AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗದಗ: ಭೀಕರ ಬರಕ್ಕೆ ಕಂಗಾಲಾದ ರೈತರು; ಮಳೆಗಾಗಿ ಕತ್ತೆಗಳ‌ ಅದ್ಧೂರಿ ಮದುವೆ; ಇಲ್ಲಿದೆ ವಿಡಿಯೋ

ದಸರಾ ಹಬ್ಬದ ಪ್ರಯುಕ್ತ ತಿಮ್ಮಾಪೂರ ಗ್ರಾಮದ ಹುಡೇದ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಕತ್ತೆಗಳ ಮದುವೆ ಇಡೀ ರೈತ ಸಮೂಹದ ಕುಟುಂಬಸ್ಥರು ಸೇರಿ ಅದ್ದೂರಿಯಾಗಿ ಮದುವೆ ಮಾಡಿದರು. ಕತ್ತೆಗಳ ಮದುವೆ ಕಾಟಾಚಾರಕ್ಕೆ ಮಾಡಿಲ್ಲ. ಎಲ್ಲ ಮದುವೆಗಳಂತೆ ಶಿಸ್ತು, ಬದ್ಧ, ಸಾಂಪ್ರದಾಯಿಕವಾಗಿ ಮಾಡಲಾಯಿತು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 24, 2023 | 7:20 PM

Share

ಗದಗ, ಅ.24: ಆ ಗ್ರಾಮದಲ್ಲಿ ದಸರಾ ಹಬ್ಬದ ದಿನ ಮದುವೆ ಸಂಭ್ರಮ ಜೋರಾಗಿತ್ತು. ಯಾವ ಮದುವೆಗೂ ಈ ಜೋಡಿಗಳ ಮದುವೆ ಸಂಭ್ರಮ ಕಡಿಮೆಯಿಲ್ಲ. ಸಾಂಪ್ರದಾಯಿಕವಾಗಿ ನಡೆದ ಅದ್ಧೂರಿ‌ ಮದುವೆಯಲ್ಲಿ, ಇಡೀ ಗ್ರಾಮಸ್ಥರೇ ಸೇರಿದ್ದರು. ಈ ಜೋಡಿಗಳ ಮದುವೆ ಮಾಡಿ ಅನ್ನದಾತರು‌ ಮಳೆಗಾಗಿ ಪ್ರಾರ್ಥನೆ‌ ಮಾಡಿದರು. ಹೌದು, ಗದಗ(Gadag) ತಾಲೂಕಿನ ತಿಮ್ಮಾಪೂರ ಗ್ರಾಮದಲ್ಲಿ ಮಳೆ ಇಲ್ಲದೇ ರಾಜ್ಯದಲ್ಲಿ ಭೀಕರ ಬರ ಆವರಿಸಿದೆ. ಬಿತ್ತನೆ‌ ಮಾಡಿದ ಎಲ್ಲ ಬೆಳೆಗಳು ಮಳೆ ಇಲ್ಲದೆ ಒಣಗಿ ಹೋಗಿವೆ. ಕಷ್ಟಪಟ್ಟು ಸಾಲಸೋಲ ಮಾಡಿ ಬಿತ್ತನೆ ಮಾಡಿದ ಬೆಳೆ ನಾಶವಾಗಿದೆ. ಹೀಗಾಗಿ ಅನ್ನದಾತರು ಅಕ್ಷರಶಃ ಕಂಗಾಲಾಗಿದ್ದಾರೆ. ಈಗಲಾದ್ರೂ ಮಳೆರಾಯನ ಕೃಪೆಗಾಗಿ ಕಾಯುತ್ತಿದ್ದಾರೆ. ಮಳೆಯಾದ್ರು ಹಿಂಗಾರು ಬೆಳೆಯಾದ್ರೂ ಬರುತ್ತೆ. ಬದುಕಿನ ಬಂಡಿ ಸಾಗುತ್ತೆ ಅಂತ ಪರಿತಪಿಸುತ್ತಿದ್ದಾರೆ.

ಕತ್ತೆಗಳ‌ ಅದ್ಧೂರಿ ಮದುವೆ, ಮಳೆಗಾಗಿ ರೈತರ ಪ್ರಾರ್ಥನೆ

ದಸರಾ ಹಬ್ಬದ ಪ್ರಯುಕ್ತ ತಿಮ್ಮಾಪೂರ ಗ್ರಾಮದ ಹುಡೇದ ಲಕ್ಷ್ಮಿ ದೇವಸ್ಥಾನದಲ್ಲಿ ಇಂದು ಕತ್ತೆಗಳ ಮದುವೆ ಇಡೀ ರೈತ ಸಮೂಹದ ಕುಟುಂಬಸ್ಥರು ಸೇರಿ ಅದ್ದೂರಿಯಾಗಿ ಮದುವೆ ಮಾಡಿದರು. ಕತ್ತೆಗಳ ಮದುವೆ ಕಾಟಾಚಾರಕ್ಕೆ ಮಾಡಿಲ್ಲ. ಎಲ್ಲ ಮದುವೆಗಳಂತೆ ಶಿಸ್ತು, ಬದ್ಧ, ಸಾಂಪ್ರದಾಯಿಕವಾಗಿ ಮಾಡಲಾಯಿತು. ಮದುವೆಯ ಹಿನ್ನೆಲೆಯಲ್ಲಿ ಸಂಪ್ರದಾಯದ ಪ್ರಕಾರ ಮಹಿಳೆಯರು ಹೂಗಾರರ ಮನೆಯಿಂದ ಭಾಸಿಂಗ್ ತರಲಾಯಿತು.

ಇದನ್ನೂ ಓದಿ:Uttara Kannada: ವರುಣನ ಕೃಪೆಗಾಗಿ ರೈತ ಮಹಿಳೆಯರಿಂದ ವಿಶಿಷ್ಟ ಆಚರಣೆ; ಕಪ್ಪೆಗಳ ಮದುವೆ ಮಾಡಿ ಪ್ರಾರ್ಥನೆ, ವಿಡಿಯೋ ವೈರಲ್

ಅರಿಣ ಕಾರ್ಯ

ಕತ್ತೆಗಳಿಗೆ ಮೊದ್ಲು ಅರಿಶಿಣ ಶಾಸ್ತ್ರವನ್ನು ಮಾಡಿ ಸುರುಗಿ ನೀರನ್ನು ಹಾಕಲಾಯಿತು. ಬಳಿಕ ಎರಡು ಕತ್ತೆಗಳಿಗೆ ಶಂಗಾರ ಮಾಡಲಾಯಿತು. ಗಂಟಿಗೆ ಭಾಸಿಂಗ್ ಶಂಗಾರ ಮಾಡಿದ್ರೆ. ಹೆಣ್ಣು ಕತ್ತೆ ಹೂವಿನ ದಂಡಿ ಕಟ್ಟಿ ಶೃಂಗಾರ‌ ಮಾಡಿದ್ರು. ಬಳಿದ ದೇವಸ್ಥಾನದ ಆವರಣದಲ್ಲಿ ಜಮಾಯಿಸಿದ ನೂರಾರು ಜನ್ರ ಸಮ್ಮುಖದಲ್ಲಿ ಮಾಂಗಲ್ಯ ಧಾರಣೆ ಮಾಡಿ ಅಕ್ಷತೆಯನ್ನು ಹಾಕುವುದರ ಮೂಲಕ ಕತ್ತೆಗಳಿಗೆ ಸಾಂಪ್ರದಾಯಕವಾಗಿ ಮದುವೆ ಮಾಡಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ