AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯಿಂದ ಪ್ರವಾಹ ಪರಿಹಾರ ಹಣ ದುರ್ಬಳಕೆ; ಗ್ರಾಮ ಪಂಚಾಯತಿ ಸದಸ್ಯನಿಂದ ಗಂಭೀರ ಆರೋಪ

ಈ ಕುರಿತು ದಾಖಲೆಗಳನ್ನ ಲೋಕಾಯುಕ್ತಕ್ಕೆ ನೀಡಿ, ದೂರು ಸಲ್ಲಿಸುತ್ತೇನೆ ಅಂತಾ ಸಚಿನ್ ತಮ್ಮ ಫೇಸ್ಬುಕ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು. ಪರಿಹಾರ ಕಾಮಗಾರಿಗಳು ಆಗದ ಬಗ್ಗೆ ಪ್ರಶ್ನೆ ಮಾಡಿದಾಗ ಶಾಸಕರಿಗೆ ಕಮಿಷನ್ ಕೊಡಬೇಕು ಅಂತಾ ಇಂಜಿನಿಯರ್​ಗಳು, ಶಾಸಕರ ಆಪ್ತರು ನನಗೆ ಹೇಳಿದ್ದಾರೆ.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯಿಂದ ಪ್ರವಾಹ ಪರಿಹಾರ ಹಣ ದುರ್ಬಳಕೆ; ಗ್ರಾಮ ಪಂಚಾಯತಿ ಸದಸ್ಯನಿಂದ ಗಂಭೀರ ಆರೋಪ
ಗ್ರಾಮ ಪಂಚಾಯತಿ ಸದಸ್ಯ ಸಚಿನ್
TV9 Web
| Edited By: |

Updated on: Jul 17, 2021 | 5:28 PM

Share

ಚಿಕ್ಕಮಗಳೂರು: ನನಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ಕೊಲೆ ಬೆದರಿಕೆ ಹಾಕಿದ್ದಾರೆ ಅಂತಾ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯತಿ ಸದಸ್ಯ ಸಚಿನ್ ಗಂಭೀರ ಆರೋಪ ಮಾಡಿದ್ದಾರೆ. 2019ರಲ್ಲಿ ಪ್ರವಾಹದಿಂದ ಮೂಡಿಗೆರೆ ತಾಲೂಕಿನ ಬಾಳೂರು, ಕಳಸ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪ್ರವಾಹದಿಂದ ಹಾನಿಗೀಡಾದ ರಸ್ತೆ, ಸೇತುವೆ, ತಡೆಗೋಡೆ ಸೇರಿದಂತೆ ವಿವಿಧ ಕಾಮಗಾರಿಗಳ ದುರಸ್ತಿ ಮಾಡಲು ನೂರು ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ. ಆದರೆ ಮಂಜುರಾದ ಹಣವನ್ನ ಶಾಸಕರು, ಇಂಜಿನಿಯರ್ಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತಾ ಸಚಿನ್ ಫೇಸ್ಬುಕ್ ಪೋಸ್ಟ್​ನಲ್ಲಿ ಆರೋಪಿಸಿದ್ದರು.

ಈ ಕುರಿತು ದಾಖಲೆಗಳನ್ನ ಲೋಕಾಯುಕ್ತಕ್ಕೆ ನೀಡಿ, ದೂರು ಸಲ್ಲಿಸುತ್ತೇನೆ ಅಂತಾ ಸಚಿನ್ ತಮ್ಮ ಫೇಸ್ಬುಕ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು. ಪರಿಹಾರ ಕಾಮಗಾರಿಗಳು ಆಗದ ಬಗ್ಗೆ ಪ್ರಶ್ನೆ ಮಾಡಿದಾಗ ಶಾಸಕರಿಗೆ ಕಮಿಷನ್ ಕೊಡಬೇಕು ಅಂತಾ ಇಂಜಿನಿಯರ್​ಗಳು, ಶಾಸಕರ ಆಪ್ತರು ನನಗೆ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ದಾಖಲೆ ಕೂಡ ನನ್ನಲಿದೆ ಅಂತಾ ಸಚಿನ್ ಹೇಳಿದ್ದಾರೆ.

ತಾನು ಪೋಸ್ಟ್ ಹಾಕಿದ ಬಳಿಕ ತನ್ನನ್ನ ಮೂಡಿಗೆರೆ ಐಬಿಗೆ ಬರಲು ಹೇಳಿ, ಒತ್ತಾಯ ಪೂರ್ವಕವಾಗಿ ಫೇಸ್ಬುಕ್ ಪೋಸ್ಟ್ ಡಿಲೀಟ್ ಮಾಡಿಸಿದರು. ಅಲ್ಲದೇ ಬಾಳೂರು ಪೊಲೀಸರಿಗೆ ಹೇಳಿಸಿ, ನನಗೆ ವಾರ್ನಿಂಗ್ ಕೊಡಿಸುತ್ತಿದ್ದಾರೆ. ಶಾಸಕರು ಪ್ರವಾಹದ ಪರಿಹಾರದ ಅನುದಾನವನ್ನ ದುರ್ಬಳಕೆ ಮಾಡಿಕೊಂಡಿರುವುದು ಸತ್ಯ. ಹಾಗಾಗಿಯೇ ವಾಮಮಾರ್ಗದ ಮೂಲಕ ನನಗೆ ಧಮ್ಕಿ ಹಾಕಲು ಬರುತ್ತಿದ್ದಾರೆ. ಎಲ್ಲಾ ದಾಖಲೆ ನನ್ನ ಬಳಿಯಿದ್ದು, ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಅಂತಾ ನಿಡುವಾಳೆ ಗ್ರಾಮ ಪಂಚಾಯತಿ ಸದಸ್ಯ ಸಚಿನ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ

ಆಟೋ ಚಾಲಕ ವಿರಳ ಕಾಯಿಲೆಯಿಂದ ಬಳಲುತ್ತಿದ್ದಾನೆ.. ಚಿಕಿತ್ಸೆಗೆ ನೆರವಾಗಿ: ನಟ ವಿನೋದ್‌ ರಾಜ್ ಮನವಿ

Garuda Purana: ಗರುಡ ಪುರಾಣದಲ್ಲಿ ಹೇಳಿರುವ ಈ 5 ಸಂಗತಿಗಳನ್ನು ಅಳವಡಿಸಿಕೊಂಡರೆ ಬದುಕು ಬದಲಿಸಬಹುದು

(Gram Panchayat Member accused of defrauding MLA MP Krishnamurthy)

2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್​​​ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ