ನಾಳೆ ಗ್ರಾಮ ಪಂಚಾಯಿತಿ ಚುನಾವಣೆ: 43,238 ಸ್ಥಾನಗಳಿಗೆ ಮತದಾನ

ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಂಜಾನೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ನಾಳೆ ಗ್ರಾಮ ಪಂಚಾಯಿತಿ ಚುನಾವಣೆ: 43,238 ಸ್ಥಾನಗಳಿಗೆ ಮತದಾನ
ಸಾಂದರ್ಭಿಕ ಚಿತ್ರ
Edited By:

Updated on: Dec 21, 2020 | 9:35 PM

ಬೆಂಗಳೂರು: ಕರ್ನಾಟಕದಲ್ಲಿ ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಾಳೆ ನಡೆಯಲಿದೆ. ಲೋಕಸಭೆ, ವಿಧಾನಸಭೆಗಿಂತಲೂ ಇದು ಭಿನ್ನ. ಮತದಾನದ ದಿನ ಹಲವು ಹಳ್ಳಿಗಳಲ್ಲಿ ಅಕ್ಷರಶಃ ಹಬ್ಬದ ವಾತಾವರಣ ನೆಲೆಗೊಳ್ಳುವುದು ವಾಡಿಕೆ. ದೂರದ ಊರುಗಳಲ್ಲಿ ನೆಲೆಸಿರುವವರನ್ನು ಅಭ್ಯರ್ಥಿಗಳೇ ವಾಹನ ವ್ಯವಸ್ಥೆ ಮಾಡಿ ಊರಿಗೆ ಕರೆಸಿಕೊಳ್ಳುತ್ತಿದ್ದರು. ಬಂದವರಿಗೆ ವೆಜ್ಜು-ನಾನ್​ ವೆಜ್ಜು, ಕುಡಿತದ ಔತಣವೂ ಸಲ್ಲುತ್ತಿತ್ತು. ಆದರೆ ಈ ಬಾರಿ ಕೊರೊನಾ ಹಾವಳಿ ಹಿನ್ನೆಲೆಯಲ್ಲಿ ಸಡಗರದ ಸ್ವರೂಪ ಬದಲಾಗಿದೆ.

ಒಟ್ಟು 43,238 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 1,17,383 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಮುಂಜಾನೆ ಏಳು ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದೆ. ಕೊರೊನಾ ವೈರಸ್​ ಪ್ರಕರಣಗಳು ಇನ್ನೂ ಜೀವಂತವಾಗಿರುವುದರಿಂದ ಮತಗಟ್ಟೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಹಾಗೂ ಮಾಸ್ಕ್​ ಧರಿಸುವುದು ಕಡ್ಡಾಯ. ಇನ್ನು, ಕರೊನಾ ಪಾಸಿಟಿವ್​ ಇರುವ ವ್ಯಕ್ತಿಗಳಿಗೆ ಕೊನೆಯ ಒಂದು ಗಂಟೆ ಅವಧಿಯಲ್ಲಿ ಮತದಾನಕ್ಕೆ ಅವಕಾಶ ಮಾಡಿಕೊಡಲು ಚುನಾವಣಾ ಆಯೋಗ ನಿರ್ಧರಿಸಿದೆ.

ಬೀದರ್ ಹೊರತುಪಡಿಸಿದರೆ ಉಳಿದ ಎಲ್ಲಾ ಜಿಲ್ಲೆಗಳಲ್ಲಿ ಬ್ಯಾಲಟ್​ ಪೇಪರ್​ಗಳನ್ನು ಮತದಾನಕ್ಕೆ ಬಳಕೆ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ಮತಗಟ್ಟೆಗೆ ಭದ್ರತಾ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.

ಅವಿರೋಧ ಆಯ್ಕೆ
ಈಗಾಗಲೇ 4,377 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಯಾವುದೇ ಪ್ರತಿಸ್ಪರ್ಧಿಗಳು ಇಲ್ಲದ ಕಾರಣ ಇವರನ್ನು ಅವಿರೋಧವಾಗಿ ಆಯ್ಕೆ ಮಾಡಿರುವ ಬಗ್ಗೆ ಚುನಾವಣಾ ಆಯೋಗ ಘೋಷಣೆ ಮಾಡಿದೆ. ಹೀಗಾಗಿ ನಾಳೆ 43,238 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯುತ್ತಿದೆ.

ಡಿಸೆಂಬರ್ 27ಕ್ಕೆ ಎರಡನೇ ಹಂತ
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಎರಡು ಹಂತದಲ್ಲಿ ನಡೆಸಲು ಚುನಾವಣಾ ಆಯೋಗ ನಿರ್ಧರಿಸಿತ್ತು. ಈ ಮೊದಲೇ ಘೋಷಣೆ ಮಾಡಿದಂತೆ, ಮಂಗಳವಾರ ಮೊದಲ ಹಂತದ ಮತದಾನ ನಡೆದರೆ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.

ಹೆಚ್ಚಲಿದೆ ಮತದಾನದ ಪ್ರಮಾಣ?

ಈ ಬಾರಿ ಕೊರೊನಾ ವೈರಸ್​ನಿಂದಾಗಿ ಅನೇಕರು ವರ್ಕ್​ ಫ್ರಂ ಹೋಂ ಮಾಡುತ್ತಿದ್ದಾರೆ. ಹೀಗಾಗಿ, ಅನೇಕರು ತಮ್ಮ ಗ್ರಾಮದಲ್ಲೇ ಕುಳಿತು ಕೆಲಸ ಮಾಡುತ್ತಿದ್ದಾರೆ. ಈ ಮೊದಲಾಗಿದ್ದರೆ ಚುನಾವಣೆಗಾಗಿ ಬೆಂಗಳೂರಿನಿಂದಲೋ ಅಥವಾ ಬೇರೆ ನಗರದಿಂದಲೇ ಬರಬೇಕಿತ್ತು. ಆದರೆ, ಈ ಬಾರಿ ಆ ಸಮಸ್ಯೆ ಇರುವುದಿಲ್ಲ. ಹೀಗಾಗಿ, ಮತದಾನದ ಪ್ರಮಾಣ ಹೆಚ್ಚಲಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಗ್ರಾ.ಪಂ. ಚುನಾವಣಾ ಕಣದಲ್ಲಿ BE, MBA ಪದವೀಧರರು.. ಅಭ್ಯರ್ಥಿಗಳಾಗಲು ಉದ್ಯೋಗವನ್ನೇ ತೊರೆದರು..

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us