AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ಸರ್ಕಾರ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿ ಉಚಿತ ವಿದ್ಯುತ್ ಯೋಜನೆ ಒಂದು ವರ್ಷ ಪೂರೈಸಿದೆ. ಯೋಜನೆಯಡಿ ನೀಡಲಾದ ಶೂನ್ಯ ಬಿಲ್ ಪರವಾಗಿ ಸರ್ಕಾರದ ವತಿಯಿಂದ ಎಸ್ಕಾಂಗಳಿಗೆ 8,844 ಕೋಟಿ ರೂ. ಬಿಲ್ ಪಾವತಿಸಲಾಗಿದೆ. ಇದೇ ಸಂದರ್ಭದಲ್ಲಿ, ಯೋಜನೆಯ ಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಯ 8,844 ಕೋಟಿ ರೂ. ಬಿಲ್ ಪಾವತಿಸಿದ ಸರ್ಕಾರ
ಗೃಹಜ್ಯೋತಿ ಯೋಜನೆ
ಗಣಪತಿ ಶರ್ಮಾ
|

Updated on: Aug 06, 2024 | 8:04 AM

Share

ಬೆಂಗಳೂರು, ಆಗಸ್ಟ್ 6: ಗೃಹ ಜ್ಯೋತಿ ಯೋಜನೆಯ ಸಮರ್ಪಕ ಮುಂದುವರಿಕೆಗಾಗಿ ರಾಜ್ಯದ ಆರು ವಿದ್ಯುತ್ ಸರಬರಾಜು ಕಂಪನಿಗಳ (ಎಸ್ಕಾಂ) ಖಾತೆಗಳಿಗೆ ರಾಜ್ಯ ಸರ್ಕಾರದ ಬೊಕ್ಕಸದಿಂದ 8,844 ಕೋಟಿ ರೂ. ಪಾವತಿಸಲಾಗಿದೆ. ಗೃಹ ಜ್ಯೋತಿ ಯೋಜನೆಯಡಿ ಮನೆಗಳಿಗೆ ನೀಡಲಾಗುವ ಶೂನ್ಯ ಬಿಲ್‌ಗಳಿಗೆ ಸರ್ಕಾರದ ವತಿಯಿಂದ ಪಾವತಿಸುತ್ತಿರುವ ಮೊತ್ತ ಇದಾಗಿದೆ.

ಇಂಧನ ಇಲಾಖೆಯ ಅಂಕಿಅಂಶಗಳ ಪ್ರಕಾರ, 1,70,90,681 ಗ್ರಾಹಕರು ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ. ಅದರಲ್ಲಿ 1.65 ಕೋಟಿ ಕುಟುಂಬಗಳು ಶೂನ್ಯ ಬಿಲ್ ಪಡೆಯುತ್ತವೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಸಾಮಾಜಿಕ ಮಾಧ್ಯಮದಲ್ಲಿ ಪ್ರಕಟಿಸಿದ್ದಾರೆ. ಯೋಜನೆಗೆ ಒಂದು ವರ್ಷವಾದ ಹಿನ್ನೆಲೆಯಲ್ಲಿ ಅವರು ಮಾಹಿತಿ ನೀಡಿದ್ದಾರೆ.

ಕೆಜೆ ಜಾರ್ಜ್ ಎಕ್ಸ್​ ಸಂದೇಶ

ಜುಲೈ ಅಂತ್ಯದವರೆಗಿನ ಬಿಲ್ ಮೊತ್ತವನ್ನು ಕ್ಲಿಯರ್ ಮಾಡಲಾಗಿದೆ. ಈ ತಿಂಗಳಿಗೆ, ಆಗಸ್ಟ್ 10 ಅಥವಾ 15 ರೊಳಗೆ ಅದನ್ನು ಪಾವತಿಸಲಾಗುವುದು. ಆದಾಯ, ಲಾಭ ಮತ್ತು ನಷ್ಟದ ಲೆಕ್ಕಪರಿಶೋಧನೆಯನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಕಟ್ಟುನಿಟ್ಟಾಗಿ ಪರಿಶೀಲಿಸಿರುವುದರಿಂದ ಸರ್ಕಾರವು ಯಾವುದೇ ಬಿಲ್‌ಗಳನ್ನು ಬಾಕಿ ಇರಿಸುತ್ತಿಲ್ಲ ಎಂದು ಮೂಲಗಳು ತಿಳಿಸಿವೆ.

ವಿದ್ಯುತ್ ಬೇಡಿಕೆ ಹೆಚ್ಚುತ್ತಿದೆ. ಆದರೆ ಇದಕ್ಕೆ ಗೃಹ ಜ್ಯೋತಿಯೇ ಕಾರಣ ಎಂದು ತೀರ್ಮಾನಿಸಲು ಸಾಧ್ಯವಿಲ್ಲ. ಆದಾಗ್ಯೂ, ಆದಾಯವು ಗರಿಷ್ಠ ಮಟ್ಟದಲ್ಲಿಲ್ಲದ ಕಾರಣ ಎಸ್ಕಾಮ್‌ಗಳಿಗೆ ರಾಜ್ಯ ಖಜಾನೆಯಿಂದ ಪಾವತಿಸುವ ಬಿಲ್‌ಗಳನ್ನು ಕಡಿಮೆ ಮಾಡಬೇಕಾದ ಅವಶ್ಯಕತೆಯಿದೆ ಎಂದು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಫಲಾನುಭವಿಗಳ ಸಂಖ್ಯೆಯಲ್ಲಿ ಕಡಿತಕ್ಕೆ ಚಿಂತನೆ

ಉಚಿತ ಯೂನಿಟ್ ಮಿತಿಯನ್ನು ಕಡಿಮೆ ಮಾಡಲು ಅಥವಾ ಹೆಚ್ಚಿಸುವ ಬಗ್ಗೆ ಯಾವುದೇ ಚರ್ಚೆ ಇಲ್ಲ. ಯೋಜನೆಯ ಫಲಾನುಭವಿಗಳ ಸಂಖ್ಯೆಯನ್ನು ಕಡಿಮೆ ಮಾಡಲು ಚಿಂತನೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ. ಯೋಜನೆಯನ್ನು ಈಗಾಗಲೇ ತಿರಸ್ಕರಿಸಿದವರಿಗೆ ಭವಿಷ್ಯದಲ್ಲಿ ಅನುಮತಿ ನೀಡದೇ ಇರುವ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಶ್ರಾವಣ ಮಾಸ ಆರಂಭವಾಗುತ್ತಿದ್ದಂತೆಯೇ ತರಕಾರಿ, ಹೂ, ಹಣ್ಣುಗಳ ಬೆಲೆ ಏರಿಕೆ; ಇಲ್ಲಿದೆ ದರ ಪಟ್ಟಿ

ಎಲ್ಲೆಲ್ಲಿ ಎಷ್ಟು ಫಲಾನುಭವಿಗಳು?

ಬೆಸ್ಕಾಂ ಮಿತಿಯಲ್ಲಿ ಅತಿ ಹೆಚ್ಚು ಸಂಖ್ಯೆಯ ಫಲಾನುಭವಿಗಳು (71,63,455) ಇದ್ದಾರೆ. ಹೆಸ್ಕಾಂ (ಹುಬ್ಬಳ್ಳಿ-ಧಾರವಾಡ) ವ್ಯಾಪ್ತಿಯಲ್ಲಿ 35,15,314 ಫಲಾನುಭವಿಗಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ