AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಡಿಲಿಕೆ: ಸರ್ಕಾರದಿಂದ ಎಡವಟ್ಟುಗಳ ಮಾಲಿಕೆ

ಬೆಂಗಳೂರು: ಮಾರಕ ಕೊರೊನಾ ವೈರಸ್​ನಿಂದ ಭಾರತ ತತ್ತರಿಸಿ ಹೋಗಿದೆ. ದೇಶಕ್ಕೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಮೂರನೇ ಹಂತದ ಲಾಕ್​ಡೌನ್​ ಸಡಿಲಿಕೆ ಮಾಡುವ ಮೂಲಕ ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಆಹ್ವಾನ ನೀಡಿದಂತಾಗಿದೆ. ಸರ್ಕಾರದ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ. ಎಡವಟ್ಟು 1: ಐಟಿ-ಬಿಟಿ ಕಂಪನಿಗಳಿಗೆ ಸಡಿಲಿಕೆ ನೀಡಿದ್ದು ಮೊದಲ ಎಡವಟ್ಟು. ಅದರಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿತ್ತು ಆದರೆ ಕಂಪನಿಗಳಲ್ಲಿ ಶೇ.30 ರಷ್ಟೇ ಜನ ಕೆಲ್ಸ ಮಾಡ್ತಿದ್ದಾರೆ ಅನ್ನೋದನ್ನ ಧೃಡಪಡಿಸೋದ್ಯಾರು? ಶೇ.30 ಕ್ಕಿಂತ ಹೆಚ್ಚು ಸಿಬ್ಬಂದಿ […]

ಲಾಕ್​ಡೌನ್​ ಸಡಿಲಿಕೆ: ಸರ್ಕಾರದಿಂದ ಎಡವಟ್ಟುಗಳ ಮಾಲಿಕೆ
ಸಾಧು ಶ್ರೀನಾಥ್​
|

Updated on: May 06, 2020 | 11:30 AM

Share

ಬೆಂಗಳೂರು: ಮಾರಕ ಕೊರೊನಾ ವೈರಸ್​ನಿಂದ ಭಾರತ ತತ್ತರಿಸಿ ಹೋಗಿದೆ. ದೇಶಕ್ಕೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಮೂರನೇ ಹಂತದ ಲಾಕ್​ಡೌನ್​ ಸಡಿಲಿಕೆ ಮಾಡುವ ಮೂಲಕ ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಆಹ್ವಾನ ನೀಡಿದಂತಾಗಿದೆ. ಸರ್ಕಾರದ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

ಎಡವಟ್ಟು 1: ಐಟಿ-ಬಿಟಿ ಕಂಪನಿಗಳಿಗೆ ಸಡಿಲಿಕೆ ನೀಡಿದ್ದು ಮೊದಲ ಎಡವಟ್ಟು. ಅದರಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿತ್ತು ಆದರೆ ಕಂಪನಿಗಳಲ್ಲಿ ಶೇ.30 ರಷ್ಟೇ ಜನ ಕೆಲ್ಸ ಮಾಡ್ತಿದ್ದಾರೆ ಅನ್ನೋದನ್ನ ಧೃಡಪಡಿಸೋದ್ಯಾರು? ಶೇ.30 ಕ್ಕಿಂತ ಹೆಚ್ಚು ಸಿಬ್ಬಂದಿ ಕೆಲಸಕ್ಕೆ ಹಾಜರಾದರೆ ಸಾಮಾಜಿಕ ಅಂತರ ಕಾಪಾಡುವುದು ಕಠಿಣವಾಗುತ್ತೆ. ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕೊರೊನಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ಐಟಿ, ಬಿಟಿ ಉದ್ಯೋಗಿಯಿಂದಲೇ ಮೊದಲ ಕೇಸ್​ ಪತ್ತೆಯಾಗಿತ್ತು. ಹಾಗಾಗಿ ಐಟಿ-ಬಿಟಿ ಕಂಪನಿಗಳ ಮೇಲೆ ಹೆಚ್ಚಿನ ನಿಗವಹಿಸಬೇಕಾಗಿದೆ.

ಎಡವಟ್ಟು 2: ಬಟ್ಟೆ, ಚಿನ್ನದಂಗಡಿಗಳಿಗೆ ಗ್ರೀನ್ ಸಿಗ್ನಲ್ ನೀಡಿ ಸರ್ಕಾರ ಮತ್ತೊಮ್ಮೆ ಎಡವಟ್ಟು ಮಾಡಿದೆ. ಬಟ್ಟೆ, ಚಿನ್ನದ ಅಂಗಡಿಗಳಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಒಬ್ಬರು ಮುಟ್ಟಿದ ವಸ್ತು ಮತ್ತೊಬ್ಬರು ಮುಟ್ಟುವ ಸಾಧ್ಯತೆ ಇರುತ್ತದೆ. ಇವುಗಳ ಮೇಲೆ ನಿಗಾ ಇಡಲು ಸಿಬ್ಬಂದಿಯೇ ಇಲ್ಲ.

ಎಡವಟ್ಟು 3: ಕಾರ್ಮಿಕರನ್ನ ತಮ್ಮೂರಿಗೆ ಕಳುಹಿಸಿದ್ದು 3ನೇ ಎಡವಟ್ಟು. ಬೆಂಗಳೂರಿನಿಂದ ಹಳ್ಳಿ ಪ್ರದೇಶಕ್ಕೆ ಕಾರ್ಮಿಕರು ವಾಪಸ್ ಆಗುತ್ತಿದ್ದಾರೆ. ಬೆಂಗಳೂರಿನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡ್ತಿದ್ದ ವ್ಯಕ್ತಿ, ಮನೆಯಲ್ಲೇ ಇದ್ದವರಿಗೂ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ ಕಾರ್ಮಿಕರಲ್ಲಿ ಕೊರೊನಾ ಸೋಂಕು ಪತ್ತೆ ಭೀತಿ ಹೆಚ್ಚಾಗಿದೆ. ಕೊರೊನಾ ಲಕ್ಷಣ ಕಂಡುಬರದೇ ಇದ್ದರು ವೈದ್ಯಕೀಯ ವರದಿ ಪಾಸಿಟಿವ್ ಬಂದಿರುವ ಪ್ರಕರಣಗಳನ್ನು ನೋಡುತ್ತಿದ್ದೇವೆ. ಇಂತಹ ಸಂದ್ರಭದಲ್ಲಿ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳಿಸಿದರೆ ಅಲ್ಲಿಯೂ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ.

ಎಡವಟ್ಟು 4: ಪಾಸ್ ಇಲ್ಲದವರಿಗೆ ಓಡಾಡಲು ಅವಕಾಶ ನೀಡಿ ಸರ್ಕಾರ ಎಡವಿದೆ. ಅಗತ್ಯ ಸೇವೆಯಲ್ಲಿದ್ದವರಿಗೆ ಮಾತ್ರ ಓಡಾಡಲು ಪಾಸ್ ನೀಡಲಾಗುತ್ತಿತ್ತು. ಆದರೆ ಈಗ ಎಲ್ಲರೂ ಓಡಾಡುವಂತಾಗಿ ಎಡವಟ್ಟಿಗೆ ನಾಂದಿ ಹಾಡಿದೆ. ಕಂಟೇನ್​ಮೆಂಟ್ ಜೋನ್​ನಲ್ಲಿ ಕದ್ದು ಮುಚ್ಚಿ ಜನ ಓಡಾಡ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಅತಿ ಹೆಚ್ಚಿದೆ.

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್
ಹಿಂದೂ ಯುವತಿಗೆ ಮಗು ಕರುಣಿಸಿ ಕೈಕೊಟ್ಟ ಸೈಯದ್: ಬೆಂಗಳೂರಿನಲ್ಲಿ ಲವ್ ಜಿಹಾದ್