AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಪ್​ನಲ್ಲಿ ಪೂರ್ಣ ಪ್ರಕ್ರಿಯೆ; ದರಖಾಸ್ತು ಪೋಡಿ ದುರಸ್ತಿ ಕ್ರಿಯೆಯ ಸರಳೀಕರಣಕ್ಕೆ ಸರ್ಕಾರದ ಕ್ರಮ

Darakhastu podi process: ದರಖಾಸ್ತು ಪೋಡಿ ಅಭಿಯಾನದಲ್ಲಿ ಸರ್ಕಾರವು ಪೋಡಿ ದುರಸ್ತಿ ವಿಧಾನವನ್ನು ಸರಳಗೊಳಿಸಿದೆ. ದರಖಾಸ್ತು ಪೋಡಿ ನಮೂನೆ 1-5, ಮತ್ತು ನಮೂನೆ 6-10ರಲ್ಲಿ ಬದಲಾವಣೆ ಮಾಡಿದೆ. ಪೋಡಿ ದುರಸ್ತಿಯ ಪೂರ್ಣ ಪ್ರಕ್ರಿಯೆಯನ್ನು ತಂತ್ರಾಂಶದಲ್ಲಿ ನಿರ್ವಹಿಸಲು ಕ್ರಮ ಕೈಗೊಳ್ಳಲಾಗಿದೆ.

ಆ್ಯಪ್​ನಲ್ಲಿ ಪೂರ್ಣ ಪ್ರಕ್ರಿಯೆ; ದರಖಾಸ್ತು ಪೋಡಿ ದುರಸ್ತಿ ಕ್ರಿಯೆಯ ಸರಳೀಕರಣಕ್ಕೆ ಸರ್ಕಾರದ ಕ್ರಮ
ಕೃಷಿ ಜಮೀನು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 27, 2024 | 9:34 PM

Share

ಬೆಂಗಳೂರು, ನವೆಂಬರ್ 27: ರೈತರ ಜಮೀನು ವಿಭಜನೆಯ ಕಾರ್ಯವನ್ನು ಸರಳಗೊಳಸುವ ನಿಟ್ಟಿನಲ್ಲಿ ಸರ್ಕಾರ ದರಖಾಸ್ತು ಪೋಡಿ ಅಭಿಯಾನವನ್ನು ಕೆಲ ತಿಂಗಳ ಹಿಂದೆ ಆರಂಭಿಸಿತ್ತು. ಈಗ ದರಖಾಸ್ತು ಪೋಡಿಯಲ್ಲಿ ಇನ್ನಷ್ಟು ಸರಳೀಕರಣಕ್ಕೆ ಸರ್ಕಾರ ಕ್ರಮ ತೆಗೆದುಕೊಂಡಿದೆ. ದರಖಾಸ್ತು ಪೋಡಿ ನಮೂನೆ 1-5 ಮತ್ತು ನಮೂನೆ 6-10ರಲ್ಲಿ ಬದಲಾವಣೆ ಮಾಡಲು ಸರ್ಕಾರ ಸೂಚಿಸಿದೆ.

ದರಖಾಸ್ತು ಪೋಡಿ ಸರಳೀಕರಣಕ್ಕೆ ಕ್ರಮಗಳಿವು…

  • ಒಂದು ಸರ್ವೆ ನಂಬರಿನ ಎಲ್ಲ ಮಂಜೂರಾತಿಯ 1-5 ನಮೂನೆ ಪೋಡಿ ದುರಸ್ತಿ ಕೆಲಸವನ್ನು ಏಕಕಾಲದಲ್ಲಿ ನಿರ್ವಹಣೆ
  • ಪೋಡಿ ದುರಸ್ತಿ ಸಂಪೂರ್ಣ ಪ್ರಕ್ರಿಯೆಯನ್ನು ತಂತ್ರಾಂಶದಲ್ಲಿ ನಿರ್ವಹಿಸಲು ಕ್ರಮ
  • ಎಲ್ಲ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಅಳವಡಿಸಲಾಗುತ್ತಿದೆ.

ಈಗ ಒಂದು ಸರ್ವೆ ನಂಬರಿಗೆ ಒಮ್ಮೆ ದಾಖಲೆಗಳನ್ನು ಅಳವಡಿಸಿದ ನಂತರ ಅವು ಖಾಯಂ ಆಗಿ ಲಭ್ಯವಾಗುತ್ತವೆ. ಈ ದಾಖಲೆಗಳನ್ನು ಯಾರೂ ನಕಲು ಮಾಡಲು ಅಥವಾ ತಿದ್ದಲು ಸಾಧ್ಯವಿಲ್ಲ.

ಇದನ್ನೂ ಓದಿ: ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆ, ಕನಕಲಕ್ಷ್ಮೀ ಬಂಧನ ಆಗಬೇಕು: ವಕೀಲರ ಸಂಘದ ಅಧ್ಯಕ್ಷ ವಿವೇಕ್ ಆಗ್ರಹ

ಈ ಮೊದಲು ಯಾವುದೇ ಒಂದು ದಾಖಲಾತಿ ಲಭ್ಯವಿಲ್ಲದೇ ಹೋದರೂ ಆ ಕಡತವನ್ನು ಗೈರುವಿಲೇ ಕಮಿಟಿಗೆ ಮಂಡಿಸಲಾಗುತ್ತಿತ್ತು. ಈಗ ಕನಿಷ್ಠ 3 ದಾಖಲಾತಿಗಳು ಲಭ್ಯವಿದ್ದಲ್ಲಿ, ತಹಶೀಲ್ದಾರರು ನೈಜತೆಯನ್ನು ಪರಿಶೀಲಿಸಿ ಪೋಡಿ ಕ್ರಮ ವಹಿಸಲು ಆದೇಶಿಸಬಹುದಾಗಿದೆ.

ಹಲವಾರು ವರ್ಷಗಳ ಹಿಂದೆ ರಾಜ್ಯದ 10 ಲಕ್ಷಕ್ಕೂ ಹೆಚ್ಚು ಜನರಿಗೆ ಅಕ್ರಮ ಸಕ್ರಮದಡಿ ಗೋಮಾಳ ಜಮೀನು ಮಂಜೂರಾತಿ ಆಗಿದೆ. ಆದರೆ ಕೆಲ ರೈತರಿಗೆ ಮಾತ್ರ ಪೋಡಿ ದುರಸ್ತಿಯಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಪೋಡಿ ದುರಸ್ತಿ ಅಭಿಯಾನ ನಡೆಸಿದೆ.

ಪೋಡಿ ದುರಸ್ತಿಯ 1-5 ನಮೂನೆಗನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತಿದೆ. ಡಿಜಿಟಲ್ ಆ್ಯಪ್ ಮೂಲಕ ಕಡತಗಳನ್ನು ವೇಗವಾಗಿ ಮತ್ತು ಸರಳವಾಗಿ ತಯಾರಿಸಲು ಸಾಧ್ಯವಾಗಿದೆ. ಇವುಗಳನ್ನು ನಕಲಿ ಮಾಡಲು ಅಥವಾ ತಿದ್ದಲು ಸಾಧ್ಯವಾಗುವುದಿಲ್ಲ.

ಇದನ್ನೂ ಓದಿ: ನನಗೆ ಎಲ್ಲ ಧರ್ಮವೂ ಒಂದೇ, ಓಲೈಕೆ ಮಾಡುವವನಲ್ಲ; ಸಿಎಂ ಸಿದ್ದರಾಮಯ್ಯ

ಈ ಡಿಜಿಟಲ್ ಆ್ಯಪ್ ಅನ್ನು ಹಾಸನದಲ್ಲಿ ಪ್ರಾಯೋಗಿಕವಾಗಿ ಚಾಲನೆಗೊಳಿಸಲಾಗಿತ್ತು. ಅದು ಸಂಪೂರ್ಣ ಯಶಸ್ವಿಯಾದ ಬಳಿಕ ರಾಜ್ಯಾದ್ಯಂತ ಇದನ್ನು ಜಾರಿಗೊಳಿಸಲಾಗಿದೆ. ಈ ಆ್ಯಪ್ ಇಡೀ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ನೀಡಬಲ್ಲುದು. ಯಾವ ಫೈಲು ಯಾವ ಅಧಿಕಾರಿ ಬಳಿ ಇದೆ. ಎಷ್ಟು ದಿನದಿಂದ ವಿಲೇವಾರಿಯಾಗದೇ ಬಾಕಿ ಉಳಿದಿದೆ ಎನ್ನುವ ಮಾಹಿತಿಯು ಆಡಳಿತದ ಗಮನಕ್ಕೆ ಬರುತ್ತದೆ. ಹೀಗಾಗಿ, ಸರ್ವೆ ಅಧಿಕಾರಿಗಳು ಮುತುವರ್ಜಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಬಿ ಸರೋಜಾ ದೇವಿ ಅವರ ಯಾವ ಸಿನಿಮಾ ಸಿಎಂಗೆ ಇಷ್ಟ?
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ಸರೋಜಾ ದೇವಿಯವರನ್ನು ನಮ್ಮೂರ ಮಗಳು ಎಂದು ಕರೆದ ಶಿವಕುಮಾರ್
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ನಟಿ ಬಿ. ಸರೋಜಾದೇವಿ ಅಂತ್ಯಕ್ರಿಯೆ: ಮಣ್ಣಲ್ಲಿ ಮಣ್ಣಾದ ‘ಅಭಿನಯ ಸರಸ್ವತಿ’
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಭೂಮಿಗೆ ಮರಳುತ್ತಿದ್ದಂತೆ ನಗುತ್ತಾ ಕೈ ಬೀಸಿದ ಶುಭಾಂಶು ಶುಕ್ಲಾ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಪರಸ್ಪರ ಸಮ್ಮತಿಯಿಂದ ಡಿವೋರ್ಸ್ ಪಡೆದುಕೊಳ್ಳಲು ಮುಂದಾಗಿರುವ ಪತಿ-ಪತ್ನಿ
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ಬಾಹ್ಯಾಕಾಶದಿಂದ ಪೆಸಿಫಿಕ್ ಮಹಾಸಾಗರಕ್ಕೆ ಇಳಿದ ಡ್ರ್ಯಾಗನ್ ಕ್ಯಾಪ್ಸುಲ್
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ರೈತರು ಸ್ವಯಂಪ್ರೇರಿತರಾಗಿ ಮುಂದಾದರೆ ಮಾತ್ರ ಜಮೀನು ಖರೀದಿ: ಸಿಎಂ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸುರ್ಜೇವಾಲಾ ಕರೆದು ಮಾತಾಡಿದರೆ ಅದರಲ್ಲಿ ತಪ್ಪೇನಿಲ್ಲ: ಜಾರಕಿಹೊಳಿ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಸರೋಜಾದೇವಿ ಎಲ್ಲರೊಂದಿಗೆ ಪ್ರೀತಿಯಿಂದ ಮಾತಾಡುತ್ತಿದ್ದರು: ಸಿದ್ದರಾಮಯ್ಯ
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!
ಹಾಲ್​ನಲ್ಲಿ ಪತಿಯೊಂದಿಗೆ ಸರೋಜಾ ದೇವಿ ಮತ್ತು ತಂದೆ-ತಾಯಿಯವರ ಫೋಟೋ!