AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ರೇಷನ್ ಇಲ್ಲ; ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ನಿರ್ಧಾರ

ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕೊರೊನಾ ಹಿನ್ನೆಲೆ ಕೊತಬಾಳ ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ನಡೆಸಿತ್ತು. ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುವವರಿಗೆ ರೇಷನ್ ನೀಡಬಾರದೆಂದು ಸರ್ವಾನುಮತದಿಂದ ಎಲ್ಲ ಸದಸ್ಯರು ನಿರ್ಣಯ ಕೈಗೊಂಡಿದ್ದಾರೆ.

ಗದಗ: ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ರೇಷನ್ ಇಲ್ಲ; ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ನಿರ್ಧಾರ
ಕೊತಬಾಳ ಗ್ರಾಮ ಪಂಚಾಯತಿ
TV9 Web
| Updated By: sandhya thejappa|

Updated on:Jun 05, 2021 | 1:09 PM

Share

ಗದಗ: ಕೊರೊನಾ ಲಸಿಕೆ ಬಗ್ಗೆ ಜನರಿಗೆ ಈಗಲೂ ಅನುಮಾನವಿದೆ. ಲಸಿಕೆ ತೆಗೆದುಕೊಂಡರೆ ಅಡ್ಡಪರಿಣಾಮಗಳಾಗುತ್ತಾ ಎಂಬ ಭಯದಲ್ಲಿದ್ದಾರೆ. ಯಾವುದೇ ಅಡ್ಡಪರಿಣಾಮಗಳಾಲ್ಲ ಅಂತ ಲಸಿಕೆ ಪಡೆದವರು ಹೇಳಿದರೂ, ಅರಿವು ಮೂಡಿಸಿದರೂ ಬಹುತೇಕರು ಕೊರೊನಾ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜಿಲ್ಲೆಯ ಗ್ರಾಮ ಪಂಚಾಯತಿಯೊಂದು ಜನರ ಒಳಿತಿಗಾಗಿ ಒಂದು ನಿರ್ಧಾರವನ್ನು ತೆಗೆದುಕೊಂಡಿದೆ. ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವುದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ನೀಡಲ್ಲ ಎಂದು ಗ್ರಾಮ ಪಂಚಾಯತಿ ಸದಸ್ಯರು ಸಾಮಾನ್ಯ ಸಭೆಯಲ್ಲಿ ನಿರ್ಧರಿಸಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಮ ಪಂಚಾಯತಿ ಸಾಮಾನ್ಯ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ. ಕೊರೊನಾ ಹಿನ್ನೆಲೆ ಕೊತಬಾಳ ಗ್ರಾಮ ಪಂಚಾಯತಿ ಸಾಮಾನ್ಯ ಸಭೆ ನಡೆಸಿತ್ತು. ಲಸಿಕೆ ತೆಗೆದುಕೊಳ್ಳಲು ಹಿಂದೇಟು ಹಾಕುವವರಿಗೆ ರೇಷನ್ ನೀಡಬಾರದೆಂದು ಸರ್ವಾನುಮತದಿಂದ ಎಲ್ಲ ಸದಸ್ಯರು ನಿರ್ಣಯ ಕೈಗೊಂಡಿದ್ದಾರೆ.

ವ್ಯಾಕ್ಸಿನೇಶನ್ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ಪತ್ರವೊಂದನ್ನು ನೀಡಲಾಗುತ್ತದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡ್ನೊಂದಿಗೆ ಆರೋಗ್ಯ ಇಲಾಖೆ ಪತ್ರ ತರಬೇಕು. ವ್ಯಾಕ್ಸಿನ್ ಹಾಕಿಸಿಕೊಂಡಿರುವ ಬಗ್ಗೆ ಪತ್ರ ನೀಡಿದರೆ ಮಾತ್ರ ಅಂತವರಿಗೆ ರೇಷನ್ ನೀಡಲಾಗುತ್ತದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಈ ಕಟ್ಟುನಿಟ್ಟಿನ ನಿರ್ಧಾರ ತೆಗೆದುಕೊಳ್ಳಲಾಗಿದೆ. ಜನರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಒಳ್ಳೆಯದಾಗಿದ್ದು, ನಿರ್ಧಾರ ಮಾಡಿದ ದಿನದಂದೇ ನೂರಕ್ಕೂ ಹೆಚ್ಚು ಗ್ರಾಮಸ್ಥರು ವ್ಯಾಕ್ಸಿನ್ ಪಡೆದಿದ್ದಾರೆ ಎಂಬ ಮಾಹಿತಿ ಇದೆ.

ಇದನ್ನೂ ಓದಿ

ಅಸಂಘಟಿತ ವಲಯದ ಕಾರ್ಮಿಕರ ಬ್ಯಾಂಕ್ ಖಾತೆಗೆ ನೇರ ನಗದು ಜಮೆ ಮಾಡುವುದಕ್ಕೆ ಸಿಎಂ ಯಡಿಯೂರಪ್ಪ ಚಾಲನೆ

ಇಂದು ‘ಸಂಪೂರ್ಣ ಕ್ರಾಂತಿ ದಿನ್’​​ ಆಚರಣೆ ಮಾಡುತ್ತಿರುವ ರೈತ ಸಂಘಟನೆಗಳು; ಕೇಂದ್ರದ ವಿರುದ್ಧ ಮುಂದುವರಿದ ಸಮರ

(Grama Panchayat of gadag decided not to provide rations for those who are not get vaccinated)

Published On - 1:09 pm, Sat, 5 June 21

‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
‘ಸ್ಟುಪಿಡ್’, ‘... ಎಲಿಮೆಂಟ್’: ರಜತ್ ವಿರುದ್ಧ ಅಶ್ವಿನಿ ಕೆಂಡಾಮಂಡಲ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ತಿರುವನಂತಪುರಂ ಕಾರ್ಪೊರೇಷನ್‌ ಫಲಿತಾಂಶದ ಬಳಿಕ ಬಿಜೆಪಿ ಕಾರ್ಯಕರ್ತರ ಸಂಭ್ರಮ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಫ್ಯಾನ್ಸ್- ಪೊಲೀಸರ ನಡುವೆ ಚೇರ್ ಎಸೆದಾಟ
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್