AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದು ಕೋಟಿ ಕೊವಿಶೀಲ್ಡ್ ಡೋಸ್ ಲಸಿಕೆ ಖರೀದಿಸಲಿದೆ ರಾಜ್ಯ ಸರ್ಕಾರ

ಈ ಕುರಿತಂತೆ ಮಾತನಾಡಿದ ಅವರು, ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೇಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಒಂದು ಕೋಟಿ ಕೊವಿಶೀಲ್ಡ್ ಡೋಸ್ ಲಸಿಕೆ ಖರೀದಿಸಲಿದೆ ರಾಜ್ಯ ಸರ್ಕಾರ
ಕೊವಿಶೀಲ್ಡ್​ ಲಸಿಕೆ
Follow us
guruganesh bhat
|

Updated on:Apr 27, 2021 | 3:18 PM

ಬೆಂಗಳೂರು: ಪುಣೆಯ ಸೆರಮ್ ಇನ್ಸ್​ಟಿಟ್ಯೂಟ್​ ಆಫ್ ಇಂಡಿಯಾದ ಬಳಿ ಒಂದು ಕೋಟಿ ಡೋಸ್ ಕೊವಿಶೀಲ್ಡ್ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಈಗಾಗಲೇ ಸೆರಮ್ ಇನ್ಸ್​ಟಿಟ್ಯೂಟ್​ಗೆ ಬೇಡಿಕೆ ಇಡಲಾಗಿದ್ದು ಏಪ್ರಿಲ್ 30ರೊಳಗೆ ಲಸಿಕೆ ಪೂರೈಕೆಯಾಗುವ ನಿರೀಕ್ಷೆಯಲ್ಲಿ ರಾಜ್ಯ ಸರ್ಕಾರವಿದೆ.

ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಎಲ್ಲರಿಗೂ ಲಸಿಕೆ ನೀಡುವತ್ತ ಸರಕಾರ ಮುಂದಾಗಿದೆ. ರಾಜ್ಯದಲ್ಲಿ ಕೊವಿಡ್​ ಲಸಿಕೆ ಕೊರತೆ ಇಲ್ಲ. 18 ವರ್ಷ ಮೇಲ್ಪಟ್ಟವರು ಕೂಡಾ 2 ಡೋಸ್​ ಲಸಿಕೆ​ ಪಡೆಯಬೇಕು. ಎಲ್ಲರಿಗೂ ಕೊವಿಡ್​ ಲಸಿಕೆ ನೀಡುವುದನ್ನು ಮುಂದುವರಿಸುತ್ತೇವೆ ಯಾರಿಗೂ ಈ ಬಗ್ಗೆ ಗೊಂದಲ ಬೇಡ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ಲಸಿಕೆ ಒಂದೇ ನಮ್ಮ ಜನರನ್ನು ಕಾಪಾಡಲು ಸಾಧ್ಯ. ಕೊರೊನಾ 3ನೇ ಅಲೆಯನ್ನು ತಡೆಯಬೇಕಾದರೆ ಲಸಿಕೆ ಪಡೆಯಬೇಕು. ಕಡ್ಡಾಯವಾಗಿ 2 ಡೋಸ್ ಲಸಿಕೆಯನ್ನು ಪಡೆಯಿರಿ ಎಂದು ರಾಜ್ಯದ ಜನರಲ್ಲಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.

ಕೊವಿಡ್​ ಹಿನ್ನೆಲೆಯಲ್ಲಿ ಕೋಲಾರಕ್ಕೆ 40 ವೆಂಟಿಲೇಟರ್‌ಗಳನ್ನು ನೀಡಲಾಗಿತ್ತು. ಅದರಲ್ಲಿ 20 ವೆಂಟಿಲೇಟರ್‌ಗಳನ್ನು ಮಾತ್ರ ಬಳಸುತ್ತಿದ್ದರು. ಇನ್ನುಳಿದ ವೆಂಟಿಲೇಟರ್ ಬಳಸದಿರುವುದು ಗಮನಕ್ಕೆ ಬಂತು. ಈ ನಿಟ್ಟಿನಲ್ಲಿ ಕೋಲಾರದ ಆಸ್ಪತ್ರೆಗೆ ಭೇಟಿ ನೀಡಿದ್ದೆ. ಈ ಕುರಿತಾಗಿ ಕೋಲಾರ ಜಿಲ್ಲಾ ಸರ್ಜನ್, ಆರ್‌ಎಂಒ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಚ್ಚರಿಕೆ ನೀಡಿದ್ದೇನೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಆಸ್ಪತ್ರೆಯಲ್ಲಿ ಕೊವಿಡ್ ವಾರ್ಡ್‌ಗಳಲ್ಲಿ ನಿಯಮಗಳನ್ನು ಪಾಲಿಸುತ್ತಿರಲಿಲ್ಲ. ಹೀಗಾಗಿ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದೇನೆ. ಎಲ್ಲ ಆಸ್ಪತ್ರೆಗಳಿಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Covid 19 Treatment in Bengaluru: ಬೆಂಗಳೂರಿನಲ್ಲಿ ತುರ್ತು ಕೊರೊನಾ ಆರೋಗ್ಯ ಸೇವೆಗಳಿಗಾಗಿ ಈ ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಿ

Fact Check: ಋತುಚಕ್ರದ ಸಮಯದಲ್ಲಿ ಮಹಿಳೆಯರು ಕೊವಿಡ್ ಲಸಿಕೆ ಪಡೆಯಬಾರದು ಎಂಬುದು ವದಂತಿ, ನಂಬಬೇಡಿ

Explainer: 18ರಿಂದ 45 ವಯೋಮಾನದವರಿಗೆ ಕೋವಿಡ್ ಲಸಿಕೆ; ನೋಂದಣಿ ಹೇಗೆ? ಪಡೆದುಕೊಳ್ಳುವುದು ಎಲ್ಲಿ? ಡೇಟ್ ಮಿಸ್ ಆದ್ರೆ ಏನು ಮಾಡಬೇಕು?

(Govt of Karnataka orders 1 crore doses covishield vaccine from Serum Institute of India)

Published On - 3:17 pm, Tue, 27 April 21

ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಆಡ್ತೀನಿ, ಆಡಲ್ಲ.. ಯಾವುದನ್ನು ಖಚಿತವಾಗಿ ಹೇಳಲಾರೆ ಎಂದ ಧೋನಿ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ