AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

45 ವರ್ಷದ ಒಳಗಿನವರಿಗೂ ಶೀಘ್ರ ಕೋವಿಡ್ ಲಸಿಕೆ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸುಳಿವು

45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಇದೀಗ ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ 45 ವರ್ಷದ ಒಳಗಿನವರಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಇದ್ಧತೆ ಮಾಡಿಕೊಳ್ಳುತ್ತಿದೆ ಎಂದು ಸದಾನಂದಗೌಡ ತಿಳಿಸಿದರು.

45 ವರ್ಷದ ಒಳಗಿನವರಿಗೂ ಶೀಘ್ರ ಕೋವಿಡ್ ಲಸಿಕೆ: ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಸುಳಿವು
ಬೆಂಗಳೂರಿನಲ್ಲಿ ಬುಧವಾರ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕೊರೊನಾ ಸೋಂಕು ನಿರೋಧಕ ಲಸಿಕೆ ಪಡೆದರು.
Follow us
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 14, 2021 | 11:24 PM

ಬೆಂಗಳೂರು: ಕೋವಿಡ್ ಲಸಿಕೆಯನ್ನು 45 ವರ್ಷದ ಒಳಗಿನವರಿಗೂ ನೀಡುವ ಬಗ್ಗೆ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡ ಬುಧವಾರ (ಏಪ್ರಿಲ್ 14) ಸುಳಿವು ನೀಡಿದರು. ನಗರದ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಇಂದು ಕೋವಿಡ್-19 ಲಸಿಕೆಯ 2ನೇ ಡೋಸ್ ತೆಗೆದುಕೊಂಡ ಸಚಿವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಇದೀಗ ಅವಕಾಶ ನೀಡಿದೆ. ಮುಂದಿನ ದಿನಗಳಲ್ಲಿ 45 ವರ್ಷದ ಒಳಗಿನವರಿಗೂ ಲಸಿಕೆ ನೀಡಲು ಕೇಂದ್ರ ಸರ್ಕಾರ ಇದ್ಧತೆ ಮಾಡಿಕೊಳ್ಳುತ್ತಿದೆ ಎಂದರು.

ದೇಶದಲ್ಲಿ ಕೋವಿಶೀಲ್ಡ್ ಹಾಗೂ ಕೊವಾಕ್ಸಿನ್ ಲಸಿಕೆಗಳು ಸಾಕಷ್ಟು ಪ್ರಮಾಣದಲ್ಲಿ ಲಭ್ಯವಿವೆ. ಇದುವರೆಗೆ ಸುಮಾರು 22 ಕೋಟಿ ಡೋಸ್ ಉತ್ಪಾದನೆ ಮಾಡಲಾಗಿದೆ. ಈಗಾಗಲೇ 11ರಿಂದ 12 ಕೋಟಿ ಜನರಿಗೆ ಲಸಿಕೆ ಹಾಕಲಾಗಿದೆ. ಕೊರೊನಾ ನಿಯಂತ್ರಿಸಲು ಭಾರತದ ನೆರವು ಕೇಳಿದ 90 ದೇಶಗಳಿಗೆ 6 ಕೋಟಿ ಡೋಸ್ ಒದಗಿಸಲಾಗಿದೆ. ಈಗ ರಷ್ಯಾದಿಂದ ಸ್ಪುಟ್ನಿಕ್-V ಲಸಿಕೆ ಆಮದುಮಾಡಿಕೊಳ್ಳಲು ನಿರ್ಧರಿಸಲಾಗಿದೆ. ಇದರಿಂದ ಮುಂಬರುವ ದಿನಗಳಲ್ಲಿ ಲಸಿಕಾ ಅಭಿಯಾನವನ್ನು ಇನ್ನೂ ವೇಗವಾಗಿ ಮತ್ತು ವಿಸ್ತೃತವಾಗಿ ಕೈಗೊಳ್ಳಲು ಸಾಧ್ಯವಾಗಲಿದೆ ಎಂದರು.

ಕೊರೊನಾ ಚಿಕಿತ್ಸೆಗೆ ಬಳಸುವ ರೆಮ್​ಡೆಸಿವಿರ್ ಚುಚ್ಚುಮದ್ದಿನ ಕೊರತೆಯಾಗಬಾರದು ಎಂಬ ಉದ್ದೇಶದಿಂದ ಅದರ ರಫ್ತು ನಿಷೇಧಿಸಲಾಗಿದೆ. ದೇಶದ ಏಳು ಫಾರ್ಮಾ ಕಂಪನಿಗಳು ಇದರ ಉತ್ಪಾದನೆಯ ಲೈಸನ್ಸ್ ಹೊಂದಿವೆ. ರೆಮ್​ಡೆಸಿವಿರ್ ಚುಚ್ಚುಮದ್ದನ್ನು ಹೆಚ್ಚು ದಿನ ಸಂಗ್ರಹಿಸಿಡಲು ಆಗುವುದಿಲ್ಲ. ಮೂರು ತಿಂಗಳೊಳಗೇ ಅದರ ಬಳಕೆಯಾಗಬೇಕು. ದೇಶೀಯವಾಗಿ ಬೇಡಿಕೆ ಕಡಿಮೆಯಾಗಿದ್ದರಿಂದ ತಮ್ಮಲ್ಲಿರುವ ದಾಸ್ತಾನನ್ನು ಈ ಕಂಪನಿಗಳು ರಫ್ತು ಮಾಡುತ್ತಿದ್ದವು. ಉತ್ಪಾದನೆಯನ್ನೂ ಕಡಿತಗೊಳಿಸಿದ್ದವು. ಆದರೆ ಈಗ ಸೋಂಕು ಹೆಚ್ಚಾಗುತ್ತಿರುವುದರಿಂದ ಉತ್ಪಾದನೆಯನ್ನು ಹೆಚ್ಚಿಸುವಂತೆ ಈ ಕಂಪನಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಫಾರ್ಮಾಸ್ಯುಟಿಕಲ್ ಇಲಾಖೆಯನ್ನೂ ನಿರ್ವಹಿಸುವ ಸದಾನಂದ ಗೌಡ ಹೇಳಿದರು.

ಲಸಿಕಾ ಅಭಿಯಾನ ಅತ್ಯಂತ ಚೆನ್ನಾಗಿ ನಡೆದಿದೆ. ಹೆಚ್ಚು ಜನರಿಗೆ ಲಸಿಕೆ ನೀಡುವುದಷ್ಟೇ ಇದರ ಉದ್ದೇಶ ಅಲ್ಲ. ಇದರ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸುವಂತಹ ಕೆಲಸಗಳು ಆಗಬಾರದು. ಮೊದಲ ಡೋಸ್ ತೆಗೆದುಕೊಂಡ ಸುಮಾರು 40 ದಿನಗಳ ನಂತರ ನಾನು ಈಗ ಎರಡನೇ ಡೋಸ್ ತೆಗೆದುಕೊಂಡಿದ್ದೇನೆ. ಯಾವುದೇ ಅಡ್ಡ ಪರಿಣಾಮವಾಗಿಲ್ಲ. ಸುಮಾರು 11 ಸಾವಿರ ಜನರಿಗೆ ಯಶಸ್ವಿಯಾಗಿ ಲಸಿಕೆ ಹಾಕಿದ ಕೆಸಿ ಜನರಲ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿಯನ್ನು ಅಭಿನಂದಿಸುವೆ ಎಂದರು.

(Govt of India is preparing to start vaccinating people below 45 years says Sadananda Gowda)

ಇದನ್ನೂ ಓದಿ: ಕರ್ಫ್ಯೂ ಜಾರಿಗೆಂದು ರಸ್ತೆಗಿಳಿದ 2 ಲಕ್ಷ ಪೊಲೀಸರು: ಮಹಾರಾಷ್ಟ್ರದಲ್ಲಿ ಇಂದಿನಿಂದ ಲಾಕ್​ಡೌನ್ ಮಾದರಿ ನಿರ್ಬಂಧ

ಇದನ್ನೂ ಓದಿ: ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆಯಲ್ಲಿ ದಾಖಲೆ ಬರೆದ ದೆಹಲಿ: ಒಂದೇ ದಿನ 17,000 ಮಂದಿಗೆ ಕೊವಿಡ್-19

Published On - 11:20 pm, Wed, 14 April 21

ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ನಾಳೆಯೇ ಚುನಾವಣೆ ಘೋಷಿಸಿ; ಮೋದಿಗೆ ಮಮತಾ ಬ್ಯಾನರ್ಜಿ ಬಹಿರಂಗ ಸವಾಲು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ಕರಾಚಿ ಏರ್​​ಪೋರ್ಟ್​ನಲ್ಲಿ ತೊಳ್ಕೊಳೋಕೂ ನೀರಿಲ್ವಂತೆ, ನಟಿ ಹೇಳಿದ್ದೇನು?
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
ವಿದ್ಯಾರ್ಥಿನಿಯ ಬದ್ಧತೆ ಕಂಡು ಸಂತೋಷ ವ್ಯಕ್ತಪಡಿಸಿದ ಕಾಲೇಜು ಪ್ರಿನ್ಸಿಪಾಲ್
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
‘ಅವರು ಇದ್ದಿದ್ರೆ...’ ಅಂಬರೀಶ್ ಹುಟ್ಟುಹಬ್ಬದಂದು ಸುಮಲತಾ ಭಾವುಕ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ
ಹಿಂದೂ-ಮುಸ್ಲಿಂ ಸಮುದಾಯಗಳು ಸಾಮರಸ್ಯದಿಂದ ಬದುಕಬೇಕು: ಸಿದ್ದರಾಮಯ್ಯ