AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯಿಂದ ಪ್ರವಾಹ ಪರಿಹಾರ ಹಣ ದುರ್ಬಳಕೆ; ಗ್ರಾಮ ಪಂಚಾಯತಿ ಸದಸ್ಯನಿಂದ ಗಂಭೀರ ಆರೋಪ

ಈ ಕುರಿತು ದಾಖಲೆಗಳನ್ನ ಲೋಕಾಯುಕ್ತಕ್ಕೆ ನೀಡಿ, ದೂರು ಸಲ್ಲಿಸುತ್ತೇನೆ ಅಂತಾ ಸಚಿನ್ ತಮ್ಮ ಫೇಸ್ಬುಕ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು. ಪರಿಹಾರ ಕಾಮಗಾರಿಗಳು ಆಗದ ಬಗ್ಗೆ ಪ್ರಶ್ನೆ ಮಾಡಿದಾಗ ಶಾಸಕರಿಗೆ ಕಮಿಷನ್ ಕೊಡಬೇಕು ಅಂತಾ ಇಂಜಿನಿಯರ್​ಗಳು, ಶಾಸಕರ ಆಪ್ತರು ನನಗೆ ಹೇಳಿದ್ದಾರೆ.

ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿಯಿಂದ ಪ್ರವಾಹ ಪರಿಹಾರ ಹಣ ದುರ್ಬಳಕೆ; ಗ್ರಾಮ ಪಂಚಾಯತಿ ಸದಸ್ಯನಿಂದ ಗಂಭೀರ ಆರೋಪ
ಗ್ರಾಮ ಪಂಚಾಯತಿ ಸದಸ್ಯ ಸಚಿನ್
TV9 Web
| Edited By: |

Updated on: Jul 17, 2021 | 5:28 PM

Share

ಚಿಕ್ಕಮಗಳೂರು: ನನಗೆ ಶಾಸಕ ಎಂ.ಪಿ.ಕುಮಾರಸ್ವಾಮಿ ಕೊಲೆ ಬೆದರಿಕೆ ಹಾಕಿದ್ದಾರೆ ಅಂತಾ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ನಿಡುವಾಳೆ ಗ್ರಾಮ ಪಂಚಾಯತಿ ಸದಸ್ಯ ಸಚಿನ್ ಗಂಭೀರ ಆರೋಪ ಮಾಡಿದ್ದಾರೆ. 2019ರಲ್ಲಿ ಪ್ರವಾಹದಿಂದ ಮೂಡಿಗೆರೆ ತಾಲೂಕಿನ ಬಾಳೂರು, ಕಳಸ ವ್ಯಾಪ್ತಿಯಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಪ್ರವಾಹದಿಂದ ಹಾನಿಗೀಡಾದ ರಸ್ತೆ, ಸೇತುವೆ, ತಡೆಗೋಡೆ ಸೇರಿದಂತೆ ವಿವಿಧ ಕಾಮಗಾರಿಗಳ ದುರಸ್ತಿ ಮಾಡಲು ನೂರು ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ. ಆದರೆ ಮಂಜುರಾದ ಹಣವನ್ನ ಶಾಸಕರು, ಇಂಜಿನಿಯರ್ಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಅಂತಾ ಸಚಿನ್ ಫೇಸ್ಬುಕ್ ಪೋಸ್ಟ್​ನಲ್ಲಿ ಆರೋಪಿಸಿದ್ದರು.

ಈ ಕುರಿತು ದಾಖಲೆಗಳನ್ನ ಲೋಕಾಯುಕ್ತಕ್ಕೆ ನೀಡಿ, ದೂರು ಸಲ್ಲಿಸುತ್ತೇನೆ ಅಂತಾ ಸಚಿನ್ ತಮ್ಮ ಫೇಸ್ಬುಕ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದರು. ಪರಿಹಾರ ಕಾಮಗಾರಿಗಳು ಆಗದ ಬಗ್ಗೆ ಪ್ರಶ್ನೆ ಮಾಡಿದಾಗ ಶಾಸಕರಿಗೆ ಕಮಿಷನ್ ಕೊಡಬೇಕು ಅಂತಾ ಇಂಜಿನಿಯರ್​ಗಳು, ಶಾಸಕರ ಆಪ್ತರು ನನಗೆ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ಆಡಿಯೋ ದಾಖಲೆ ಕೂಡ ನನ್ನಲಿದೆ ಅಂತಾ ಸಚಿನ್ ಹೇಳಿದ್ದಾರೆ.

ತಾನು ಪೋಸ್ಟ್ ಹಾಕಿದ ಬಳಿಕ ತನ್ನನ್ನ ಮೂಡಿಗೆರೆ ಐಬಿಗೆ ಬರಲು ಹೇಳಿ, ಒತ್ತಾಯ ಪೂರ್ವಕವಾಗಿ ಫೇಸ್ಬುಕ್ ಪೋಸ್ಟ್ ಡಿಲೀಟ್ ಮಾಡಿಸಿದರು. ಅಲ್ಲದೇ ಬಾಳೂರು ಪೊಲೀಸರಿಗೆ ಹೇಳಿಸಿ, ನನಗೆ ವಾರ್ನಿಂಗ್ ಕೊಡಿಸುತ್ತಿದ್ದಾರೆ. ಶಾಸಕರು ಪ್ರವಾಹದ ಪರಿಹಾರದ ಅನುದಾನವನ್ನ ದುರ್ಬಳಕೆ ಮಾಡಿಕೊಂಡಿರುವುದು ಸತ್ಯ. ಹಾಗಾಗಿಯೇ ವಾಮಮಾರ್ಗದ ಮೂಲಕ ನನಗೆ ಧಮ್ಕಿ ಹಾಕಲು ಬರುತ್ತಿದ್ದಾರೆ. ಎಲ್ಲಾ ದಾಖಲೆ ನನ್ನ ಬಳಿಯಿದ್ದು, ಲೋಕಾಯುಕ್ತಕ್ಕೆ ದೂರು ನೀಡುತ್ತೇನೆ ಅಂತಾ ನಿಡುವಾಳೆ ಗ್ರಾಮ ಪಂಚಾಯತಿ ಸದಸ್ಯ ಸಚಿನ್ ಟಿವಿ9ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ

ಆಟೋ ಚಾಲಕ ವಿರಳ ಕಾಯಿಲೆಯಿಂದ ಬಳಲುತ್ತಿದ್ದಾನೆ.. ಚಿಕಿತ್ಸೆಗೆ ನೆರವಾಗಿ: ನಟ ವಿನೋದ್‌ ರಾಜ್ ಮನವಿ

Garuda Purana: ಗರುಡ ಪುರಾಣದಲ್ಲಿ ಹೇಳಿರುವ ಈ 5 ಸಂಗತಿಗಳನ್ನು ಅಳವಡಿಸಿಕೊಂಡರೆ ಬದುಕು ಬದಲಿಸಬಹುದು

(Gram Panchayat Member accused of defrauding MLA MP Krishnamurthy)

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?