AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Banning Old Vehicles ಹಳೇ ವಾಹನಗಳ ಬ್ಯಾನ್‌ ಮಾಡಲು ಪ್ಲ್ಯಾನ್‌ ತಯಾರಿ.. ಸದ್ಯದಲ್ಲೇ ಗುಜರಿ ಸೇರಲಿವೆ ಲಕ್ಷಾಂತರ ವಾಹನಗಳು

Policy to Scrap Old Vehicles | ಬೆಂಗಳೂರಿನ ಟ್ರಾಫಿಕ್ ಹೇಗಿದೆ ಅಂತಾ ಕೇಳಿದ್ರೆ ಸಾಕ್ಷಾತ್ ನರಕವೇ ಕಣ್ಮುಂದೆ ಬರುತ್ತೆ. ವಾಯಮಾಲಿನ್ಯ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಹಳೇ ವಾಹನಗಳನ್ನ ಬ್ಯಾನ್ ಮಾಡುವ ಯೋಜನೆ ಘೋಷಿಸಿದೆ. ಹಾಗಿದ್ರೆ ಯಾವೆಲ್ಲ ವಾಹನಗಳು ಬ್ಯಾನ್ ಆಗ್ತವೆ ಅನ್ನೋದರ ಡಿಟೇಲ್ಸ್ ಇಲ್ಲಿದೆ.

Banning Old Vehicles ಹಳೇ ವಾಹನಗಳ ಬ್ಯಾನ್‌ ಮಾಡಲು ಪ್ಲ್ಯಾನ್‌ ತಯಾರಿ.. ಸದ್ಯದಲ್ಲೇ ಗುಜರಿ ಸೇರಲಿವೆ ಲಕ್ಷಾಂತರ ವಾಹನಗಳು
ಸಾಂದರ್ಭಿಕ ಚಿತ್ರ
ಆಯೇಷಾ ಬಾನು
|

Updated on:Feb 11, 2021 | 7:56 AM

Share

ಬೆಂಗಳೂರು: ನಗರದಲ್ಲಿ ದಿನೇ ದಿನೇ ಟ್ರಾಫಿಕ್ ಹೆಚ್ಚಳವಾಗ್ತಿದ್ದು, ವಾಯುಮಾಲಿನ್ಯ ಏರುತ್ತಲೇ ಇದೆ. ದೆಹಲಿಯಂತೆಯೇ ಬೆಂಗಳೂರು ವಾಯುಮಾಲಿನ್ಯದ ಕೇಂದ್ರ ಸ್ಥಾನವಾಗ್ತಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ವಾಯುಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ 15 ವರ್ಷ ಹಾಗೂ 20 ವರ್ಷ ದಾಟಿದ ವಾಹನಗಳನ್ನು ನಿಷೇಧಿಸುವ ವಾಹನ ಗುಜರಿ ಯೋಜನೆಯನ್ನ ಬಜೆಟ್​ನಲ್ಲಿ ಪ್ರಸ್ತಾಪಿಸಿತ್ತು. ಈಗ ಬೆಂಗಳೂರಿನಲ್ಲಿ ಈ ಯೋಜನೆ ಜಾರಿಗೆ ಸಕಲ ರೀತಿಯ ತಯಾರಿ ನಡೀತಿದೆ.

ಬೆಂಗಳೂರಿನಲ್ಲಿ 2020ರ ವೇಳೆಗೆ ರೆಜಿಸ್ಟರ್ ಆದ ವಾಹನಗಳ ಸಂಖ್ಯೆ ಒಂದು ಕೋಟಿ ದಾಟಿದೆ. ಇಷ್ಟೊಂದು ವಾಹನ ದಟ್ಟಣೆ ತಡೆದುಕೊಳ್ಳಲು ಸಿಟಿಯ ರಸ್ತೆಗಳಿಗೆ ತಾಕತ್ತಿಲ್ಲ. ಜೊತೆಗೆ ಮಾಲಿನ್ಯ ಹೆಚ್ಚಾಗ್ತಿದೆ. ಹೀಗಾಗಿ, 15 ವರ್ಷ ಮೇಲ್ಪಟ್ಟ ಕಮರ್ಷಿಯಲ್‌ ವಾಹನ, 20 ವರ್ಷ ಮೇಲ್ಪಟ್ಟ ಪರ್ಸನಲ್‌ ವಾಹನ ಗುಜರಿಗೆ ಹಾಕಲು ರೂಲ್ಸ್‌ ಸಿದ್ಧಪಡಿಸಲಾಗ್ತಿದೆ. ಈಗಾಗ್ಲೇ ಈ ಯೋಜನೆಯ ಡ್ರಾಫ್ಟ್‌ ಸಿದ್ಧವಾಗಿದೆಯಂತೆ. 15 ವರ್ಷ ಮೇಲ್ಪಟ್ಟ ವಾಹನಗಳಿಗೆ ಫಿಟ್ನೆಸ್‌ ಸರ್ಟಿಫಿಕೇಟ್‌ ನೀಡದಿರಲು ಸಾರಿಗೆ ಇಲಾಖೆ ಚಿಂತನೆ ಪ್ಲ್ಯಾನ್ ಮಾಡ್ತಿದೆ.

ವಾಹನ ಗುಜರಿ ಯೋಜನೆ ಜಾರಿಯಾದ್ರೆ ಬೆಂಗಳೂರಿನ ಲಕ್ಷಾಂತರ ವಾಹನಗಳು ರಸ್ತೆಯಲ್ಲಿ ಓಡಾಡುವಂತೆ ಇಲ್ಲ. ಆದ್ರೆ, ಈ ಬಗ್ಗೆ ಸಾರ್ವಜನಿಕರಲ್ಲಿ ಸಾಕಷ್ಟು ಪ್ರಶ್ನೆಗಳಿವೆ. ಬ್ಯಾನ್‌ ಆದ ವಾಹನಗಳನ್ನ ಏನ್‌ ಮಾಡೋದು? ಸ್ಕ್ರ್ಯಾಪ್‌ ಹೇಗೆ ಮಾಡ್ತಾರೆ? ಹಳೇ ವಾಹನಗಳನ್ನ ಸೇಲ್ ಮಾಡ್ಬೇಕಾ? ಇಲ್ಲ ಅದರ ಕಥೆ ಮುಗಿದೋಯ್ತಾ? ಇಂತಹ ಅನೇಕ ಪ್ರಶ್ನೆಗಳು ಎಲ್ಲರಿಗೂ ಕಾಡುತ್ತಿವೆ.

ಸದ್ಯ ಸರ್ಕಾರದ ಈ ಪ್ರಯತ್ನ ನಿಯಮಾವಳಿ ಜಾರಿಗೊಳಿಸುವ ಹಂತದಲ್ಲಿದೆ. ಹೀಗಾಗಿ, ಕೇಂದ್ರ ಸರ್ಕಾರ ಯಾವ ರೀತಿಯಲ್ಲಿ ಯೋಜನೆ ಜಾರಿಗೆ ತರುತ್ತೆ ಅಂತಾ ಗೊತ್ತಿಲ್ಲ. ಆದ್ರೆ, ನಿಮ್ಮ ಬಳಿ ಇರೋ ಹಳೇ ವಾಹನಗಳಂತು ಸದ್ಯದಲ್ಲೇ ಗುಜರಿ ಸೇರಬೇಕಿರೋದಂತೂ ಕಹಿಯಾದ ಸತ್ಯ.

ಇದನ್ನೂ ಓದಿ: ಹಳೇ ವಾಹನಗಳಿಗೆ ಹಸಿರು ತೆರಿಗೆ ವಿಧಿಸಲು ಕೇಂದ್ರದ ಸಮ್ಮತಿ

Published On - 7:13 am, Thu, 11 February 21

Follow Us
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಕೊಟ್ಟ ಮಾತು ಉಳಿಸಿಕೊಳ್ತೇವೆ: ವಿಧಾನಸಭೆಯಲ್ಲಿ ವಿಜಯ್ ಮೊದಲ ಭಾಷಣ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್