AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್: ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್

ಕಾಂಗ್ರೆಸ್ ಸರ್ಕಾರದ ಜನಪ್ರಿಯ ಯೋಜನೆಗಳಲ್ಲಿ ಗೃಹ ಜ್ಯೋತಿ ಪ್ರಮುಖವಾದುದು. ಪ್ರತಿ ಅರ್ಹ ಮನೆಗೆ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಕೊಡುವ ಉದ್ದೇಶವಿದು. ಆದರೆ ಕೆಲವು ಕಡೆಗಳಲ್ಲಿ ಯೋಜನೆ ದಾರಿತಪ್ಪುತ್ತಿರುವ ಬಗ್ಗೆ ಆರೋಪಗಳು ಕೇಳಿಬಂದಿದ್ದು, ಕೆಲ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳಿಗೆ ಝೀರೋ ಬಿಲ್ ಬದಲಾಗಿ ಸಾವಿರಾರು ರೂ. ಬಿಲ್ ಬರುತ್ತಿದೆ.

ಗೃಹಜ್ಯೋತಿ ಫಲಾನುಭವಿಗಳಿಗೆ ಶಾಕ್:  ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂ. ಬಿಲ್
Gruha Jyothi
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Sep 16, 2026 | 10:16 PM

Share

ಬೆಂಗಳೂರು, (ಸೆಪ್ಟೆಂಬರ್ 16): ಗೃಹಜ್ಯೋತಿ ಯೋಜನೆಯ ಫಲಾನುಭವಿಗಳಿಗೆ ಬೆಸ್ಕಾಂ ಶಾಕ್ ಕೊಟ್ಟಿದೆ. ಝೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಇದೀಗ ಸಾವಿರಾರು ರೂಪಾಯಿ ಕರೆಂಟ್ ಬಿಲ್ ಬಂದಿದೆ. ಕಳೆದ ಎರಡು ವರ್ಷಗಳ ಕಾಲ ಫಲಾನುಭವಿಗಳ ಮನೆಗಳಿಗೆ ಜಿರೋ ಜಿರೋ ಬಿಲ್ ಬರುತ್ತಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರ ಪರಿಸ್ಕರಣೆ ಮಾಡಿದ ಬಳಿಕ ಜೀರೋ ಬಿಲ್ ಬರುತ್ತಿದ್ದ ಮನೆಗಳಿಗೆ ಸಾವಿರಾರು ರೂಪಾಯಿ ಬಿಲ್ ಬರುತ್ತಿದೆ. ಹೌದು..ಬೆಂಗಳೂರಿನ ಶಿವಾಜಿನಗರ ಕ್ಷೇತ್ರದ ಮಖಾನ್ ಕಾಂಪೌಂಡ್ ಏರಿಯಾದಲ್ಲಿ ಈ ಸಮಸ್ಯೆ ಎದುರಾಗಿದ್ದು, ಜನರು ಬೆಸ್ಕಾಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಜಾರಿಗೆ ಬಂದು 3 ವರ್ಷಗಳಾಗಿದೆ. ಪ್ರತಿ ಅರ್ಹ ಮನೆಗೂ 200 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಕೊಡೋದು ಯೋಜನೆಯ ಉದ್ದೇಶ. ಆದರೆ ಸಾಕಷ್ಟು ಕಡೆಗಳಲ್ಲಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಜೀರೋ ಬರ್ತಾ ಇಲ್ಲ. ಶಿವಾಜಿನಗರ ಬಳಿಯ ಭಾರತಿ ವಾರ್ಡ್​ನ ಮಕಾನ್ ಕಾಂಪೌಂಡ್ ಕಾಲೋನಿಯಲ್ಲಿ ಬಡವರು ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದುಬಾರಿ ಬಿಲ್ ಬರ್ತಾ ಇದೆ.ಒಂದೆರೆಡು ತಿಂಗಳ ಹಿಂದೆ ಇದೇ ಕಾಲೋನಿಯ ಹಲವು ಮನೆಗಳಿಗೆ ಜೀರೋ ಬಿಲ್ ಬದಲು, 1,2,3 ರಿಂದ 5 ಸಾವಿರದವರೆಗೂ ಬಿಲ್ ಕೊಡಲಾಗಿದೆ.

ಇದನ್ನೂ ಓದಿ: ರೇಷನ್ ಕಾರ್ಡ್ ಇ-ಕೆವೈಸಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಸಚಿವ ರಿಜ್ವಾನ್ ಆರ್ಷದ್, ಬರಲಿದೆ ಮೊಬೈಲ್ ಆ್ಯಪ್

ಇನ್ನು ಈ ಬಗ್ಗೆ ಬೆಸ್ಕಾಂ ಅಧಿಕಾರಿಗಳ ಗಮನಕ್ಕೂ ತರಲಾಗಿದ್ದು, ಸಮಸ್ಯೆ ಸಂಪೂರ್ಣವಾಗಿ ಸರಿಹೋಗಿಲ್ಲ ಅಂತಾ ಸ್ಥಳೀಯರು ಹೇಳುತ್ತಿದ್ದಾರೆ. ಇನ್ನು ಬೆಸ್ಕಾಂ ಸಿಬ್ಬಂದಿ ಪ್ರಕಾರ, ಮೀಟರ್ ರೀಡರ್​ಗಳು ಎಸ್​ಐಆರ್​ ಪ್ರಕ್ರಿಯೆ ಹಾಗೂ ಗೃಹ ಜ್ಯೋತಿ ಮರುಪರಿಶೀಲನಾ ಕಾರ್ಯದಲ್ಲಿ ನಿರತರಾಗಿರುವುದರಿಂದ ಕೆಲವು ಕಡೆ ತಾಂತ್ರಿಕ ಸಮಸ್ಯೆಯಾಗಿದೆಯಂತೆ.

ಒಟ್ಟಾರೆ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಹಲವು ಕಡೆಗಳಲ್ಲಿ ಗೃಹ ಜ್ಯೋತಿಯ ಪ್ರಕಾರ ಶೂನ್ಯ ಬಿಲ್ ಬರ್ತಾ ಇಲ್ಲ ಎಂಬ ಆರೋಪ ಇದೆ. ಏನೇ ಇದ್ದರೂ, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳಿಗೆ ಗೃಹ ಜ್ಯೋತಿಯ ಆಸರೆ ಕೈತಪ್ಪದಿರಲಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ
ತುರಹಳ್ಳಿ ಅರಣ್ಯ ಕ್ಲೀನ್ ಮಾಡಿ ಸಿಟಿ ಜನರಿಗೆ ಜಾಗೃತಿ ಮೂಡಿಸಿದ ತಬಾಹಿ