AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಸಂಪೂರ್ಣ ಲಾಕ್​ಡೌನ್​: ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿ ಪರದಾಟ

ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿಗೆ ದಿಕ್ಕು ತೋಚದಂತಾಗಿತ್ತು. ನಿನ್ನೆ ರಾತ್ರಿ ಅಜ್ಜಿಯ ಪತಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗವಿ ಮಠದ ವೃದ್ಧಾಶ್ರಮಕ್ಕೆ ದಾಖಲಾಗಿದ್ದರು. ಆದರೆ ಅಜ್ಜಿಗೆ ಮನೆಗೆ ಹೋಗಿ ಎಂದು ವೈದ್ಯರು ಹೇಳಿದ್ದರು.

ಕೊಪ್ಪಳ ಸಂಪೂರ್ಣ ಲಾಕ್​ಡೌನ್​: ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿ ಪರದಾಟ
ಮನೆಗೆ ತೆರಳಲು ವಾಹನವಿಲ್ಲದೆ ಸುಮ್ಮನೆ ಕುಳಿತ್ತಿದ್ದ ಅಜ್ಜಿ
sandhya thejappa
|

Updated on: May 19, 2021 | 8:55 AM

Share

ಕೊಪ್ಪಳ: ಕೊರೊನಾ ಸೋಂಕನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 17 ರಿಂದ 21ರ ವರೆಗೆ ಅಂದರೆ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಘೋಷಣೆಯಾಗಿದೆ. ಹೀಗಾಗಿ ಯಾವುದೇ ಆಟೋಗಳು ಜಿಲ್ಲೆಯಲ್ಲಿ ಓಡಾಡುತ್ತಿಲ್ಲ. ಇದರಿಂದ ಅಜ್ಜಿಯೊಬ್ಬರು ಊರಿಗೆ ತೆರಳಲು ಪರದಾಟ ಪಟ್ಟಿದ್ದಾರೆ. ಸಿದ್ದಮ್ಮ ಎಂಬ ವೃದ್ಧೆ ಕೊಪ್ಪಳದಿಂದ ತಳಕಲ್ಗೆ ಹೋಗಬೇಕಿತ್ತು. ಆದರೆ ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿಗೆ ದಿಕ್ಕು ತೋಚದಂತಾಗಿತ್ತು. ನಿನ್ನೆ ರಾತ್ರಿ ಅಜ್ಜಿಯ ಪತಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗವಿ ಮಠದ ವೃದ್ಧಾಶ್ರಮಕ್ಕೆ ದಾಖಲಾಗಿದ್ದರು. ಆದರೆ ಅಜ್ಜಿಗೆ ಮನೆಗೆ ಹೋಗಿ ಎಂದು ವೈದ್ಯರು ಹೇಳಿದ್ದರು.

ಪತಿ ಭೀಮಯ್ಯಗೆ ಕೊರೊನಾ ಹಿನ್ನೆಲೆ ಕೊಪ್ಪಳಕ್ಕೆ ಸಿದ್ದಮ್ಮ ಬಂದಿದ್ದರು. ಗವಿ ಮಠದ ವೃದ್ಧಾಶ್ರಮದಲ್ಲಿ ಪತಿ ಭೀಮಯ್ಯ ಇದ್ದಾರೆ. ನೀವು ಮನೆಗೆ ಹೋಗಿ ಎಂದು ಸಿದ್ದಮ್ಮಳನ್ನು ವೈದ್ಯರು ಕಳುಹಿಸಿದ್ದರು. ಆದರೆ ಮನೆಗೆ ತೆರಳಲು ವಾಹನಗಳಿಲ್ಲದೆ ಅಜ್ಜಿ ಸಿದ್ದಮ್ಮ ಪರದಾಟ ಪಡುತ್ತಿದ್ದರು. ಈ ವೇಳೆ ವಾಹನ ಇಲ್ಲದೆ ಪರದಾಡುತ್ತಿದ್ದ ಸಿದ್ದಮ್ಮನನ್ನು ಟಾಟಾ ಏಸ್ ವಾಹನದಲ್ಲಿ ತಳಕಲ್ ಗ್ರಾಮಕ್ಕೆ ಪೊಲೀಸರು ಕಳುಹಿಸಿದ್ದಾರೆ.

ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಸಂಪೂರ್ಣ ಲಾಕ್​ಡೌನ್​ ಕಾಲಿಟ್ಟಿದೆ. ಹೀಗಾಗಿ ಕೊಪ್ಪಳ ಸಂಪೂರ್ಣ ಸ್ತಬ್ಧವಾಗಿದೆ. ವಾಹನಗಳ ಸಂಖ್ಯೆ ವಿರಳವಾಗಿದೆ. ಕೇವಲ ಅಗತ್ಯ ವಸ್ತುಗಳ ಸೇವೆಗೆ ಮಾತ್ರ ಅವಕಾಶ ನೀಡಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಈ ನಡುವೆ ಕೊಪ್ಪಳ ನಗರದ ಗಂಜ್ ವೃತ್ತದಲ್ಲಿ ತಂದೆ, ಮಗಳು ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ಈ ವೇಳೆ ಲಾಕಡೌನ್ ಇರುವುದು ಗೊತ್ತಿಲ್ವಾ ಅಂತ ಪೊಲೀಸರು ಪ್ರಶ್ನಿಸಿದ್ದಾರೆ. ಪೊಲೀಸರ ಚಾರ್ಜ್ಗೆ ಹೆದರಿ ತಂದೆ ಮತ್ತು ಮಗಳು ನಾಯಿಯೊಂದಿಗೆ ಮನೆಗೆ ಹೋದರು.

ಇದನ್ನೂ ಓದಿ

Karnataka Weather: ಹವಾಮಾನ ವರದಿ – ರಾಜ್ಯದಲ್ಲಿ ಇಂದು ಸಹ ಮಳೆ ಮುಂದುವರೆಯುವ ಸಾಧ್ಯತೆ; ಹಲವೆಡೆ ಮೋಡ ಕವಿದ ವಾತಾವರಣ

ಲಾಕ್​ಡೌನ್​ ಎಫೆಕ್ಟ್: ಐನೂರು ಎಕರೆ ಕಲ್ಲಂಗಡಿ ಬೆಳೆದ ಬಾಗಲಕೋಟೆ ರೈತರಿಗೆ ಸಂಕಷ್ಟ

(Grandma was scared to go home without a bus and auto at koppal)

ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ವಿಷ್ಣು ಸಮಾಧಿ ಧ್ವಂಸ: ಸಾ.ರಾ. ಗೋವಿಂದು ಎದುರು ನೋವು ತೋಡಿಕೊಂಡ ಫ್ಯಾನ್ಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಸತ್ಯ ಹೇಳಿದ್ದಕ್ಕೆ ಬೆಲೆ ತೆತ್ತರ ಅಂತ ತೀರ್ಮಾನಿಸುವವರು ನಾವಲ್ಲ: ಎಸ್​ಟಿಎಸ್
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ಮಹಿಳೆಯ ಪ್ರಶ್ನೆಗೆ ಉತ್ತರ ಕೊಡಲಾಗದ ಸಿಟಿ ರವಿ ಸ್ಥಳದಿಂದ ನಿರ್ಗಮಿಸಿದರು!
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ