AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2023: ನನಸಾಯಿತು ಡಿಕೆ ಶಿವಕುಮಾರ್​ ಕನಸು; ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟ್​​ನಲ್ಲಿ ಅಸ್ತು

ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರ ಕನಸಾಗಿದ್ದ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನಸಾಗಿದೆ. ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆ 2023-24ನೇ ಸಾಲಿನ ಬಜೆಟ್​ನಲ್ಲಿ ಗ್ರೀನ್​ ಸಿಗ್ನಲ್​ ಸಿಕ್ಕಿದೆ.

Karnataka Budget 2023: ನನಸಾಯಿತು ಡಿಕೆ ಶಿವಕುಮಾರ್​ ಕನಸು; ಕನಕಪುರದಲ್ಲಿ ಹೊಸ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಬಜೆಟ್​​ನಲ್ಲಿ ಅಸ್ತು
ಡಿಕೆ ಶಿವಕುಮಾರ್
Follow us
TV9 Web
| Updated By: ವಿವೇಕ ಬಿರಾದಾರ

Updated on:Jul 07, 2023 | 3:58 PM

ಬೆಂಗಳೂರು: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar)​ ಅವರ ಕನಸಾಗಿದ್ದ ಕನಕಪುರದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ನನಸಾಗಿದೆ. 2023-24ನೇ ಸಾಲಿನ ಬಜೆಟ್ (​Karnataka Budget 2023) ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ (Kanakapura) ತಾಲ್ಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲಾಗುವುದು ಎಂದು ಹೇಳಿದರು.

ಈ ಹಿಂದೆ ಕನಕಪುರಕ್ಕೆ ಜಾರಿಯಾಗಿದ್ದ ಮೆಡಿಕಲ್​ ಕಾಲೇಜ್​ನ್ನು ಚಿಕ್ಕಬಳ್ಳಾಪುರಕ್ಕೆ ಬಿಎಸ್​ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಸ್ಥಳಾಂತರಿಸಿತ್ತು. ಇದಾದ ನಂತರ ಕೆರಳಿದ್ದ ಡಿಕೆ ಬ್ರದರ್ಸ್​​​ ಕನಕಪುರಕ್ಕೆ ಮೆಡಿಕಲ್​ ಕಾಲೇಜು ತಂದೇ ತರುತ್ತೇವೆ ಎಂದು ಶಪಥಗೈದಿದ್ದರು. ಅದರಂತೆ ಇದೀಗ ಬಜೆಟ್​​ನಲ್ಲಿ ಕನಕಪುರಕ್ಕೆ ಮೆಡಿಕಲ್​ ಕಾಲೇಜು ದೊರೆತಿದೆ.

ಚಿಕ್ಕಬಳ್ಳಾಪುರಕ್ಕೆ ಎತ್ತಂಗಡಿ ನಂತರ ರಾಜಕೀಯ ಕೆಸೆರಚಾಟ

2019ರಲ್ಲಿ ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್​ ಕಾಲೇಜು ಎತ್ತಂಗಡಿಯಾದ ನಂತರ ಕೆರಳಿದ್ದ ಡಿಕೆ ಶಿವಕುಮಾರ್​ ನನ್ನ ಪ್ರಾಣ ಹೋದರೂ ಪರವಾಗಿಲ್ಲ, ಮೆಡಿಕಲ್​​ ಕಾಲೇಜು ಮಾತ್ರ ಕೊಡಲ್ಲ ಎಂದಿದ್ದರು. ಇದು ಬಸವಣ್ಣನ ನಾಡು. ಆದರೆ ಬಿಎಸ್​ ಯಡಿಯೂರಪ್ಪ ಅವರು ಅಧಿಕಾರಕ್ಕೆ ಬಂದ ನಂತರ ಮೊದಲ ಕೆಲಸ ಮಾಡಿರುವುದು ಮೆಡಿಕಲ್​ ಕಾಲೇಜು ಸ್ಥಳಾಂತರ ಎಂದು ಕಿಡಿಕಾರಿದ್ದರು.

ಇದನ್ನೂ ಓದಿ: ಬೆಂಗಳೂರಿಗೆ ಬಂಪರ್ ಕೊಡುಗೆ ನೀಡಿದ ಸಿಎಂ ಸಿದ್ದರಾಮಯ್ಯ

ಇತ್ತೀಚಿಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಡಿಕೆ ಶಿವಕುಮಾರ್​ ಅಭೂತಪೂರ್ವ ಗೆಲವು ಸಾಧಿಸಿದ ನಂತರ ಪ್ರಥಮಬಾರಿಗೆ ತವರು ಕ್ಷೇತ್ರಕ್ಕೆ ಹೋದ ಸಂದರ್ಭದಲ್ಲಿ “ಈ ಹಿಂದೆ ಮೆಡಿಕಲ್​ ಕಾಲೇಜು ಆಗಬೇಕಿತ್ತು. ಬೊಮ್ಮಾಯಿ, ಯಡಿಯೂರಪ್ಪನವರು ಕ್ಯಾನ್ಸಲ್​ ಮಾಡಿ ಚಿಕ್ಕಬಳ್ಳಾಪುರಕ್ಕೆ ತೆಗೆದುಕೊಂಡು ಹೋದರು. ಈಗ ಸಿಎಂಗೆ ಹೇಳಿ ಕ್ಯಾಬಿನೆಟ್​ಗೆ ವಾಪಸ್​ ತರಸಿದ್ದೇನೆ ಎಂದು ಹೇಳಿದ್ದರು.

ಕೆ. ಸುಧಾಕರನ್ನ ಕಿಚಾಯಿಸಿದ್ದ ಡಿಕೆ ಸುರೇಶ್​

ನಮ್ಮ ಜಿಲ್ಲಿಗೆ ಬಂದಿದ್ದ ಮೆಡಿಕಲ್​ ಕಾಲೇಜ್​​ ಅನ್ನು ಸುಧಾಕರ್​ ಅವರು ಚಿಕ್ಕಬಳ್ಳಾಪುರಕ್ಕೆ ಕಿತ್ತುಕೊಂಡು ಹೋದರು. ಮೊದಲು ನಮ್ಮ ಜೊತೆಗೆ ಇದ್ದ ಅವರು ಕಿತ್ತಾಡಿಕೊಂಡು ಬೇರೆ ಕಡೆಗೆ ಹೋದರು. ಮುಂದೆ ಅವರನ್ನೇ ಕರೆದು ಇಲ್ಲಿ ಮೆಡಿಕಲ್​​ ಕಾಲೇಜು ಶಂಕುಸ್ಥಾಪನೆ ಮಾಡಿಸಬೇಕು ಎಂಬುವುದು ನನ್ನ ಆಸೆಯಾಗಿದೆ. ಅವರು ಕಿತ್ತುಕೊಂಡು ಹೋಗಿರುವುದನ್ನು ಅವರಿಂದಲೇ ಸ್ಥಾಪಿಸಬೇಕು ಎಂಬ ಇಚ್ಛೆ ಇದೆ ಎಂದು ಕಿಚಾಯಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:43 pm, Fri, 7 July 23

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು
12ನೇಮನೆಯಲ್ಲಿ ಗುರು ಸಂಚಾರ;ಕಟಕ ರಾಶಿಯವರು ತಿಳಿದುಕೊಳ್ಳಲೇಬೇಕಾದ ವಿಷಯಗಳಿವು