AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಲೀಕರು ಸ್ಪಂದಿಸ್ತಿಲ್ಲ, ಹಳೇ ದಾಖಲೆ ಸಿಗ್ತಿಲ್ಲ; ಉಚಿತ ಕರೆಂಟ್ ಕೈತಪ್ಪುವ ಭೀತಿಯಲ್ಲಿ ಬೆಂಗಳೂರು ಬಾಡಿಗೆದಾರರು

ರಾಜ್ಯದ ಗೃಹಜ್ಯೋತಿ ಯೋಜನೆ ಮರುಪರಿಶೀಲನೆ ಬೆಂಗಳೂರಿನ ಬಾಡಿಗೆದಾರರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ. ಜುಲೈ 2023 ರ ನಂತರ ಸ್ಥಳಾಂತರಗೊಂಡವರು ಹಳೆಯ ಫಲಾನುಭವಿಗಳ ದಾಖಲೆ ಲಭ್ಯವಿಲ್ಲದೆ ಉಚಿತ ವಿದ್ಯುತ್ ಕಡಿತಗೊಳ್ಳುವ ಭೀತಿಯಲ್ಲಿದ್ದಾರೆ. ಮಾಲೀಕರಿಂದ ಸಹಕಾರ ಸಿಗದೆ ಗೊಂದಲ ಹೆಚ್ಚಿದೆ. ಸ್ವಂತ ಮನೆ ಮಾಲೀಕರಿಗೂ, ಸಂಗಾತಿ ನಿಧನದಂತಹ ಸಂದರ್ಭಗಳಲ್ಲಿ ಅರ್ಹತೆ ಕುರಿತು ಸ್ಪಷ್ಟತೆ ಇಲ್ಲ. ಸರ್ಕಾರ ಅನರ್ಹರನ್ನು ಪತ್ತೆಹಚ್ಚಲು ಈ ಕ್ರಮ ಕೈಗೊಂಡರೂ, ಸಾರ್ವಜನಿಕ ವಲಯದಲ್ಲಿ ತಲ್ಲಣ ಮುಂದುವರಿದಿದೆ.

ಮಾಲೀಕರು ಸ್ಪಂದಿಸ್ತಿಲ್ಲ, ಹಳೇ ದಾಖಲೆ ಸಿಗ್ತಿಲ್ಲ; ಉಚಿತ ಕರೆಂಟ್ ಕೈತಪ್ಪುವ ಭೀತಿಯಲ್ಲಿ ಬೆಂಗಳೂರು ಬಾಡಿಗೆದಾರರು
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Jul 02, 2026 | 7:34 AM

Share

ಮುಖ್ಯಾಂಶಗಳು

  • ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಅರ್ಹತೆ ಮರುಪರಿಶೀಲನೆ
  • ಬೆಂಗಳೂರಿನ ಸಾವಿರಾರು ಬಾಡಿಗೆದಾರರಲ್ಲಿ ತೀವ್ರ ಆತಂಕ ಹಾಗೂ ಗೊಂದಲ
  • ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸುತ್ತಿರುವ ಈ ಮನೆ ಮನೆ ತಪಾಸಣೆ

ಬೆಂಗಳೂರು ಜು. 2: ರಾಜ್ಯ ಸರ್ಕಾರದ ಉಚಿತ ವಿದ್ಯುತ್ ನೀಡುವ ಮಹತ್ವಾಕಾಂಕ್ಷೆಯ ‘ಗೃಹಜ್ಯೋತಿ’ ಯೋಜನೆಯ ಫಲಾನುಭವಿಗಳ ಅರ್ಹತೆಯನ್ನು ಮರುಪರಿಶೀಲಿಸುವ (Reverification) ಮನೆ ಮನೆ ಸಮೀಕ್ಷೆ ಪ್ರಕ್ರಿಯೆಯನ್ನು ಇಲಾಖೆಯು ಬುಧವಾರದಿಂದ ಅಧಿಕೃತವಾಗಿ ಆರಂಭಿಸಿದೆ. ಆದರೆ, ಇಲಾಖೆಯ ಈ ಹಠಾತ್ ಕ್ರಮವು ರಾಜಧಾನಿ ಬೆಂಗಳೂರಿನ ಸಾವಿರಾರು ಬಾಡಿಗೆದಾರರಲ್ಲಿ ತೀವ್ರ ಆತಂಕ ಹಾಗೂ ಗೊಂದಲವನ್ನು ಮೂಡಿಸಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸುತ್ತಿರುವ ಈ ಮನೆ ಮನೆ ತಪಾಸಣೆಯ ಸಂದರ್ಭದಲ್ಲಿ, ಪ್ರಸ್ತುತ ಉಚಿತ ವಿದ್ಯುತ್ ಸೌಲಭ್ಯ ಪಡೆಯುತ್ತಿರುವ ಫಲಾನುಭವಿಗಳು ತಮ್ಮ ಗುರುತಿನ ಚೀಟಿ (Voter ID), ಆಧಾರ ದಾಖಲೆ ಹಾಗೂ ಮನೆಗೆ ಸಂಬಂಧಿಸಿದ ಇತರ ಪೂರಕ ಪತ್ರಗಳನ್ನು ಕಡ್ಡಾಯವಾಗಿ ಹಾಜರುಪಡಿಸುವಂತೆ ಕೇಳುತ್ತಿದ್ದಾರೆ. ಜುಲೈ 2023 ರ ನಂತರ ಹೊಸದಾಗಿ ಬಾಡಿಗೆ ಮನೆಗಳಿಗೆ ಸ್ಥಳಾಂತರಗೊಂಡಿರುವ ಗ್ರಾಹಕರಲ್ಲಿ ಈ ನಿಯಮವು ಹೆಚ್ಚಿನ ಆತಂಕವನ್ನು ಸೃಷ್ಟಿಸಿದೆ.

ಅನೇಕ ಬಾಡಿಗೆದಾರರು ತಮಗಿಂತ ಮುಂಚೆ ಆ ಮನೆಯಲ್ಲಿದ್ದ ಹಳೆಯ ಫಲಾನುಭವಿಗಳ ಹೆಸರಿನಲ್ಲೇ ಗೃಹಜ್ಯೋತಿ ಸೌಲಭ್ಯ ಮುಂದುವರಿಯುತ್ತಿರುವುದನ್ನು ಬಳಸಿಕೊಳ್ಳುತ್ತಿದ್ದರು. “ನಾವು ಈ ಬಗ್ಗೆ ಮಾಲೀಕರ (Landlord) ಸಹಾಯ ಕೇಳಿದರೂ ಅವರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಈಗ ಅಧಿಕಾರಿಗಳು ಮರುಪರಿಶೀಲನೆಗೆ ಬಂದಾಗ ಹಳೆಯ ಫಲಾನುಭವಿಗಳ ಮೂಲ ದಾಖಲೆಗಳನ್ನು ಒದಗಿಸಲು ನಮ್ಮಿಂದ ಸಾಧ್ಯವಾಗುತ್ತಿಲ್ಲ. ಈ ತಾಂತ್ರಿಕ ಕಾರಣದಿಂದಾಗಿ ನಮಗೆ ಸಿಗುತ್ತಿದ್ದ ಉಚಿತ ವಿದ್ಯುತ್ ಕಡಿತ ಆಗಬಹುದು,” ಎಂದು ಹಲವು ಬಾಡಿಗೆ ನಿವಾಸಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಇಂದಿನ ಹವಾಮಾನ: ರಾಜ್ಯಾದ್ಯಂತ ಮುಂದುವರಿದ ಮೋಡ ಕವಿದ ವಾತಾವರಣ; ಉಡುಪಿ, ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್

ಕೇವಲ ಬಾಡಿಗೆದಾರರು ಮಾತ್ರವಲ್ಲದೆ, ಸ್ವಂತ ಮನೆ ಹೊಂದಿರುವ ಕೆಲವು ಕುಟುಂಬಗಳೂ ಸಹ ಈ ಸಮೀಕ್ಷೆಯಿಂದ ಇಕ್ಕಟ್ಟಿಗೆ ಸಿಲುಕಿದ್ದಾರೆ. ಯಲಹಂಕದ ನಿವಾಸಿಯೊಬ್ಬರು ಮಾತನಾಡಿ, “ನಾನು ನನ್ನ ಪತ್ನಿಯ ಹೆಸರಿನಲ್ಲಿ ಈ ಯೋಜನೆಗೆ ಅರ್ಜಿ ಸಲ್ಲಿಸಿದ್ದೆ, ಆದರೆ ದುರಾದೃಷ್ಟವಶಾತ್ ಇತ್ತೀಚೆಗೆ ಅವರು ನಿಧನರಾಗಿದ್ದಾರೆ. ಈಗ ಆ ಖಾತೆಯನ್ನು ನನ್ನ ಹೆಸರಿಗೆ ಲಿಂಕ್ ಮಾಡಿಸುವುದು ಹೇಗೆ ಮತ್ತು ಸೌಲಭ್ಯ ಮುಂದುವರಿಯುತ್ತದೆಯೇ ಇಲ್ಲವೇ ಎಂಬ ಗೊಂದಲ ನನಗಿದೆ,” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಈ ಎಲ್ಲಾ ಗೊಂದಲಗಳ ನಡುವೆ, ಸರ್ಕಾರವು ಕೇವಲ ಅನರ್ಹರನ್ನು ಮತ್ತು ನಿಯಮ ಬಾಹಿರವಾಗಿ ಸೌಲಭ್ಯ ಪಡೆಯುತ್ತಿರುವವರನ್ನು ಪತ್ತೆ ಹಚ್ಚಲು ಈ ಕಾರ್ಯಾಚರಣೆ ನಡೆಸುತ್ತಿರುವುದಾಗಿ ತಿಳಿಸಿದೆಯಾದರೂ, ಸಾರ್ವಜನಿಕ ವಲಯದಲ್ಲಿ ಮಾತ್ರ ತಲ್ಲಣ ಮುಂದುವರಿದಿದೆ.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us