AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tulunada Aati: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿದೆ ಕರಾವಳಿಯ ವೈಭವ; ಆ 09 ರಂದು ಬೃಹತ್ ‘ತುಳುನಾಡ ಆಟಿ’ ಉತ್ಸವ

ಬೆಂಗಳೂರಿನಲ್ಲಿ ಆಟಿ ಸಂಭ್ರಮ: ರಾಜಧಾನಿಯಲ್ಲಿ ತುಳುನಾಡಿನ ವೈಭವವನ್ನು ಪಸರಿಸಲು 'ಜೈ ತುಳುನಾಡ್ ಬೆಂಗಳೂರು (ರಿ.)' ವತಿಯಿಂದ ಆಗಸ್ಟ್ 09 ರಂದು ಬಿಳೇಕಹಳ್ಳಿಯ ಮುಲ್ಕಿ ಸುಂದರ್ ರಾಮ ಶೆಟ್ಟಿ ಸಭಾಂಗಣದಲ್ಲಿ ಬೃಹತ್ 'ತುಳುನಾಡ ಆಟಿ' ಉತ್ಸವ ಆಯೋಜಿಸಲಾಗಿದೆ. ಯಕ್ಷಗಾನ, ಆಟಿ ಕಲೆಂಜಿ, ಜಾನಪದ ಆಟಗಳು, ಸಾಧಕರಿಗೆ ಸನ್ಮಾನ ಹಾಗೂ ಗಣ್ಯಾತಿಗಣ್ಯರ ಸಾನ್ನಿಧ್ಯದೊಂದಿಗೆ 10,000ಕ್ಕೂ ಹೆಚ್ಚು ಜನಸ್ತೋಮ ಈ ಸಾಂಸ್ಕೃತಿಕ ಕೌತುಕಕ್ಕೆ ಸಾಕ್ಷಿಯಾಗಲಿದೆ.

Tulunada Aati: ಬೆಂಗಳೂರಿನಲ್ಲಿ ಅನಾವರಣಗೊಳ್ಳಲಿದೆ ಕರಾವಳಿಯ ವೈಭವ; ಆ 09 ರಂದು ಬೃಹತ್ ‘ತುಳುನಾಡ ಆಟಿ’ ಉತ್ಸವ
‘ತುಳುನಾಡ ಆಟಿ’ ಉತ್ಸವ
ಅಕ್ಷತಾ ವರ್ಕಾಡಿ
|

Updated on: Aug 05, 2026 | 1:42 PM

Share

ಕರಾವಳಿಯ ವಿಶಿಷ್ಟ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಆಚರಣೆಗಳನ್ನು ರಾಜಧಾನಿ ಬೆಂಗಳೂರಿನ ಜನಮಾನಸಕ್ಕೆ ಪರಿಚಯಿಸುವ ಸದುದ್ದೇಶದಿಂದ ‘ಜೈ ತುಳುನಾಡ್ ಬೆಂಗಳೂರು (ರಿ.)’ ಸಂಸ್ಥೆಯು ಬೃಹತ್ ಸಾಂಸ್ಕೃತಿಕ ಉತ್ಸವವನ್ನು ಹಮ್ಮಿಕೊಂಡಿದೆ. ಬರುವ ಆಗಸ್ಟ್ 09, 2026 ರಂದು ಬೆಂಗಳೂರಿನ ಬಿಳೇಕಹಳ್ಳಿ ವಿಜಯ ಬ್ಯಾಂಕ್ ಕಾಲೋನಿಯಲ್ಲಿರುವ ಮುಲ್ಕಿ ಸುಂದರ್ ರಾಮ ಶೆಟ್ಟಿ ಸಭಾಂಗಣದಲ್ಲಿ ‘ತುಳುನಾಡ ಆಟಿ’ ಸಂಭ್ರಮವು ಅತ್ಯಂತ ವೈಭವದಿಂದ ಜರುಗಲಿದೆ. ತುಳುನಾಡಿನ ಮಣ್ಣಿನ ಸೊಗಡನ್ನು ಬಿಂಬಿಸುವ ಈ ಐತಿಹಾಸಿಕ ವೇದಿಕೆಯಲ್ಲಿ ಸುಮಾರು 10,000ಕ್ಕೂ ಅಧಿಕ ತುಳುನಾಡು ಮತ್ತು ಕರಾವಳಿ ಸಂಸ್ಕೃತಿ ಪ್ರೇಮಿಗಳು ಒಂದೇ ಕಡೆ ಸೇರುವ ನಿರೀಕ್ಷೆಯಿದೆ.

ದಿನಪೂರ್ತಿ ಕರಾವಳಿ ಕಲಾ ವೈಭವ ಮತ್ತು ಜಾನಪದ ಆಟಗಳು:

ಈ ಭವ್ಯ ಸಾಂಸ್ಕೃತಿಕ ಉತ್ಸವದ ಆಕರ್ಷಣೆಯಾಗಿ ತುಳುನಾಡಿನ ಅಪ್ಪಟ ಪರಂಪರೆಯನ್ನು ಸಾರುವ ವಿವಿಧ ಜನಪದ ಕಲಾಪ್ರದರ್ಶನಗಳು ನಡೆಯಲಿವೆ. ಕರಾವಳಿಯ ಜಾನಪದ ಕಲೆಗೆ ಮೆರುಗು ನೀಡುವ ಯಕ್ಷಗಾನ ಮತ್ತು ಸಾಂಪ್ರದಾಯಿಕ ಆಟಿ ಕಲೆಂಜಿ ಪ್ರದರ್ಶನಗಳು ಪ್ರಮುಖ ಕೇಂದ್ರಬಿಂದುವಾಗಿರಲಿವೆ. ಇದರೊಂದಿಗೆ ಉತ್ಸವದಲ್ಲಿ ಕರಾವಳಿಯ ಜಾನಪದ ಸೊಗಡಿನ ಕುಣಿತ ಭಜನೆ ಹಾಗೂ ಸಾಂಪ್ರದಾಯಿಕ ಆಟೋಟಗಳನ್ನು ಆಯೋಜಿಸಲಾಗಿದೆ. ಯುವ ಜನಾಂಗಕ್ಕೆ ತುಳು ಲಿಪಿ, ಭಾಷೆ ಹಾಗೂ ಸಾಂಸ್ಕೃತಿಕ ಪರಂಪರೆಯ ಮಹತ್ವವನ್ನು ತಿಳಿಸಿಕೊಡುವ ಮತ್ತು ಅವರಲ್ಲಿ ಜಾಗೃತಿ ಮೂಡಿಸುವ ವಿಶೇಷ ಕಾರ್ಯಕ್ರಮಗಳೂ ಈ ಸಂದರ್ಭದಲ್ಲಿ ನಡೆಯಲಿವೆ.

ರಾಜ್ಯ ಮತ್ತು ರಾಷ್ಟ್ರಮಟ್ಟದ ಗಣ್ಯಾತಿಗಣ್ಯರ ಸಾನ್ನಿಧ್ಯ:

ಈ ಬೃಹತ್ ಸಮಾರಂಭಕ್ಕೆ ಸಾಕ್ಷಿಯಾಗಲು ರಾಜ್ಯ ಮತ್ತು ರಾಷ್ಟ್ರಮಟ್ಟದ ಪ್ರಮುಖ ರಾಜಕೀಯ ವ್ಯಕ್ತಿಗಳು, ಸಚಿವರು, ಶಾಸಕರು ಹಾಗೂ ಧಾರ್ಮಿಕ ಧುರೀಣರು ಆಗಮಿಸಲಿದ್ದಾರೆ. ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ. ಕೆ. ಶಿವಕುಮಾರ್, ಕೇಂದ್ರ ಸಚಿವರಾದ ಕುಮಾರಿ ಶೋಭಾ ಕರಂದ್ಲಾಜೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀ ಯು. ಟಿ. ಖಾದರ್, ಮಾಜಿ ಸಚಿವರಾದ ಶ್ರೀ ಅರವಿಂದ ಲಿಂಬಾವಳಿ, ಮತ್ತು ಪುತ್ತೂರು ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಅವರು ವೇದಿಕೆಯನ್ನು ಅಲಂಕರಿಸಲಿದ್ದಾರೆ. ಅಲ್ಲದೆ, ಭಾರತೀಯ ಕುಸ್ತಿ ಸಂಘದ ಜಂಟಿ ಕಾರ್ಯದರ್ಶಿ ಶ್ರೀ ಬಿ. ಗುಣರಂಜನ್ ಶೆಟ್ಟಿ, ಧಾರ್ಮಿಕ ಮುಖಂಡರಾದ ಶ್ರೀ ಕಿರಣ್ ಚಂದ್ರ ಡಿ. ಪುಷ್ಪಗಿರಿ ಹಾಗೂ ಅಳುಪ ರಾಜವಂಶಸ್ಥರಾದ ಡಾ. ಆಕಾಶ್ ರಾಜ್ ಜೈನ್ ಅವರ ವಿಶೇಷ ಉಪಸ್ಥಿತಿ ಇರಲಿದೆ.

ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಗೌರವ:

ಸಮಾಜದ ವಿವಿಧ ರಂಗಗಳಲ್ಲಿ ಗಣನೀಯ ಸೇವೆ ಸಲ್ಲಿಸಿ ಸಾಧನೆಗೈದ ಸಾಧಕರನ್ನು ಈ ವೇದಿಕೆಯಲ್ಲಿ ಗುರುತಿಸಿ ಗೌರವಿಸಲಾಗುತ್ತಿದೆ. ಸಮಾಜ ಸೇವೆಗಾಗಿ ಶ್ರೀ ನವೀನ್ ಭಂಡಾರಿ, ಕ್ರೀಡಾ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀಮತಿ ಮುಕ್ತ ಯು. ಶೆಟ್ಟಿ ಹಾಗೂ ತುಳು ಲಿಪಿ ಮತ್ತು ಭಾಷಾ ಸೇವೆಗಾಗಿ ಶ್ರೀ ನಿಧಿಶ್ ಶೆಟ್ಟಿ ಅವರಿಗೆ ವಿಶೇಷ ಸನ್ಮಾನ ನೆರವೇರಲಿದೆ.

ಸಮಸ್ತ ಸಂಸ್ಕೃತಿ ಪ್ರೇಮಿಗಳಿಗೆ ಆಯೋಜಕರ ಮುಕ್ತ ಆಹ್ವಾನ:

ತುಳುನಾಡಿನ ಭವ್ಯ ಕಲೆ, ಅಪ್ಪಟ ಸಂಸ್ಕೃತಿ ಮತ್ತು ಅನಾದಿ ಕಾಲದ ಆಚರಣೆಗಳನ್ನು ಎತ್ತಿಹಿಡಿಯುವ ಈ ವಿಶೇಷ ಉತ್ಸವಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ಆಯೋಜಕರು ವಿನಂತಿಸಿದ್ದಾರೆ. ಈ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕಾಗಿ ‘ಜೈ ತುಳುನಾಡ್ ಬೆಂಗಳೂರು (ರಿ.)’ ಸಂಸ್ಥೆಯ ಅಧ್ಯಕ್ಷರಾದ ಶ್ರೀ ವಿನಯ್ ಮಣಿಯಾನ ಹಾಗೂ ಕಾರ್ಯದರ್ಶಿ ಶ್ರೀ ಅಕ್ಷಯ್ ಆಚಾರ್ಯ ಅವರು ಪ್ರಕಟಣೆಯ ಮೂಲಕ ಸಮಸ್ತ ನಾಗರಿಕರಲ್ಲಿ ಕೋರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮೇಕೆದಾಟು ಯೋಜನೆ ವಿರುದ್ಧ ರಾಜ್ಯಸಭೆಯಲ್ಲಿ ಡಿಎಂಕೆ ನಿಲುವಳಿ ಮಂಡನೆ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಮಳೆ ಅಬ್ಬರಕ್ಕೆ ಭೋರ್ಗರೆಯುತ್ತಿರುವ ಹೊಗೇನಕಲ್ ಜಲಪಾತ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಯಾದಗಿರಿ: ರಾಸಾಯನಿಕ ಸೋರಿಕೆ ದುರಂತ, ಮೂವರು ಕಾರ್ಮಿಕರ ದುರ್ಮರಣ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಉದಯನಿಧಿ ಬಿಡುಗಡೆ; ವಿಜಯ್​​ನ ಡಮ್ಮಿ ಸಿಎಂ ಎಂದ ಸ್ಟಾಲಿನ್ ಪುತ್ರ
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಕೆಎಸ್​ಆರ್​ಟಿಸಿ ಬಸ್​ ತಡೆದು ಸುಬ್ಬಾರೆಡ್ಡಿ ಬೆಂಬಲಿಗರ ಆಕ್ರೋಶ!
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಸುಬ್ಬಾರೆಡ್ಡಿ ಬೆಂಬಲಿಸಿ ಬಾಗೇಪಲ್ಲಿ, ಗುಡಿಬಂಡೆ, ಚೇಳೂರು ಸ್ತಬ್ಧ
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಕೊಪ್ಪಳ ಜಿಲ್ಲಾ ಮಹಿಳಾ ಅಧ್ಯಕ್ಷೆ ಜ್ಯೋತಿ ಗೊಂಡಬಾಳ್ ರಾಜೀನಾಮೆ!
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಮೇಷ ರಾಶಿಯ ಅಶ್ವಿನಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ