ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರ, ವಾರಣಾಸಿಯಲ್ಲಿ ಅಧ್ಯಯನ

ಗಂಗೆಯಷ್ಟೇ ಪವಿತ್ರ ನದಿ ಕಾವೇರಿ ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ಮುಂದಾಗಿದೆ. ಹಾಗಾಗಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದ ನಿಯೋಗ ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಇದಕ್ಕಾಗಿ ನಿಯೋಗ ಇಂದು ಮತ್ತು ನಾಳೆ ಹರಿದ್ವಾರ ಹಾಗೂ ವಾರಣಾಸಿಯಲ್ಲಿ ಅಧ್ಯಯನ ನಡೆಸಿ ವರದಿ ತಯಾರಿಸಲಿದೆ.

ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರ, ವಾರಣಾಸಿಯಲ್ಲಿ ಅಧ್ಯಯನ
ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರ, ವಾರಣಾಸಿಯಲ್ಲಿ ಅಧ್ಯಯನ
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Sep 20, 2024 | 5:23 PM

ಬೆಂಗಳೂರು, ಸೆಪ್ಟೆಂಬರ್​ 20: ಗಂಗಾ ನದಿಗೆ ಮಾಡುವ ಗಂಗಾ ಆರತಿ ಮಾದರಿಯಲ್ಲಿ ಸದ್ಯ ಕಾವೇರಿ ನದಿಗೆ (cauvery river) ಕಾವೇರಿ ಆರತಿ ನಡೆಸಲು ಅಧ್ಯಯನ ಕೈಗೊಳ್ಳಲಾಗುತ್ತಿದೆ. ಇದ್ದಕ್ಕಾಗಿ ಸಚಿವ ಚೆಲುವರಾಯಸ್ವಾಮಿ ನೇತೃತ್ವದ ನಿಯೋಗ ಇಂದು ಮತ್ತು ನಾಳೆ ಹರಿದ್ವಾರ ಹಾಗೂ ವಾರಣಾಸಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ತಯಾರಿಸಲಿದ್ದಾರೆ.

ಗಂಗೆಯಷ್ಟೇ ಪವಿತ್ರ ನದಿ ಕಾವೇರಿ ಎಂಬ ನಿಟ್ಟಿನಲ್ಲಿ ಕಾವೇರಿ ಆರತಿ ಮಾಡಲು ಸರ್ಕಾರ ಮುಂದಾಗಿದೆ. ಹಾಗಾಗಿ ಸಮಿತಿಯು ಕಾವೇರಿ ಆರತಿಯ ರೂಪುರೇಷೆ ತಯಾರಿಸಲಿದೆ. ಅಂದರೆ ಕರ್ನಾಟಕದ ಯಾವ ಸ್ಥಳದಲ್ಲಿ ಮಾಡುವುದು? ಯಾವ ಜಾಗ ಸೂಕ್ತ? ಎಷ್ಟು ಖರ್ಚು-ವೆಚ್ಚ ತಗಲುತ್ತದೆ ಎಂಬಿತ್ಯಾದಿ ವಿಷಯಗಳ ಅಧ್ಯಯನವನ್ನು ತಂಡ ನಡೆಸಲಿದೆ.

ವಾರಕ್ಕೆ ಮೂರು ದಿನ ಕಾವೇರಿಗೆ ಆರತಿ: ಸುಮಾರು 5 ಕೋಟಿ ರೂ. ವೆಚ್ಚ

ಸದ್ಯಕ್ಕೆ ವಾರಕ್ಕೆ ಮೂರು ದಿನ ಕಾವೇರಿಗೆ ಆರತಿ ನಡೆಸುವ ಯೋಜನೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆಯೂ ಆಯೋಗ ನಿರ್ಧರಿಸಲಿದೆ. ಜೊತೆಗೆ ಪ್ರತೀ ವರ್ಷ ಮಾಡುವಂತೆ ಕ್ಯಾಬಿನೆಟ್​ನಲ್ಲಿ ಇಟ್ಟು ಜಿಓ ಮಾಡುವ ಬಗ್ಗೆ ಚಿಂತನೆ ಮಾಡಲಾಗುತ್ತಿದೆ.

ಇದನ್ನೂ ಓದಿ: 70 ವರ್ಷಗಳಲ್ಲಿ ಮೊದಲ ಬಾರಿಗೆ ಬತ್ತಿ ಹೋಗಿದ್ದ ಕಾವೇರಿ ನದಿ ಮತ್ತೆ ಗತವೈಭವಕ್ಕೆ ಮರಳುತ್ತಿದೆ! ಇಲ್ಲಿದೆ ಚಿತ್ರಣ

ಸುಮಾರು 5 ಕೋಟಿ ರೂ. ವೆಚ್ಚದಲ್ಲಿ ಕಾವೇರಿಗೆ ಆರತಿ ಮಾಡುವ ಬಗ್ಗೆ ಪ್ಲ್ಯಾನ್​ ಇದೆ ಎನ್ನಲಾಗುತ್ತಿದೆ. ಇದರ ಬಗ್ಗೆ ಚಾಮರಾಜನಗರ, ಮೈಸೂರು, ಮಂಡ್ಯ, ಮಡಿಕೇರಿ ಭಾಗದ ಶಾಸಕರ ನಿಯೋಗ ಅಧ್ಯಯನ ನಡೆಸಲಿದೆ.

ಇದನ್ನೂ ಓದಿ: ಕಾವೇರಿ ನೀರು ವಿವಾದ: ಕರ್ನಾಟಕ-ತಮಿಳುನಾಡಿಗೆ ಮಹತ್ವದ ಸೂಚನೆ ಕೊಟ್ಟ CWMA

ಸಚಿವ ಚೆಲುವರಾಯಸ್ವಾಮಿ ಸೇರಿದಂತೆ ಚೆಲುವರಾಯಸ್ವಾಮಿ, ನರೇಂದ್ರಸ್ವಾಮಿ, ಶಿವಲಿಂಗೇಗೌಡ, ರಮೇಶ್ ಬಂಡಿ ಸಿದ್ದೇಗೌಡ, ಉದಯ್ ಗೌಡ, ರವಿಕುಮಾರ್ ಗಾಣಿಗ, ಬಾಲಕೃಷ್ಣ ಮಾಗಡಿ, ದರ್ಶನ್ ನಾರಾಯಣ್ ಮತ್ತು ನಟ ನಿರ್ದೇಶಕ ಸಾಧು ಕೋಕಿಲ ಒಳಗೊಂಡ ತಂಡ ಇಂದು ಡೆಹ್ರಾಡೂನ್ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಕಾವೇರಿ ಕುರಿತ ವಿಭಿನ್ನ ಹಾಡು ರಚಿಸಲು ಸಾಧು ಕೊಕಿಲಗೆ ಸೂಚಿಸಿದ್ದಾರೆ ಎಂಬ ಮಾಹಿತಿ ಕೂಡ ಇದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?