AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋತರೂ ಕೆಲಸ ಮಾಡುತ್ತೇನೆ ಎಂದಿದ್ದ ಗಂಗಮ್ಮನಿಗೆ ಬಿದ್ದಿದ್ದು ಕೇವಲ ಆರು ಮತಗಳು!

ತುಮಕೂರು ಗ್ರಾಮಾಂತರ ತಾಲೂಕಿನ ಹೆಬ್ಬೂರು ಗ್ರಾಪಂನ ಕಲ್ಕರೆ ವಾರ್ಡ್​​ನಿಂದ ಗಂಗಮ್ಮ ಸ್ಪರ್ಧಿಸಿದ್ದರು. ಗೆದ್ದರೆ, ಗ್ರಾಮದಲ್ಲಿ ಅರಳಿ ಕಟ್ಟೆ ಕಟ್ಟಿಸುತ್ತೇನೆ, ಊರಿಗೆ ರಸ್ತೆ ಮಾಡಿಸುತ್ತೇನೆ ಎಂಬಿತ್ಯಾದಿ ಭರವಸೆ ನೀಡಿದ್ದರು.

ಸೋತರೂ ಕೆಲಸ ಮಾಡುತ್ತೇನೆ ಎಂದಿದ್ದ ಗಂಗಮ್ಮನಿಗೆ ಬಿದ್ದಿದ್ದು ಕೇವಲ ಆರು ಮತಗಳು!
ಗಂಗಮ್ಮ ಹಂಚಿದ್ದ ಪಾಂಪ್ಲೆಟ್
ರಾಜೇಶ್ ದುಗ್ಗುಮನೆ
|

Updated on:Dec 30, 2020 | 7:50 PM

Share

ತುಮಕೂರು: ಗಂಗಮ್ಮ..! ಈ ಹೆಸರನ್ನು ನೀವು ವಾಟ್ಸಪ್​​-ಫೇಸ್​ಬುಕ್​ನಲ್ಲಿ ಓದಿರುತ್ತೀರಿ. ಏಕೆಂದರೆ, ಈ ಬಾರಿಯ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನಿಂತು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿದ್ದರು. ಇದಕ್ಕೆ ಕಾರಣ ಅವರು ನೀಡಿದ್ದ ಆಶ್ವಾಸನೆ. ಗೆಲುವಿನ ಜೊತೆ ಸೋತರೆ ಏನೆಲ್ಲ ಮಾಡುತ್ತೇನೆ ಎನ್ನುವ ಬಗ್ಗೆಯೂ ಗಂಗಮ್ಮ ಉಲ್ಲೇಖಿಸಿದ್ದರು. ಇದನ್ನು ಮತದಾರರು ಗಂಭೀರವಾಗಿ ಪರಿಗಣಿಸಿದಂತೆ ಕಾಣುತ್ತದೆ. ಗಂಗಮ್ಮ ಅವರನ್ನು ಸೋಲಿಸಿ ಬಿಟ್ಟಿದ್ದಾರೆ!

ತುಮಕೂರು ಗ್ರಾಮಾಂತರ ತಾಲೂಕಿನ ಹೆಬ್ಬೂರು ಗ್ರಾಪಂನ ಕಲ್ಕರೆ ವಾರ್ಡ್​​ನಿಂದ ಗಂಗಮ್ಮ ಸ್ಪರ್ಧಿಸಿದ್ದರು. ಗೆದ್ದರೆ, ಗ್ರಾಮದಲ್ಲಿ ಅರಳಿ ಕಟ್ಟೆ ಕಟ್ಟಿಸುತ್ತೇನೆ, ಊರಿಗೆ ರಸ್ತೆ ಮಾಡಿಸುತ್ತೇನೆ ಎಂಬಿತ್ಯಾದಿ ಭರವಸೆ ನೀಡಿದ್ದರು. ಇಷ್ಟೇ ಆಗಿದ್ದರೆ, ಅವರು ಹಂಚಿದ್ದ ಪಾಂಪ್ಲೆಟ್​ ವೈರಲ್​ ಆಗುತ್ತಿರಲಿಲ್ಲವೇನೋ. ಗೆಲುವಿನ ಜೊತೆ ಸೋತರೆ ಏನು ಮಾಡುತ್ತೇನೆ ಎನ್ನುವ ಬಗ್ಗೆಯೂ ಗಂಗಮ್ಮ ಉಲ್ಲೇಖಿಸಿದ್ದರು. ಅನರ್ಹವಾಗಿ ಪಡೆದಿರುವ 25 ಕುಟುಂಬಗಳ ಪಡಿತರ ಚೀಟಿ ರದ್ದು ಮಾಡುತ್ತೇನೆ, ಸರ್ವೇ ನಂಬರ್ 86ರಲ್ಲಿ ಹಳೇ ದಾಖಲೆಯಂತೆ ಸ್ಮಶಾನ ಮಾಡಿಸುವುದು ಸೇರಿ ಹಲವು ಭರವಸೆಗಳನ್ನು ನೀಡಿದ್ದರು.

ಆನೆ ಇದ್ದರೂ ಸಾವಿರ, ಸೋತರೂ ಸಾವಿರ ಎಂಬಂತಿತ್ತು ಇವರು ಕೊಟ್ಟ ಭರವಸೆಗಳು! ಹೀಗಾಗಿ, ಗಂಗಮ್ಮ ಸೋಲಲಿ-ಗೆಲ್ಲಲಿ ಅವರು ಕೆಲಸ ಮಾಡಿಯೇ ಮಾಡುತ್ತಾರೆ ಎಂದು ಜನರು ನಿರ್ಧರಿಸಿದಂತಿದೆ. ಇದೇ ಕಾರಣಕ್ಕೆ ಅವರಿಗೆ ಕೇವಲ ಆರೇ ಮತ ನೀಡಿದ್ದಾರೆ.

ಮತ್ತೊಂದು ವಿಚಿತ್ರ ಎಂದರೆ, ಮತದಾನದ ದಿನ ಗಂಗಮ್ಮ ಅವರು ವೋಟ್​ ಮಾಡಲು ಬಂದಿರಲಿಲ್ಲ! ಮತದಾನದ ದಿನ ಗಂಗಮ್ಮ ತಮಗೆ ತಾವೇ ಮತದಾನ ಮಾಡಿಕೊಳ್ಳದೆ ಮತದಾನದಿಂದ‌ ದೂರ ಉಳಿದಿದ್ದರು. ಈಗ ಸೋಲು ಕಂಡಿದ್ದಾರೆ. ಈಗ ಸೋತರೂ ಮಾಡುವುದಾಗಿ ನೀಡಿರುವ ಭರವಸೆಯನ್ನು ಅವರು ಈಡೇರಿಸುತ್ತಾರಾ ಎನ್ನುವ ಕುತೂಹಲ ಜನರದ್ದು.

ಚುನಾವಣೆಯಲ್ಲಿ ಗೆದ್ದ ತಕ್ಷಣವೇ ಮದ್ಯ ಸೇವನೆ ಮಾಡಿ.. ಚುನಾವಣಾಧಿಕಾರಿ ಎದುರು ಬಂದ ನೂತನ ಸದಸ್ಯ!

Published On - 7:48 pm, Wed, 30 December 20

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ