AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾ.ಪಂ. ನೌಕರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದನೆ; ಧರಣಿ ಹಿಂಪಡೆಯಲು ನಿರ್ಧರಿಸಿದ ನೌಕರರು

ಅಧಿಕಾರಿಗಳು ನೀಡಿದ ಭರವಸೆಯಂತೆ ಕಾಲಾವಕಾಶ ನೀಡ್ತೇವೆ. ಗ್ರಾಮ ಪಂಚಾಯತ್ ನೌಕರರಿಗೆ ನೇರವಾಗಿ ವೇತನ ನೀಡಲು ಒಪ್ಪಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ಕೈಬಿಡಲು ನಿರ್ಧರಿಸಿದ್ದೇವೆ ಎಂದು ನಾಡಗೌಡ ಹೇಳಿದ್ದಾರೆ.

ಗ್ರಾ.ಪಂ. ನೌಕರರ ಸಮಸ್ಯೆಗಳಿಗೆ ಸರ್ಕಾರ ಸ್ಪಂದನೆ; ಧರಣಿ ಹಿಂಪಡೆಯಲು ನಿರ್ಧರಿಸಿದ ನೌಕರರು
ಗ್ರಾಮ ಪಂಚಾಯತ್ ನೌಕರರ ಧರಣಿ
TV9 Web
| Edited By: |

Updated on: Sep 15, 2021 | 10:19 PM

Share

ಬೆಂಗಳೂರು: ಗ್ರಾಮ ಪಂಚಾಯತ್ ನೌಕರರ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ವೇತನ ವಿಳಂಬ ಆಗದಂತೆ ಕ್ರಮ ಕೈಗೊಳ್ಳಲಾಗುತ್ತದೆ. ಪ್ರತಿ ತಿಂಗಳು 5ನೇ ತಾರೀಖು ಸಂಬಳ ಆಗುವಂತೆ ಕ್ರಮ ಜಾರಿ ಮಾಡಲಾಗುವುದು. 2ನೇ ಕಂತಿನ ಹಣ ನಾಳೆ ಬಿಡುಗಡೆ ಮಾಡುತ್ತೇವೆ. ಗ್ರಾಮ ಪಂಚಾಯತ್ ನೌಕರರ ಪಿಂಚಣಿ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ. ಗ್ರಾಮ ಪಂಚಾಯತ್ ನೌಕರರ ಬಡ್ತಿ ಬಗ್ಗೆ ಸರ್ಕಾರ ಗಮನ ಹರಿಸಲಿದೆ ಎಂದು ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್​ ಹೇಳಿಕೆ ನೀಡಿದ್ದಾರೆ.

ಗ್ರಾಮ ಪಂಚಾಯತ್ ನೌಕರರು ಧರಣಿ ಹಿಂಪಡೆಯಲು ನಿರ್ಧರಿಸಿದ್ದೇವೆ. ನೌಕರರ 4 ಬೇಡಿಕೆಗಳ ಬಗ್ಗೆ ಸರ್ಕಾರಿ ಅಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ. 2ನೇ ಕಂತಿನ ಹಣ ನಾಳೆ ರಿಲೀಸ್​ ಮಾಡುವುದಾಗಿ ಹೇಳಿದ್ದಾರೆ. ಗ್ರಾಮ ಪಂಚಾಯತ್ ನೌಕರರ 2ನೇ ಬೇಡಿಕೆ ಪಿಂಚಣಿ ಬಗ್ಗೆಯೂ ಚರ್ಚೆ ನಡೆಸಲಾಗಿದೆ. ನೇರ ನೇಮಕಾತಿ ಕೋಟಾದಲ್ಲಿ ಬಡ್ತಿ ಮಾರ್ಗಸೂಚಿ ಬದಲು ಮಾಡುವ ಬಗ್ಗೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ಮಾರ್ಗಸೂಚಿ ಬದಲಾವಣೆ ಬಗ್ಗೆ ಚರ್ಚಿಸುವುದಾಗಿ ಹೇಳಿದ್ದಾರೆ ಎಂದು ಗ್ರಾಮ ಪಂಚಾಯತ್ ನೌಕರರ ಸಂಘದ ಪದಾಧಿಕಾರಿ ನಾಡಗೌಡ ಹೇಳಿಕೆ ನೀಡಿದ್ದಾರೆ.

ಕೆಲ ಬೇಡಿಕೆಗಳನ್ನು ನಾಳೆಯೇ ಈಡೇರಿಸುವುದಾಗಿ ಹೇಳಿದ್ದಾರೆ. ಸರ್ಕಾರಿ ಅಧಿಕಾರಿಗಳು ಮುಷ್ಕರ ಹಿಂಪಡೆಯಿರಿ ಅಂದಿದ್ದಾರೆ. ಅಧಿಕಾರಿಗಳು ನೀಡಿದ ಭರವಸೆಯಂತೆ ಕಾಲಾವಕಾಶ ನೀಡ್ತೇವೆ. ಗ್ರಾಮ ಪಂಚಾಯತ್ ನೌಕರರಿಗೆ ನೇರವಾಗಿ ವೇತನ ನೀಡಲು ಒಪ್ಪಿದ್ದಾರೆ. ಹೀಗಾಗಿ ನಮ್ಮ ಹೋರಾಟವನ್ನು ಕೈಬಿಡಲು ನಿರ್ಧರಿಸಿದ್ದೇವೆ ಎಂದು ನಾಡಗೌಡ ಹೇಳಿದ್ದಾರೆ.

ಇದನ್ನೂ ಓದಿ: ಜಿ. ಪಂ, ತಾ. ಪಂ ಮರು ವಿಂಗಡಣಾ ವಿಧೇಯಕದಿಂದ ಚುನಾವಣೆ ವಿಳಂಬ ಆಗದು: ಸಿಎಂ ಭರವಸೆ

ಇದನ್ನೂ ಓದಿ: ನನ್ನನ್ನು ಇಂಜಿನಿಯರ್ ಬೊಮ್ಮಾಯಿ ಅಂದ್ರೆ ಖುಷಿಯಾಗುತ್ತೆ; ಸಿಎಂ ಬಸವರಾಜ ಬೊಮ್ಮಾಯಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?