AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?

ಬಳ್ಳಾರಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ತಿಹಾರ್​ ಜೈಲಿನಿಂದ ಬೆಂಗಳೂರಿನತ್ತ ವಾಪಸಾಗುತ್ತಿದ್ದಾರೆ. ಈ ಮಧ್ಯೆ, ಅವರ ಅಭಿಮಾನಿಗಳು ಭರ್ಜರಿ ರೋಡ್​​ ಷೋ ನಡೆಸಿ, ಅವರಿಗೆ ಸ್ವಾಗತ ಕೋರುತ್ತಿದ್ದಾರೆ. ಈ ಸಂದರ್ಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಮಾತನಾಡಿದ್ದು, ನಾವು ಭ್ರಷ್ಟ ವ್ಯವಸ್ಥೆಯಲ್ಲಿದ್ದೇವೆ, ಇಂಥ ಸಮಾಜ ಬದಲಾಗ್ಬೇಕು. ಈ ವ್ಯವಸ್ಥೆ ಬದಲಾಗಬೇಕಿದೆ, ಜನರು ಸಹ ಬದಲಾಗಬೇಕಿದೆ. ಈಗ ಜನರಲ್ಲಿ ದುರಾಸೆ, ಅಧಿಕಾರದ ಆಸೆಯೂ ಹೆಚ್ಚಾಗಿದೆ. ಹಣ ಇರುವವರು ಅಧಿಕಾರಕ್ಕೆ ಬರಬೇಕೆಂದು ಹೇಳುತ್ತಾರೆ. ಅಧಿಕಾರಕ್ಕೆ ಬಂದವರು ಭ್ರಷ್ಟಾಚಾರವನ್ನು […]

ಬೆಂಗಳೂರಿಗೆ ಬರುತ್ತಿರುವ ಡಿಕೆಶಿಗೆ ಭರ್ಜರಿ ಸ್ವಾಗತ, ನ್ಯಾ.ಸಂತೋಷ್ ಹೆಗ್ಡೆ ಏನಂದ್ರು?
ಸಾಧು ಶ್ರೀನಾಥ್​
|

Updated on:Oct 26, 2019 | 6:07 PM

Share

ಬಳ್ಳಾರಿ: ಕಾಂಗ್ರೆಸ್ ಪಾಲಿನ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ತಿಹಾರ್​ ಜೈಲಿನಿಂದ ಬೆಂಗಳೂರಿನತ್ತ ವಾಪಸಾಗುತ್ತಿದ್ದಾರೆ. ಈ ಮಧ್ಯೆ, ಅವರ ಅಭಿಮಾನಿಗಳು ಭರ್ಜರಿ ರೋಡ್​​ ಷೋ ನಡೆಸಿ, ಅವರಿಗೆ ಸ್ವಾಗತ ಕೋರುತ್ತಿದ್ದಾರೆ.

ಈ ಸಂದರ್ಭದಲ್ಲಿ ಲೋಕಾಯುಕ್ತ ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಮಾತನಾಡಿದ್ದು, ನಾವು ಭ್ರಷ್ಟ ವ್ಯವಸ್ಥೆಯಲ್ಲಿದ್ದೇವೆ, ಇಂಥ ಸಮಾಜ ಬದಲಾಗ್ಬೇಕು. ಈ ವ್ಯವಸ್ಥೆ ಬದಲಾಗಬೇಕಿದೆ, ಜನರು ಸಹ ಬದಲಾಗಬೇಕಿದೆ. ಈಗ ಜನರಲ್ಲಿ ದುರಾಸೆ, ಅಧಿಕಾರದ ಆಸೆಯೂ ಹೆಚ್ಚಾಗಿದೆ. ಹಣ ಇರುವವರು ಅಧಿಕಾರಕ್ಕೆ ಬರಬೇಕೆಂದು ಹೇಳುತ್ತಾರೆ. ಅಧಿಕಾರಕ್ಕೆ ಬಂದವರು ಭ್ರಷ್ಟಾಚಾರವನ್ನು ಮಾಡುತ್ತಿದ್ದಾರೆ ಎಂದು ಖೇದ ವ್ಯಕ್ತಪಡಿಸಿದರು.

ಮುಂದುವರಿದು ಮಾತನಾಡಿದ ನ್ಯಾ.ಸಂತೋಷ್ ಹೆಗ್ಡೆ, ಹಿಂದೆ ಜೈಲಿಗೆ ಹೋದವರನ್ನ ಜನರು ಬಹಿಷ್ಕರಿಸುತ್ತಿದ್ದರು. ಶಿಕ್ಷೆ ಆಗುವುದಕ್ಕೂ ಮುಂಚೆಯೇ ಅವರನ್ನ ಬಹಿಷ್ಕರಿಸ್ತಿದ್ರು. ಆದರೆ ಈಗ ಅಂತಹವರನ್ನು ಸ್ವಾಗತ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಡಿಕೆಶಿ ವಿರುದ್ಧ ಸಂತೋಷ್ ಹೆಗ್ಡೆ ವಾಗ್ದಾಳಿ ನಡೆಸಿದ್ದಾರೆ.

ಏಕವ್ಯಕ್ತಿ ಪೂಜೆ ಮಾಡಿ, ಆದ್ರೆ ಭ್ರಷ್ಟರ ಪೂಜೆ ಮಾಡಬಾರದು. ಅಧಿಕಾರದಲ್ಲಿ ಇರುವವರು ಎಷ್ಟು ಪ್ರಾಮಾಣಿಕರು ಇದ್ದಾರೆ? ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆ ಸಹ ದುರ್ಬಲವಾಗಿದೆ. ಇನ್ನು, ಎಸಿಬಿ ಪೊಲೀಸ್ ವ್ಯವಸ್ಥೆಯಲ್ಲಿ ಬರುವ ಸಂಸ್ಥೆ ಎಂದು ಬಳ್ಳಾರಿಯಲ್ಲಿ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

Published On - 1:32 pm, Sat, 26 October 19

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್