AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿತ್ರದುರ್ಗ: ಓದುವ ಹವ್ಯಾಸಕ್ಕೆ ಹೊಸ ಹುರುಪು ನೀಡಲು ಸಿದ್ಧವಾಗಿದೆ ಡಿಜಿಟಲ್​ ಗ್ರಂಥಾಲಯ

ಮಕ್ಕಳನ್ನು ಓದಿನತ್ತ ಸೆಳೆಯುವ ನಿಟ್ಟಿನಲ್ಲಿ ಆಕರ್ಷಕ ಪೇಂಟಿಂಗ್, ಸಾಹಿತಿ ಮತ್ತು ಸಾಧಕರ ಚಿತ್ರ ಹಾಕಲಾಗಿದೆ. ವಿವಿಧ ನುಡಿ ಬರಹಗಳನ್ನು ಹಾಕಲಾಗಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿ ಸಿಗಲಿದೆ ಎಂದು ಪಿಡಿಓ ರೂಪಾ ತಿಳಿಸಿದ್ದಾರೆ.

ಚಿತ್ರದುರ್ಗ: ಓದುವ ಹವ್ಯಾಸಕ್ಕೆ ಹೊಸ ಹುರುಪು ನೀಡಲು ಸಿದ್ಧವಾಗಿದೆ ಡಿಜಿಟಲ್​ ಗ್ರಂಥಾಲಯ
ಡಿಜಿಟಲ್​ ಗ್ರಂಥಾಲಯ
TV9 Web
| Updated By: preethi shettigar|

Updated on:Jul 13, 2021 | 9:39 AM

Share

ಚಿತ್ರದುರ್ಗ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂದಿಗೂ ಗುಣಮಟ್ಟದ ಶಿಕ್ಷಣ ಗಗನಕುಸುಮವೇ ಸರಿ. ಆದರೆ ಕೋಟೆನಾಡು ಚಿತ್ರದುರ್ಗ ಜಿಲ್ಲೆಯ ಅದೊಂದು ಗ್ರಾಮದಲ್ಲಿ ಮಾತ್ರ ಶಿಕ್ಷಣ ಮತ್ತು ಅಧ್ಯಯನಕ್ಕೆ ಮೊದಲ ಆದ್ಯತೆ ನೀಡಲಾಗಿದೆ. ಮಕ್ಕಳು ಶಾಲೆ ಕಡೆಗೆ ಈಗ ಹೋಗುವುದು ಸಾಧ್ಯವಿಲ್ಲ. ಆದರೆ ಇಲ್ಲಿ ನಿರ್ಮಾಣವಾದ ಡಿಜಿಟಲ್​ ಗ್ರಂಥಾಲಯ (Digital Library) ಮಕ್ಕಳ ಓದುವ ಹವ್ಯಾಸಕ್ಕೆ ಹೊಸ ಹುರುಪು ತಂದುಕೊಟ್ಟಿದೆ. ನಗರ ಪ್ರದೇಶದ ಗ್ರಂಥಾಲಯ ಮೀರಿಸುವಂತಹ ಡಿಜಿಟಲ್ ಗ್ರಂಥಾಲಯ ಇದಾಗಿದ್ದು, ಎಲ್ಲರ ಗಮನವನ್ನು ತನ್ನತ್ತ ಸೆಳೆಯುತ್ತಿದೆ.

ಚಿತ್ರದುರ್ಗ ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಡಿಜಿಟಲ್ ಗ್ರಂಥಾಲಯ ವಿದ್ಯಾರ್ಥಿಗಳನ್ನು ತನ್ನತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರ ವಹಿಸಿದೆ. ಗ್ರಾಮ ಪಂಚಾಯತಿ ಸದಸ್ಯರು ಹಾಗೂ ಅಧಿಕಾರಿಗಳು ಶಿಕ್ಷಣ ಮತ್ತು ಅಧ್ಯಯನಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದು,  ಗ್ರಾಮ ಪಂಚಾಯತಿ ಅಧೀನದ ಕಟ್ಟಡದಲ್ಲಿ ಸುಸಜ್ಜಿತ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಮಾಡಿದ್ದಾರೆ. ಆ ಮೂಲಕ ಗ್ರಾಮೀಣ ಭಾಗದ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕೆಂಬ ಕನಸಿನ ಹೆಜ್ಜೆಯಿಟ್ಟಿದ್ದಾರೆ‌. ಜಿಲ್ಲೆಯಲ್ಲಿ ಮೊದಲ ಬಾರಿಗೆ ಗ್ರಾಮೀಣ ಭಾಗದಲ್ಲಿ ಸುಸಜ್ಜಿತ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಆಗಿದೆ ಎಂದು ಗ್ರಾಮ ಪಂಚಾಯತಿ ಸದಸ್ಯರಾದ ಸುರೇಶ ಸಂತೋಷ ವ್ಯಕ್ತಪಡಿಸಿದ್ದಾರೆ.

ಈ ಡಿಜಿಟಲ್ ಗ್ರಂಥಾಲಯ ನಿರ್ಮಾಣಕ್ಕೆ ಸುಮಾರು ನಾಲ್ಕು ಲಕ್ಷ ರೂಪಾಯಿ ಖರ್ಚು ಮಾಡಲಾಗಿದೆ. ನೂರಾರು ಉಪಯುಕ್ತ ಪುಸ್ತಕಗಳು, ಟ್ಯಾಬ್‌, ಕಂಪ್ಯೂಟರ್ ಹಾಗೂ ಇಂಟರ್ ನೆಟ್ ಸೌಲಭ್ಯ ಇಲ್ಲಿ ಲಭ್ಯವಿದೆ. ಹತ್ತು ಸಾವಿರಕ್ಕೂ ಹೆಚ್ಚು ಪುಸ್ತಕಗಳನ್ನು ಇಲ್ಲಿ ಇಂಟರ್​ನೆಟ್​ ಮೂಲಕ ಓದಬಹುದು. ಮಕ್ಕಳನ್ನು ಓದಿನತ್ತ ಸೆಳೆಯುವ ನಿಟ್ಟಿನಲ್ಲಿ ಆಕರ್ಷಕ ಪೇಂಟಿಂಗ್, ಸಾಹಿತಿ ಮತ್ತು ಸಾಧಕರ ಚಿತ್ರ ಹಾಕಲಾಗಿದೆ. ವಿವಿಧ ನುಡಿ ಬರಹಗಳನ್ನು ಹಾಕಲಾಗಿದ್ದು, ವಿದ್ಯಾರ್ಥಿಗಳಿಗೆ ಉಪಯುಕ್ತ ಮಾಹಿತಿ ಇಲ್ಲಿ ಸಿಗಲಿದೆ ಎಂದು ಪಿಡಿಓ ರೂಪಾ ತಿಳಿಸಿದ್ದಾರೆ.

ಒಟ್ಟಾರೆಯಾಗಿ ಕೋಟೆನಾಡು ಚಿತ್ರದುರ್ಗ ತಾಲೂಕಿನ ಮಾಳಪ್ಪನಹಟ್ಟಿ ಗ್ರಾಮದಲ್ಲಿ ಜಿಲ್ಲೆಯಲ್ಲೇ ಮೊದಲ ಡಿಜಿಟಲ್ ಗ್ರಂಥಾಲಯ ನಿರ್ಮಾಣ ಆಗಿದೆ. ಕೊರೊನಾ ಸಂಕಷ್ಟದ ಕಾಲದಲ್ಲಿ ಮಕ್ಕಳ ಪಾಲಿಗೆ ಈ ಕೇಂದ್ರ ಅಧ್ಯಯನಕ್ಕೆ ಸದ್ಬಳಕೆ ಆಗಲಿ ಎಂಬ ಆಶಯ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಅಧಿಕಾರಿಗಳದ್ದಾಗಿದೆ. ಶಿಕ್ಷಣ ಮತ್ತು ಅಧ್ಯಯನಕ್ಕೆ ಆದ್ಯತೆ ನೀಡಿದ ಕಾರ್ಯ ನಿಜಕ್ಕೂ ಶ್ಲಾಘನೀಯ.

ಇದನ್ನೂ ಓದಿ: ವಿದ್ಯಾರ್ಜನೆಗಾಗಿ ಗ್ರಂಥಾಲಯ ನಿರ್ಮಾಣ; ಯಾದಗಿರಿ ಜಿಲ್ಲೆಯ ಮಕ್ಕಳ ಶಿಕ್ಷಣಕ್ಕೆ ಬೆಳಕಾದ ಯುವಕರ ತಂಡ

ಅಟ್ಲಾಂಟಾ ಸಂಸ್ಥೆಯಿಂದ ಬೆಂಗಳೂರು ನಗರ ಕೇಂದ್ರ ಗ್ರಂಥಾಲಯಕ್ಕೆ 15 ಸಾವಿರ ಪುಸ್ತಕಗಳ ಕೊಡುಗೆ: ಸುರೇಶ್ ಕುಮಾರ್

Published On - 9:30 am, Tue, 13 July 21

ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ರಿಷಭ್ ಪಂತ್ ಬಗ್ಗೆ ಹೊರಬಿತ್ತು ಮತ್ತೊಂದು ಬಿಗ್ ಅಪ್​ಡೇಟ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಇಬ್ಬರು ಮುಸ್ಲಿಂ ಯುವಕರು ಮಠವನ್ನು ಪ್ರವೇಶಿಸಿದ್ದರು: ಅರವಿಂದ್ ಬೆಲ್ಲದ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಯಾವ ಸ್ವಾಮೀಜಿಯಿಂದಲೂ ನಾನು ಸ್ವಂತಕ್ಕಾಗಿ ಲಾಭ ಮಾಡಿಕೊಂಡಿಲ್ಲ: ಯತ್ನಾಳ್
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಢಾಕಾ ಕಾಲೇಜಿನ ಮೇಲೆ ಚೀನಾ ನಿರ್ಮಿತ ಯುದ್ಧ ವಿಮಾನ ಪತನ, ಹಲವು ಮಂದಿ ಸಾವು
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ಚಾಮರಾಜನಗರ ಹಾಗೂ ಪಾವಗಡ ಎರಡಕ್ಕೂ ಭೇಟಿ ನೀಡಿದ ವಿಚಾರವಾದಿ ಸಿಎಂ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ರಾಹುಲ್ ಗಾಂಧಿ ತಮ್ಮ ಆಕಾಂಕ್ಷೆಯನ್ನು ತ್ಯಾಗಮಾಡಬಹುದು: ರಾಯರೆಡ್ಡಿ
ಹಾಸನ-ಸೊಲ್ಲಾಪುರ ಎಕ್ಸ್​ಪ್ರೆಸ್ ರೈಲಿನಲ್ಲಿ ಹೊಗೆ: ಇಳಿದು ಓಡಿದ ಜನ
ಹಾಸನ-ಸೊಲ್ಲಾಪುರ ಎಕ್ಸ್​ಪ್ರೆಸ್ ರೈಲಿನಲ್ಲಿ ಹೊಗೆ: ಇಳಿದು ಓಡಿದ ಜನ
VIDEO: ಎದ್ದು ಬಿದ್ದು ಓಡಿದರೂ ರನೌಟ್ ಆದ ಪಾಕ್ ಬ್ಯಾಟರ್
VIDEO: ಎದ್ದು ಬಿದ್ದು ಓಡಿದರೂ ರನೌಟ್ ಆದ ಪಾಕ್ ಬ್ಯಾಟರ್
ಹೊರೆ ಎನಿಸಲಾರಂಭಿಸಿದ ಆನ್ಲೈನ್ ಪೇಮೆಂಟ್​ಗಳು, ಸರ್ಕಾರಗಳು ಮಾತ್ರ ಮೌನ
ಹೊರೆ ಎನಿಸಲಾರಂಭಿಸಿದ ಆನ್ಲೈನ್ ಪೇಮೆಂಟ್​ಗಳು, ಸರ್ಕಾರಗಳು ಮಾತ್ರ ಮೌನ
ಹೊಸ ಬಿಸ್ನೆಸ್ ಆರಂಭಿಸಿದ ರಶ್ಮಿಕಾ ಮಂದಣ್ಣ; ನೆನಪುಗಳನ್ನು ತೆರೆದಿಡೋ ಕೆಲಸ
ಹೊಸ ಬಿಸ್ನೆಸ್ ಆರಂಭಿಸಿದ ರಶ್ಮಿಕಾ ಮಂದಣ್ಣ; ನೆನಪುಗಳನ್ನು ತೆರೆದಿಡೋ ಕೆಲಸ