AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಬ್ಬನೇ ವಿದ್ಯಾರ್ಥಿ‌ ಇದ್ದರೂ ಸರ್ಕಾರಿ ಶಾಲೆ ಮುಚ್ಚಬಾರದು: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಗೊ.ರು ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಅದ್ದೂರಿಯಾಗಿ ಉದ್ಘಾಟನೆಯಾಗಿದೆ. ಕನ್ನಡ ಭಾಷೆಯ ಸಂರಕ್ಷಣೆ, ಶಿಕ್ಷಣದಲ್ಲಿ ಕನ್ನಡ ಮಾಧ್ಯಮದ ಪ್ರಾಮುಖ್ಯತೆ, ಹಾಗೂ ತಂತ್ರಜ್ಞಾನದ ಬಳಕೆ ಮುಂತಾದ ವಿಷಯಗಳ ಬಗ್ಗೆ ಗೊ.ರು ಚನ್ನಬಸಪ್ಪ ಮಾತನಾಡಿದ್ದಾರೆ. ಸರ್ಕಾರದಿಂದ ಕನ್ನಡ ಭಾಷೆ ಮತ್ತು ಶಿಕ್ಷಣಕ್ಕೆ ಒತ್ತು ನೀಡುವಂತೆ ಒತ್ತಾಯಿಸಿದ್ದಾರೆ.

ಒಬ್ಬನೇ ವಿದ್ಯಾರ್ಥಿ‌ ಇದ್ದರೂ ಸರ್ಕಾರಿ ಶಾಲೆ ಮುಚ್ಚಬಾರದು: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ
ಒಬ್ಬನೇ ವಿದ್ಯಾರ್ಥಿ‌ ಇದ್ದರೂ ಸರ್ಕಾರಿ ಶಾಲೆ ಮುಚ್ಚಬಾರದು: ಮಂಡ್ಯ ಸಮ್ಮೇಳನ ಅಧ್ಯಕ್ಷ ಗೊರುಚ
ಪ್ರಶಾಂತ್​ ಬಿ.
| Edited By: |

Updated on:Dec 20, 2024 | 5:02 PM

Share

ಮಂಡ್ಯ, ಡಿಸೆಂಬರ್​ 20: 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ (Kannada Sahitya Sammelana) ಇಂದು ಅದ್ದೂರಿಯಾಗಿ ಚಾಲನೆ ಸಿಕ್ಕಿದೆ. ನಾಡೋಜ ಗೊ ರು ಚನ್ನಬಸಪ್ಪ ಅಧ್ಯಕ್ಷತೆಯಲ್ಲಿ ಕನ್ನಡದ ತೇರು ಸಾಗಿದರೆ, ದೀಪ ಬೆಳಗಿಸುವುದರೊಂದಿಗೆ ಸಿಎಂ ಸಿದ್ದರಾಮಯ್ಯ ನುಡಿಜಾತ್ರೆಗೆ ಚಾಲನೆ ನೀಡಿದ್ದಾರೆ. ಮಂಡ್ಯದಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿರುವುದು ಸಾಕಷ್ಟು ಖುಷಿಯ ವಿಚಾರ ಎಂದು ಗೊ.ರು ಚನ್ನಬಸಪ್ಪ ಅವರು ಭಾಷಣದ ಮಧ್ಯೆ ಭಾವುಕರಾಗಿದ್ದಾರೆ.

ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಗೊ.ರು ಚನ್ನಬಸಪ್ಪ ಅವರು, ಕಸಾಪ ಕನ್ನಡ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಮಂಡ್ಯ ಸಾಕಷ್ಟು ಹೆಸರು ಮಾಡಿರುವ ಜಿಲ್ಲೆ. ರಾಜಕೀಯಕ್ಕೆ ಹೆಚ್ಚು ಕೊಡುಗೆ ಕೊಟ್ಟಿದೆ. ಮಂಡ್ಯದಲ್ಲಿ ಹೆಚ್ಚು ಕನ್ನಡ ಮಾತನಾಡುತ್ತಾರೆ. ನನಗೆ ಗೌರವಾಧ್ಯಕ್ಷ ಮಾಡಿರುವುದು ಹೆಮ್ಮೆಯ ವಿಚಾರ ಎಂದು ಹೇಳಿದ್ದಾರೆ.

ಇದನ್ನೂ ಓದಿ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ: ಹಲವು ವಿಶೇಷತೆಗಳಿಂದ ಕೂಡಿದ ನುಡಿ ಹಬ್ಬ

1994ರಲ್ಲಿ ನಾನು ಕಸಾಪ ಅಧ್ಯಕ್ಷನಾಗಿದ್ದೆ. ಆಗ ಮಂಡ್ಯದಲ್ಲಿ ಸಾಹಿತ್ಯ ಸಮ್ಮೇಳನ ನಡೆದಿತ್ತು. ಸಿಕ್ಕಿರುವ ಅವಕಾಶ ಅನಿರೀಕ್ಷಿತ. ನನಗೆ ಅಧ್ಯಕ್ಷರಾಗಬೇಕು ಎಂದಾಗ ಬೆರಗಾದೆ. ಪರಿಷತ್ ಕನ್ನಡಿಗರ ಸಾರ್ವಭೌಮ ಸಂಸ್ಥೆ. ನನಗೆ ಧ್ವಜ ಹಸ್ತಾಂತರ ಮಾಡಿರುವುದು ರಾಜಕೀಯ ಅಲ್ಲ. ಇದಕ್ಕೆ ಒಂದು ಘನತೆ ಇದೆ. ಶಿಕ್ಷಣ, ತಂತ್ರಜ್ಞಾನ, ಹಿಂದಿ ಏರಿಕೆ, ಗಣಿಗ ಕಲಿಕಾ ಕೇಂದ್ರಗಳು, ಪರಿಸರ ಸಂರಕ್ಷಣೆ ಇವುಗಳ ಬಗ್ಗೆ ಚರ್ಚೆ ಮಾಡಬೇಕು. ನಮ್ಮ ಭಾಷೆ ಸಮೃದ್ಧವಾಗಿ ಬೆಳೆಯಬೇಕು ಎಂದಿದ್ದಾರೆ.

ಒಬ್ಬನೇ ವಿದ್ಯಾರ್ಥಿ‌ ಇದ್ದರು ಸರ್ಕಾರಿ ಶಾಲೆ ಮುಚ್ಚಬಾರದು

ಒಂದನೆಯ ತರಗತಿಯಿಂದ 10ನೇ ತರಗತಿವರೆಗೆ ಕನ್ನಡ ಮಾಧ್ಯಮವೇ ಕಡ್ಡಾಯವಾಗಬೇಕು. ಯಾವ ಕಾರಣಕ್ಕೂ ಬೇರೆ ಭಾಷೆಯನ್ನೂ ಶಿಕ್ಷಣ ಮಾಧ್ಯಮವಾಗಿ ಹೇರಬಾರದು. ಶಿಕ್ಷಣ ಮಾಧ್ಯಮ ಕನ್ನಡ ಮಾಧ್ಯಮದಲ್ಲೇ ಆಗಬೇಕು. ಎಲ್ಲರಿಗೂ ಶಿಕ್ಷಣ ನೀಡುವುದನ್ನು ಸರ್ಕಾರ ಕರ್ತವ್ಯವಾಗಿ ಪರಿಗಣಿಸಬೇಕು. ಒಬ್ಬನೇ ವಿದ್ಯಾರ್ಥಿ‌ ಇದ್ದರು ಸರ್ಕಾರಿ ಶಾಲೆ ಮುಚ್ಚಬಾರದು. ಆಧುನಿಕ ತಂತ್ರಜ್ಞಾನವನ್ನ ಭಾಷೆಯ ಬೆಳೆವಣಿಗೆಗೆ ಹೇಗೆ ಬೆಳಸಿಕೊಳ್ಳಬೇಕು ಎಂಬುದು ಮುಖ್ಯ. ಈ ವಿಚಾರದಲ್ಲಿ ರಾಜ್ಯ ಹಿಂದೆ ಬೀಳಬಾರದು ಎಂದು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಹೋಗುವವರಿಗೆ ಕೆಎಸ್​ಆರ್​ಟಿಸಿ ವಿಶೇಷ ಬಸ್ ವ್ಯವಸ್ಥೆ: ಇಲ್ಲಿದೆ ವಿವರ

ತೆರಿಗೆ ವಿಚಾರವಾಗಿ ಮಾತನಾಡಿದ ಅವರು, ಹಣಕಾಸು ಆಯೋಗ ಕರ್ನಾಟಕಕ್ಕೆ ಬರಬೇಕಾದ ತೆರಿಗೆಯ ಪಾಲನ್ನು ವರ್ಗಾಯಿಸುತ್ತಿಲ್ಲ. ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಮಾಡುತ್ತಿರುವ ಅನ್ಯಾಯದ ಬಗ್ಗೆ ಧ್ವನಿ ಎತ್ತಿರುವುದರಲ್ಲಿ ಕೂಡ ಸತ್ಯಾಂಶವಿದೆ. ಈ ಮಾತನ್ನು ರಾಜಕೀಯವಾಗಿ ನೋಡದಂತೆ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:00 pm, Fri, 20 December 24

Follow Us
Prashantha B
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಕನ್ನಡದಲ್ಲಿ ಬರುತ್ತಿದೆ ಎಐ ಸಿನಿಮಾ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ರಸ್ತೆಯಲ್ಲಿ ಸಿಕ್ಕ ಅನಾಥ ಭಿಕ್ಷುಕನ ಹೇರ್​​ಕಟ್ ಮಾಡಿ ಆರೈಕೆ ಮಾಡಿದ ನಟ
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ನಾಯಕತ್ವ ಬದಲಾವಣೆ: ಸಭೆಯ ರಹಸ್ಯ ಬಿಚ್ಚಿಟ್ಟ ಕೆ.ಸಿ. ವೇಣುಗೋಪಾಲ್
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಹಾಸನ ಸೈಟ್ ವಿವಾದ: ಬೆಂಗಳೂರಲ್ಲಿ ಡಿಜಿಪಿ ಭೇಟಿಯಾದ ಯಶ್ ತಾಯಿ ಪುಷ್ಪಾ
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಪುನೀತ್ ಅಂಗಾಂಗ ದಾನ: ಸಂಬಂಧಿಕರ ನೋವಿನ ಮಾತು
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ಮೇಕೆದಾಟು ಯೋಜನೆಗೆ ಕ್ಯಾತೆ: ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ರಾಜ್ಯಸಭೆ ಆಫರ್​​ ಬಂದರೆ ಸಿದ್ದರಾಮಯ್ಯ ನಿಲುವೇನು? ಇಲ್ಲಿದೆ ಮಾಹಿತಿ
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ಚಾಮುಂಡಿ ಬೆಟ್ಟಕ್ಕೆ ರಣ್ವೀರ್ ಸಿಂಗ್: ಪೂಜಾರಿ ಹೇಳಿದ್ದು ಹೀಗೆ?
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ತಾಜ್ ಮಹಲ್​ ಮುಂದೆ ಪತ್ನಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ರೂಬಿಯೋ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ
ಗಲಾಟೆ ವೇಳೆ ಯುವಕನ ಕಾಲಿಗೆ ಗುಂಡು ಹಾರಿಸಿದ ಉದ್ಯಮಿಯ ಅಂಗರಕ್ಷಕ