AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳ ಸಂಪೂರ್ಣ ಲಾಕ್​ಡೌನ್​: ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿ ಪರದಾಟ

ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿಗೆ ದಿಕ್ಕು ತೋಚದಂತಾಗಿತ್ತು. ನಿನ್ನೆ ರಾತ್ರಿ ಅಜ್ಜಿಯ ಪತಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗವಿ ಮಠದ ವೃದ್ಧಾಶ್ರಮಕ್ಕೆ ದಾಖಲಾಗಿದ್ದರು. ಆದರೆ ಅಜ್ಜಿಗೆ ಮನೆಗೆ ಹೋಗಿ ಎಂದು ವೈದ್ಯರು ಹೇಳಿದ್ದರು.

ಕೊಪ್ಪಳ ಸಂಪೂರ್ಣ ಲಾಕ್​ಡೌನ್​: ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿ ಪರದಾಟ
ಮನೆಗೆ ತೆರಳಲು ವಾಹನವಿಲ್ಲದೆ ಸುಮ್ಮನೆ ಕುಳಿತ್ತಿದ್ದ ಅಜ್ಜಿ
sandhya thejappa
sandhya thejappa|

Updated on: May 19, 2021 | 8:55 AM

Share

ಕೊಪ್ಪಳ: ಕೊರೊನಾ ಸೋಂಕನ್ನು ನಿಯಂತ್ರಿಸಲು ಜಿಲ್ಲೆಯಲ್ಲಿ 17 ರಿಂದ 21ರ ವರೆಗೆ ಅಂದರೆ ಐದು ದಿನಗಳ ಕಾಲ ಸಂಪೂರ್ಣ ಲಾಕ್​ಡೌನ್​ ಘೋಷಣೆಯಾಗಿದೆ. ಹೀಗಾಗಿ ಯಾವುದೇ ಆಟೋಗಳು ಜಿಲ್ಲೆಯಲ್ಲಿ ಓಡಾಡುತ್ತಿಲ್ಲ. ಇದರಿಂದ ಅಜ್ಜಿಯೊಬ್ಬರು ಊರಿಗೆ ತೆರಳಲು ಪರದಾಟ ಪಟ್ಟಿದ್ದಾರೆ. ಸಿದ್ದಮ್ಮ ಎಂಬ ವೃದ್ಧೆ ಕೊಪ್ಪಳದಿಂದ ತಳಕಲ್ಗೆ ಹೋಗಬೇಕಿತ್ತು. ಆದರೆ ಊರಿಗೆ ತೆರಳಲು ಬಸ್, ಆಟೋಗಳಿಲ್ಲದೆ ಅಜ್ಜಿಗೆ ದಿಕ್ಕು ತೋಚದಂತಾಗಿತ್ತು. ನಿನ್ನೆ ರಾತ್ರಿ ಅಜ್ಜಿಯ ಪತಿಗೆ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಗವಿ ಮಠದ ವೃದ್ಧಾಶ್ರಮಕ್ಕೆ ದಾಖಲಾಗಿದ್ದರು. ಆದರೆ ಅಜ್ಜಿಗೆ ಮನೆಗೆ ಹೋಗಿ ಎಂದು ವೈದ್ಯರು ಹೇಳಿದ್ದರು.

ಪತಿ ಭೀಮಯ್ಯಗೆ ಕೊರೊನಾ ಹಿನ್ನೆಲೆ ಕೊಪ್ಪಳಕ್ಕೆ ಸಿದ್ದಮ್ಮ ಬಂದಿದ್ದರು. ಗವಿ ಮಠದ ವೃದ್ಧಾಶ್ರಮದಲ್ಲಿ ಪತಿ ಭೀಮಯ್ಯ ಇದ್ದಾರೆ. ನೀವು ಮನೆಗೆ ಹೋಗಿ ಎಂದು ಸಿದ್ದಮ್ಮಳನ್ನು ವೈದ್ಯರು ಕಳುಹಿಸಿದ್ದರು. ಆದರೆ ಮನೆಗೆ ತೆರಳಲು ವಾಹನಗಳಿಲ್ಲದೆ ಅಜ್ಜಿ ಸಿದ್ದಮ್ಮ ಪರದಾಟ ಪಡುತ್ತಿದ್ದರು. ಈ ವೇಳೆ ವಾಹನ ಇಲ್ಲದೆ ಪರದಾಡುತ್ತಿದ್ದ ಸಿದ್ದಮ್ಮನನ್ನು ಟಾಟಾ ಏಸ್ ವಾಹನದಲ್ಲಿ ತಳಕಲ್ ಗ್ರಾಮಕ್ಕೆ ಪೊಲೀಸರು ಕಳುಹಿಸಿದ್ದಾರೆ.

ಜಿಲ್ಲೆಯಲ್ಲಿ ಮೂರನೇ ದಿನಕ್ಕೆ ಸಂಪೂರ್ಣ ಲಾಕ್​ಡೌನ್​ ಕಾಲಿಟ್ಟಿದೆ. ಹೀಗಾಗಿ ಕೊಪ್ಪಳ ಸಂಪೂರ್ಣ ಸ್ತಬ್ಧವಾಗಿದೆ. ವಾಹನಗಳ ಸಂಖ್ಯೆ ವಿರಳವಾಗಿದೆ. ಕೇವಲ ಅಗತ್ಯ ವಸ್ತುಗಳ ಸೇವೆಗೆ ಮಾತ್ರ ಅವಕಾಶ ನೀಡಿ ಅನಗತ್ಯವಾಗಿ ಓಡಾಡುತ್ತಿರುವ ವಾಹನಗನ್ನು ಪೊಲೀಸರು ತಪಾಸಣೆ ಮಾಡುತ್ತಿದ್ದಾರೆ. ಈ ನಡುವೆ ಕೊಪ್ಪಳ ನಗರದ ಗಂಜ್ ವೃತ್ತದಲ್ಲಿ ತಂದೆ, ಮಗಳು ನಾಯಿಯೊಂದಿಗೆ ವಾಕಿಂಗ್ ಬಂದಿದ್ದರು. ಈ ವೇಳೆ ಲಾಕಡೌನ್ ಇರುವುದು ಗೊತ್ತಿಲ್ವಾ ಅಂತ ಪೊಲೀಸರು ಪ್ರಶ್ನಿಸಿದ್ದಾರೆ. ಪೊಲೀಸರ ಚಾರ್ಜ್ಗೆ ಹೆದರಿ ತಂದೆ ಮತ್ತು ಮಗಳು ನಾಯಿಯೊಂದಿಗೆ ಮನೆಗೆ ಹೋದರು.

ಇದನ್ನೂ ಓದಿ

Karnataka Weather: ಹವಾಮಾನ ವರದಿ – ರಾಜ್ಯದಲ್ಲಿ ಇಂದು ಸಹ ಮಳೆ ಮುಂದುವರೆಯುವ ಸಾಧ್ಯತೆ; ಹಲವೆಡೆ ಮೋಡ ಕವಿದ ವಾತಾವರಣ

ಲಾಕ್​ಡೌನ್​ ಎಫೆಕ್ಟ್: ಐನೂರು ಎಕರೆ ಕಲ್ಲಂಗಡಿ ಬೆಳೆದ ಬಾಗಲಕೋಟೆ ರೈತರಿಗೆ ಸಂಕಷ್ಟ

(Grandma was scared to go home without a bus and auto at koppal)

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ