಕೋರ್ಟ್ ಮೆಟ್ಟಿಲೇರಲು ಖಾಸಗಿ ಶಾಲೆಗಳ ಒಕ್ಕೂಟ ಸಿದ್ಧತೆ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್