AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರ, ವಾರಣಾಸಿಯಲ್ಲಿ ಅಧ್ಯಯನ

ಗಂಗೆಯಷ್ಟೇ ಪವಿತ್ರ ನದಿ ಕಾವೇರಿ ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದ ನಿಯೋಗ ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಇದಕ್ಕಾಗಿ ನಿಯೋಗ ಇಂದು ಮತ್ತು ನಾಳೆ ಹರಿದ್ವಾರ ಹಾಗೂ ವಾರಣಾಸಿಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಲಿದೆ.

ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರ, ವಾರಣಾಸಿಯಲ್ಲಿ ಅಧ್ಯಯನ
ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರ, ವಾರಣಾಸಿಯಲ್ಲಿ ಅಧ್ಯಯನ
ಮಾಲತೇಶ ಜಗ್ಗೀನ್
| Edited By: |

Updated on: Sep 20, 2024 | 5:23 PM

Share

ಬೆಂಗಳೂರು, ಸೆಪ್ಟೆಂಬರ್​ 20: ಗಂಗಾ ನದಿಗೆ ಮಾಡುವ ಗಂಗಾ ಆರತಿ ಮಾದರಿಯಲ್ಲಿ ಸದ್ಯ ಕಾವೇರಿ ನದಿಗೆ (cauvery river) ಕಾವೇರಿ ಆರತಿ ನಡೆಸಲು ಅಧ್ಯಯನ ಕೈಗೊಳ್ಳಲಾಗುತ್ತಿದೆ. ಇದ್ದಕ್ಕಾಗಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದ ನಿಯೋಗ ಇಂದು ಮತ್ತು ನಾಳೆ ಹರಿದ್ವಾರ ಹಾಗೂ ವಾರಣಾಸಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ತಯಾರಿಸಲಿದ್ದಾರೆ.

ಗಂಗೆಯಷ್ಟೇ ಪವಿತ್ರ ನದಿ ಕಾವೇರಿ ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ಮುಂದಾಗಿದೆ. ಹಾಗಾಗಿ ಸಮಿತಿಯು ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಅಂದರೆ ಕರ್ನಾಟಕದ ಯಾವ ಸ್ಥಳದಲ್ಲಿ ಮಾಡುವುದು? ಯಾವ ಜಾಗ ಸೂಕ್ತ? ಎಷ್ಟು ಖರ್ಚು-ವೆಚ್ಚ ತಗಲುತ್ತದೆ ಎಂಬಿತ್ಯಾದಿ ವಿಷಯಗಳ ಅಧ್ಯಯನವನ್ನು ತಂಡ ನಡೆಸಲಿದೆ.

ವಾರಕ್ಕೆ ಮೂರು ದಿನ ಕಾವೇರಿಗೆ ಆರತಿ: ಸುಮಾರು 5 ಕೋಟಿ ರೂ. ವೆಚ್ಚ

ಸದ್ಯಕ್ಕೆ ವಾರಕ್ಕೆ ಮೂರು ದಿನ ಕಾವೇರಿಗೆ ಆರತಿ ನಡೆಸುವ ಯೋಜನೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆಯೂ ಆಯೋಗ ನಿರ್ಧರಿಸಲಿದೆ. ಜೊತೆಗೆ ಪ್ರತೀ ವರ್ಷ ಮಾಡುವಂತೆ ಕ್ಯಾಬಿನೆಟ್​ನಲ್ಲಿ ಇಟ್ಟು ಜಿಓ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ.

ಇದನ್ನೂ ಓದಿ: 70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ! ಇಲ್ಲಿದೆ ಚಿತ್ರಣ

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಕಾವೇರಿಗೆ ಆರತಿ ಮಾಡುವ ಬಗ್ಗೆ ಪ್ಲ್ಯಾನ್​ ಇದೆ ಎನ್ನಲಾಗುತ್ತಿದೆ. ಇದರ ಬಗ್ಗೆ ಚಾಮರಾಜನಗರ, ಮೈಸೂರು, ಮಂಡ್ಯ, ಮಡಿಕೇರಿ ಭಾಗದ ಶಾಸಕರ ನಿಯೋಗ ಅಧ್ಯಯನ ನಡೆಸಲಿದೆ.

ಇದನ್ನೂ ಓದಿ: ಕಾವೇರಿ ನೀರು ವಿವಾದ: ಕರ್ನಾಟಕ-ತಮಿಳುನಾಡಿಗೆ ಮಹತ್ವದ ಸೂಚನೆ ಕೊಟ್ಟ CWMA

ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ಶಿವಲಿಂಗೇಗೌಡ, ರಮೇಶ್ ಬಂಡಿ ಸಿದ್ದೇಗೌಡ, ಉದಯ್ ಗೌಡ, ರವಿಕುಮಾರ್ ಗಾಣಿಗ, ಬಾಲಕೃಷ್ಣ ಮಾಗಡಿ, ದರ್ಶನ್ ನಾರಾಯಣ್ ಮತ್ತು ನಟ ನಿರ್ದೇಶಕ ಸಾಧು ಕೋಕಿಲ ಒಳಗೊಂಡ ತಂಡ ಇಂದು ಡೆಹ್ರಾಡೂನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕಾವೇರಿ ಕುರಿತ ವಿಭಿನ್ನ ಹಾಡು ರಚಿಸಲು ಸಾಧು ಕೊಕಿಲಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಕೂಡ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!