AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸಿರು ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ಮಾರ್ಗ ಮಧ್ಯದಲ್ಲೇ ನಿಂತ ರೈಲು

ವಿದ್ಯುತ್​ ಸಮಸ್ಯೆಯಿಂದ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯಯ ಉಂಟಾಗಿದೆ. ಪರಿಣಾಮ ಮಾರ್ಗ ಮಧ್ಯದಲ್ಲೇ ಮೆಟ್ರೋ ರೈಲು ನಿಂತುಕೊಂಡಿದೆ. ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಿಂದ ಕುವೆಂಪು ಮೆಟ್ರೋ ನಿಲ್ದಾಣದವರೆಗೆ ಮೆಟ್ರೋ ಸಂಚಾರದಲ್ಲಿ ವ್ಯತ್ಯಯವಾಗಿದೆ. ಸದ್ಯ ಬಿಎಂಆರ್​ಸಿಎಲ್​​ ಸಿಬ್ಬಂದಿ ಸಮಸ್ಯೆ ಸರಿಪಡಿಸುತ್ತಿದ್ದಾರೆ.

ಹಸಿರು ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ಮಾರ್ಗ ಮಧ್ಯದಲ್ಲೇ ನಿಂತ ರೈಲು
ಹಸಿರು ಮಾರ್ಗದ ಮೆಟ್ರೋ ಸಂಚಾರ ವ್ಯತ್ಯಯ: ಮಾರ್ಗ ಮಧ್ಯದಲ್ಲೇ ನಿಂತ ರೈಲು
Kiran Surya
| Updated By: ಗಂಗಾಧರ​ ಬ. ಸಾಬೋಜಿ|

Updated on:Aug 24, 2024 | 5:40 PM

Share

ಬೆಂಗಳೂರು, ಆಗಸ್ಟ್​ 24: ವಿದ್ಯುತ್​ ಸಮಸ್ಯೆಯಿಂದ ಹಸಿರು ಮಾರ್ಗದ ಮೆಟ್ರೋ (Metro) ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಮೆಟ್ರೋ ರೈಲು ನಿಂತಲ್ಲೇ ನಿಂತುಕೊಂಡಿರುವಂತಹ ಘಟನೆ ನಗರದಲ್ಲಿ ನಡೆದಿದೆ. ಮೆಜೆಸ್ಟಿಕ್​ನಿಂದ ಕುವೆಂಪು ಮೆಟ್ರೋ ನಿಲ್ದಾಣವರೆಗೆ ಸಂಜೆ 4.11ರಿಂದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ತಾಂತ್ರಿಕ ಸಮಸ್ಯೆ ಹಿನ್ನೆಲೆ ಹಸಿರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರು ಪರದಾಡುವಂತಾಗಿದೆ.  ಸದ್ಯ ಬಿಎಂಆರ್​ಸಿಎಲ್​​ ಸಿಬ್ಬಂದಿ ಸಮಸ್ಯೆ ಸರಿಪಡಿಸುತ್ತಿದ್ದಾರೆ.

ಬೇರೆ ನಿಲ್ದಾಣದಲ್ಲಿ ಸಮಸ್ಯೆ ಹಿನ್ನೆಲೆ ಇತರೆ ನಿಲ್ದಾಣಗಳಲ್ಲೇ ರೈಲುಗಳು ನಿಂತುಕೊಂಡಿವೆ. ಸರಿಯಾಗಿ 4.10ಕ್ಕೆ ಸಂಚಾರ ವೇಳೆ ಶ್ರೀರಾಮಪುರ ನಿಲ್ದಾಣದಲ್ಲಿ ರೈಲು ನಿಂತುಕೊಂಡಿದೆ.

ಇನ್ನು ಇತ್ತೀಚೆಗೆ ಕೂಡ ಹಸಿರು ಮಾರ್ಗದ ಸಂಚಾರ ವ್ಯತ್ಯಯ ಉಂಟಾಗಿತ್ತು. ಸಿಗ್ನಲಿಂಗ್ ಪರೀಕ್ಷೆ ಹಿನ್ನೆಲೆ ಪೀಣ್ಯ-ನಾಗಸಂದ್ರ ನಡುವೆ ಮೆಟ್ರೋ ಸಂಚಾರ ವ್ಯತ್ಯಯವಾಗಿತ್ತು. 3 ದಿನ ರಾತ್ರಿ 11ರ ಬದಲು ರಾತ್ರಿ 10ಕ್ಕೆ ಕೊನೆ ರೈಲು ಹೊರಡುತ್ತಿದ್ದು, ಬೆಳಗ್ಗೆ 6 ಗಂಟೆಗೆ ಮೆಟ್ರೋ ಸಂಚಾರ ಆರಂಭವಾಗಿತ್ತು. ನೇರಳೆ ಮಾರ್ಗದ ಮೆಟ್ರೋ ಸೇವೆಯಲ್ಲಿ ಬದಲಾವಣೆ ಇರಲಿಲ್ಲ.

ಗ್ರೀನ್ ಲೈನ್ ಮೆಟ್ರೋ: 4 ಸ್ಟೇಷನ್​ಗಳಲ್ಲಿ ಸಂಚಾರ ವ್ಯತ್ಯಯ

ನಾಗಸಂದ್ರ ಟು ಸಿಲ್ಕ್ ಇನ್ಸ್ಟಿಟ್ಯೂಟ್ ಹಸಿರು ಮಾರ್ಗದ 4 ಸ್ಟೇಷನ್​ಗಳಲ್ಲಿ ಇತ್ತೀಚೆಗೆ ಮೆಟ್ರೋ ರೈಲು ಸಂಚಾರ ಬಂದ್ ಆಗಿತ್ತು. ನಾಗಸಂದ್ರ ಟು ಮಾದಾವರವರೆಗೆ ಮೆಟ್ರೋ ವಿಸ್ತರಣೆ ಮಾಡಿದ್ದು, ಆ ಮಾರ್ಗದಲ್ಲಿ ಸಿಗ್ನಲ್ ಟೆಸ್ಟಿಂಗ್ ನಡೆದಿತ್ತು. ಹೀಗಾಗಿ ನಾಗಸಂದ್ರದಿಂದ ಪೀಣ್ಯ ಇಂಡಸ್ಟ್ರಿ ಮೆಟ್ರೋ ಸ್ಟೇಷನ್​ವರೆಗೆ ದಿನಪೂರ್ತಿ ಮೆಟ್ರೋ ಸಂಚಾರ ಇರಲಿಲ್ಲ. ಇದರಿಂದ ಬೆಳಗ್ಗೆ ಕೆಲಸಕ್ಕೆ ಹೋಗಬೇಕಾದ ಪ್ರಯಾಣಿಕರು ಪರದಾಡಿದ್ದರು.

ಇದನ್ನೂ ಓದಿ: ಮೊನ್ನೇ ಅಷ್ಟೇ ಮೋದಿ ಸರ್ಕಾರ ಗ್ರೀನ್​ ಸಿಗ್ನಲ್ ನೀಡಿದ್ದ 3ನೇ ಹಂತದ ನಮ್ಮ ಮೆಟ್ರೋಗೆ ಆರಂಭಿಕ ವಿಘ್ನ..!

ಮೆಟ್ರೋ ರೈಲು ಇಲ್ಲದ್ರಿಂದ ಪ್ರಯಾಣಿಕರು ಓಲಾ, ಉಬರ್ ಮೊರೆ ಹೋಗಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಆಟೋ, ಕ್ಯಾಬ್ ಚಾಲಕರು ಜನರಿಂದ ದುಪ್ಪಟ್ಟು ಹಣ ವಸೂಲಿಗೆ ಮುಂದಾಗಿದ್ದರು. ನಾಗಸಂದ್ರ ದಿಂದ ಪೀಣ್ಯ ಇಂಡಸ್ಟ್ರಿಗೆ ಸಾಮಾನ್ಯ ದಿನ ಆಟೋದಲ್ಲಿ 50 ರೂ ಇದೆ. ಆದರೆ, ಅಂದು ಮಾತ್ರ 150 ರಿಂದ ₹200 ರೂ ವಸೂಲಿ ಮಾಡಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:16 pm, Sat, 24 August 24

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ