AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಪುಂಡರ ಸಂಭ್ರಮಾಚಾರಣೆ

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ತಡರಾತ್ರಿ ಪುಂಡರ ಗುಂಪೊಂದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಎಂದು ಮಚ್ಚೆ ಮಂಜ ಮತ್ತು ಸ್ನೇಹಿತರು ಕುಡಿದು ಕುಪ್ಪಳಿಸಿರುವುದನ್ನು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ.

‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಪುಂಡರ ಸಂಭ್ರಮಾಚಾರಣೆ
ಗುಂಡು ಹಾರಿಸಿ ಪುಂಡರಿಂದ ಹೊಸ ವರ್ಷಾಚರಣೆ
ಆಯೇಷಾ ಬಾನು
ಆಯೇಷಾ ಬಾನು|

Updated on: Jan 03, 2021 | 12:21 PM

Share

ಹಾಸನ: ಹೊಸ ವರ್ಷಾಚರಣೆ ವೇಳೆ ಗಾಳಿಯಲ್ಲಿ ಗುಂಡುಹಾರಿಸಿ ಸಂಭ್ರಮಿಸಿರುವ ಘಟನೆ ಜಿಲ್ಲೆಯ ಸಕಲೇಶಪುರ ತಾಲೂಕಿನ ಸುಳ್ಳಕ್ಕಿಯಲ್ಲಿ ನಡೆದಿದೆ. ಹೊಸ ವರ್ಷಾಚರಣೆ ನೆಪದಲ್ಲಿ ಪುಂಡರ ಗುಂಪೊಂದು ದುಂಡಾವರ್ತನೆ ತೋರಿದೆ. ಸದ್ಯ ಈಗ ಪುಂಡರು ಗಾಳಿಯಲ್ಲಿ ಗುಂಡು ಹಾರಿಸಿರುವ ವಿಡಿಯೋ ವೈರಲ್ ಆಗಿದೆ.

ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಡಿ.31ರ ತಡರಾತ್ರಿ ಪುಂಡರ ಗುಂಪೊಂದು ಗಾಳಿಯಲ್ಲಿ ಗುಂಡು ಹಾರಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ‘ನಾವು ಪಟಾಕಿ ಹೊಡೆಯುವವರಲ್ಲ, ಗುಂಡು ಹೊಡೆಯುವವರು’ ಎಂದು ಮಚ್ಚೆ ಮಂಜ ಮತ್ತು ಸ್ನೇಹಿತರು ಕುಡಿದು ಕುಪ್ಪಳಿಸಿರುವುದನ್ನು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಇನ್ನು ಗಾ.ಪಂ ಚುನಾವಣೆ ಫಲಿತಾಂಶದ ನಂತರ ಎದುರಾಳಿ ತಂಡಕ್ಕೆ ಬೆದರಿಕೆ ರೀತಿ ಈ ವಿಡಿಯೋ ಮಾಡಲಾಗಿದೆ ಎಂಬ ಆರೋಪ ಸಹ ಕೇಳಿ ಬಂದಿದೆ.

ವೈರಲ್ ಆದ ಸೆಲ್ಫಿ ವಿಡಿಯೋದಲ್ಲಿ ಮಚ್ಚೆ ಮಂಜ ಮತ್ತು ಸ್ನೇಹಿತರು ಅವ್ಯಾಚ್ಛ ಶಬ್ದಗಳಿಂದ ನಿಂದಿಸಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಮದ್ಯದ ಅಮಲಿನಲ್ಲಿದ್ದ ಕಿಡಿಗೇಡಿಗಳ ಹಾವಳಿಗೆ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ. ಇವರ ಈ ಪುಂಡಾಟಕ್ಕೆ ಆದಷ್ಟು ಬೇಗ ಕಡಿವಾಣ ಹಾಕಬೇಕಿದೆ.

ಶಿರಾಡಿಘಾಟ್‌ನಲ್ಲಿ 23 ಕಿಲೋಮೀಟರ್ ಸುರಂಗ ಮಾರ್ಗ; ಕೇಂದ್ರದಿಂದ ಸಿಕ್ತು ಗ್ರೀನ್ ಸಿಗ್ನಲ್..

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ