AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಕ್​ಡೌನ್​ ಸಡಿಲಿಕೆ: ಸರ್ಕಾರದಿಂದ ಎಡವಟ್ಟುಗಳ ಮಾಲಿಕೆ

ಬೆಂಗಳೂರು: ಮಾರಕ ಕೊರೊನಾ ವೈರಸ್​ನಿಂದ ಭಾರತ ತತ್ತರಿಸಿ ಹೋಗಿದೆ. ದೇಶಕ್ಕೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಮೂರನೇ ಹಂತದ ಲಾಕ್​ಡೌನ್​ ಸಡಿಲಿಕೆ ಮಾಡುವ ಮೂಲಕ ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಆಹ್ವಾನ ನೀಡಿದಂತಾಗಿದೆ. ಸರ್ಕಾರದ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ. ಎಡವಟ್ಟು 1: ಐಟಿ-ಬಿಟಿ ಕಂಪನಿಗಳಿಗೆ ಸಡಿಲಿಕೆ ನೀಡಿದ್ದು ಮೊದಲ ಎಡವಟ್ಟು. ಅದರಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿತ್ತು ಆದರೆ ಕಂಪನಿಗಳಲ್ಲಿ ಶೇ.30 ರಷ್ಟೇ ಜನ ಕೆಲ್ಸ ಮಾಡ್ತಿದ್ದಾರೆ ಅನ್ನೋದನ್ನ ಧೃಡಪಡಿಸೋದ್ಯಾರು? ಶೇ.30 ಕ್ಕಿಂತ ಹೆಚ್ಚು ಸಿಬ್ಬಂದಿ […]

ಲಾಕ್​ಡೌನ್​ ಸಡಿಲಿಕೆ: ಸರ್ಕಾರದಿಂದ ಎಡವಟ್ಟುಗಳ ಮಾಲಿಕೆ
ಸಾಧು ಶ್ರೀನಾಥ್​
|

Updated on: May 06, 2020 | 11:30 AM

Share

ಬೆಂಗಳೂರು: ಮಾರಕ ಕೊರೊನಾ ವೈರಸ್​ನಿಂದ ಭಾರತ ತತ್ತರಿಸಿ ಹೋಗಿದೆ. ದೇಶಕ್ಕೆ ದೊಡ್ಡ ಸಂಕಷ್ಟವೇ ಎದುರಾಗಿದೆ. ಮೂರನೇ ಹಂತದ ಲಾಕ್​ಡೌನ್​ ಸಡಿಲಿಕೆ ಮಾಡುವ ಮೂಲಕ ಸರ್ಕಾರ ಮತ್ತಷ್ಟು ಸಂಕಷ್ಟಕ್ಕೆ ಆಹ್ವಾನ ನೀಡಿದಂತಾಗಿದೆ. ಸರ್ಕಾರದ ಎಡವಟ್ಟಿನಿಂದ ಕೊರೊನಾ ಆತಂಕ ಹೆಚ್ಚಾಗಿದೆ.

ಎಡವಟ್ಟು 1: ಐಟಿ-ಬಿಟಿ ಕಂಪನಿಗಳಿಗೆ ಸಡಿಲಿಕೆ ನೀಡಿದ್ದು ಮೊದಲ ಎಡವಟ್ಟು. ಅದರಲ್ಲಿ ಶೇ.30ರಷ್ಟು ಸಿಬ್ಬಂದಿಗೆ ಕೆಲಸ ಮಾಡಲು ಸೂಚನೆ ನೀಡಲಾಗಿತ್ತು ಆದರೆ ಕಂಪನಿಗಳಲ್ಲಿ ಶೇ.30 ರಷ್ಟೇ ಜನ ಕೆಲ್ಸ ಮಾಡ್ತಿದ್ದಾರೆ ಅನ್ನೋದನ್ನ ಧೃಡಪಡಿಸೋದ್ಯಾರು? ಶೇ.30 ಕ್ಕಿಂತ ಹೆಚ್ಚು ಸಿಬ್ಬಂದಿ ಕೆಲಸಕ್ಕೆ ಹಾಜರಾದರೆ ಸಾಮಾಜಿಕ ಅಂತರ ಕಾಪಾಡುವುದು ಕಠಿಣವಾಗುತ್ತೆ. ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಕೊರೊನಾ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಬೆಂಗಳೂರಿನಲ್ಲಿ ಐಟಿ, ಬಿಟಿ ಉದ್ಯೋಗಿಯಿಂದಲೇ ಮೊದಲ ಕೇಸ್​ ಪತ್ತೆಯಾಗಿತ್ತು. ಹಾಗಾಗಿ ಐಟಿ-ಬಿಟಿ ಕಂಪನಿಗಳ ಮೇಲೆ ಹೆಚ್ಚಿನ ನಿಗವಹಿಸಬೇಕಾಗಿದೆ.

ಎಡವಟ್ಟು 2: ಬಟ್ಟೆ, ಚಿನ್ನದಂಗಡಿಗಳಿಗೆ ಗ್ರೀನ್ ಸಿಗ್ನಲ್ ನೀಡಿ ಸರ್ಕಾರ ಮತ್ತೊಮ್ಮೆ ಎಡವಟ್ಟು ಮಾಡಿದೆ. ಬಟ್ಟೆ, ಚಿನ್ನದ ಅಂಗಡಿಗಳಲ್ಲಿ ಅತಿ ಹೆಚ್ಚು ಜನ ಸೇರುತ್ತಾರೆ. ಒಬ್ಬರು ಮುಟ್ಟಿದ ವಸ್ತು ಮತ್ತೊಬ್ಬರು ಮುಟ್ಟುವ ಸಾಧ್ಯತೆ ಇರುತ್ತದೆ. ಇವುಗಳ ಮೇಲೆ ನಿಗಾ ಇಡಲು ಸಿಬ್ಬಂದಿಯೇ ಇಲ್ಲ.

ಎಡವಟ್ಟು 3: ಕಾರ್ಮಿಕರನ್ನ ತಮ್ಮೂರಿಗೆ ಕಳುಹಿಸಿದ್ದು 3ನೇ ಎಡವಟ್ಟು. ಬೆಂಗಳೂರಿನಿಂದ ಹಳ್ಳಿ ಪ್ರದೇಶಕ್ಕೆ ಕಾರ್ಮಿಕರು ವಾಪಸ್ ಆಗುತ್ತಿದ್ದಾರೆ. ಬೆಂಗಳೂರಿನಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡ್ತಿದ್ದ ವ್ಯಕ್ತಿ, ಮನೆಯಲ್ಲೇ ಇದ್ದವರಿಗೂ ಕೊರೊನಾ ಸೋಂಕು ಪತ್ತೆಯಾಗುತ್ತಿದೆ. ಹೀಗಾಗಿ ಕಾರ್ಮಿಕರಲ್ಲಿ ಕೊರೊನಾ ಸೋಂಕು ಪತ್ತೆ ಭೀತಿ ಹೆಚ್ಚಾಗಿದೆ. ಕೊರೊನಾ ಲಕ್ಷಣ ಕಂಡುಬರದೇ ಇದ್ದರು ವೈದ್ಯಕೀಯ ವರದಿ ಪಾಸಿಟಿವ್ ಬಂದಿರುವ ಪ್ರಕರಣಗಳನ್ನು ನೋಡುತ್ತಿದ್ದೇವೆ. ಇಂತಹ ಸಂದ್ರಭದಲ್ಲಿ ಕಾರ್ಮಿಕರನ್ನು ತಮ್ಮ ಊರುಗಳಿಗೆ ಕಳಿಸಿದರೆ ಅಲ್ಲಿಯೂ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ.

ಎಡವಟ್ಟು 4: ಪಾಸ್ ಇಲ್ಲದವರಿಗೆ ಓಡಾಡಲು ಅವಕಾಶ ನೀಡಿ ಸರ್ಕಾರ ಎಡವಿದೆ. ಅಗತ್ಯ ಸೇವೆಯಲ್ಲಿದ್ದವರಿಗೆ ಮಾತ್ರ ಓಡಾಡಲು ಪಾಸ್ ನೀಡಲಾಗುತ್ತಿತ್ತು. ಆದರೆ ಈಗ ಎಲ್ಲರೂ ಓಡಾಡುವಂತಾಗಿ ಎಡವಟ್ಟಿಗೆ ನಾಂದಿ ಹಾಡಿದೆ. ಕಂಟೇನ್​ಮೆಂಟ್ ಜೋನ್​ನಲ್ಲಿ ಕದ್ದು ಮುಚ್ಚಿ ಜನ ಓಡಾಡ್ತಿದ್ದಾರೆ. ಹೀಗಾಗಿ ಕೊರೊನಾ ಸೋಂಕು ಹರಡುವ ಸಾಧ್ಯತೆ ಅತಿ ಹೆಚ್ಚಿದೆ.

'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!