Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಗೃಹಜ್ಯೋತಿ ಯೋಜನೆಯ ಲಾಭ ಪಡೆದವರೆಷ್ಟು, ವಂಚಿತರಾದವರೆಷ್ಟು? ಇಲ್ಲಿದೆ ಮಾಹಿತಿ

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಜಾರಿಯಾಗಿ ಒಂದು ತಿಂಗಳಾಗಿದೆ. ಹೆಚ್ಚಿನ ಜನರು ಇದರ ಲಾಭ ಪಡೆಯುತ್ತಿದ್ದಾರೆ. ಅದಾಗ್ಯೂ, ಕೆಲವರು ಉಚಿತ ಎಂದು ಬೇಕಾಬಿಟ್ಟಿಯಾಗಿ ವಿದ್ಯುತ್ ಬಳಕೆ ಮಾಡಿ ಯೋಜನೆಯಿಂದ ವಂಚಿತರಾಗುತ್ತಿದ್ದಾರೆ. ಹಾಗಾದರೆ, ಈ ಯೋಜನೆಯ ಲಾಭ ಪಡೆದವರೆಷ್ಟು? ಉಚಿತ ಬಿಲ್​ನಿಂದ ವಂಚಿತರಾದ ನೋಂದಾಯಿತ ಜನರೆಷ್ಟು ಎಂಬುದು ಇಲ್ಲಿದೆ.

Gruha Jyothi Scheme: ಗೃಹಜ್ಯೋತಿ ಯೋಜನೆಯ ಲಾಭ ಪಡೆದವರೆಷ್ಟು, ವಂಚಿತರಾದವರೆಷ್ಟು? ಇಲ್ಲಿದೆ ಮಾಹಿತಿ
ಗೃಹಜ್ಯೋತಿ ಯೋಜನೆ
Follow us
Poornima Agali Nagaraj
| Updated By: Rakesh Nayak Manchi

Updated on: Aug 18, 2023 | 7:07 PM

ಬೆಂಗಳೂರು, ಆಗಸ್ಟ್ 18: ಕರ್ನಾಟಕ ಕಾಂಗ್ರೆಸ್ ಸರ್ಕಾರವು ತನ್ನ ಮಹತ್ವದ ಗೃಹಜ್ಯೋತಿ ಯೋಜನೆ (Gruha Jyothi Scheme) ಜಾರಿ ಮಾಡಿ ಒಂದು ತಿಂಗಳಾಗಿದೆ. ಲಕ್ಷಾಂತರ ಗ್ರಾಹಕರು ಈ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಆದರೆ, ಒಂದಷ್ಟು ನೋಂದಾಯಿತ ಗ್ರಾಹಕರು ನಿಗದಿತ ಮಿತಿಗಿಂದ ಹೆಚ್ಚುವರಿ ಯುನಿಟ್ ವಿದ್ಯುತ್ ಬಳಕೆ ಮಾಡಿ ಉಚಿತ ವಿದ್ಯುತ್​ ಲಾಭ ಪಡೆಯುವಲ್ಲಿ ವಂಚಿತರಾಗಿದ್ದಾರೆ. ಹಾಗಿದ್ದರೆ, ಈ ಯೋಜನೆಯ ಲಾಭ ಪಡೆದವರೆಷ್ಟು? ವಂಚಿತರಾದ ನೋಂದಾಯಿತ ಜನರೆಷ್ಟು? ಇಲ್ಲಿದೆ ಮಾಹಿತಿ.

ಗೃಹಜ್ಯೋತಿ ಯೋಜನೆಗೆ 1,40,31,320 ಗ್ರಾಹಕರು ಅರ್ಜಿ ಸಲ್ಲಿಸಿದ್ದರು. ಈ ಪೈಕಿ 74,08,769 ಮಂದಿಗೆ ಶೂನ್ಯ ಬಿಲ್ ನೀಡಲಾಗಿದೆ. ಆದರೆ, 45,29,633 ಜನರು ಸರಾಸರಿಗಿಂತ ಹೆಚ್ಚಿನ ವಿದ್ಯುತ್ ಬಳಕೆ ಮಾಡಿದ್ದಾರೆ. ಸುಮಾರು 21 ಲಕ್ಷ ಜನರು 200 ಯೂನಿಟ್​ಗಿಂತ ಹೆಚ್ಚು ಬಳಕೆ ಮಾಡಿ ಗೃಹ ಜ್ಯೋತಿ ಯೋಜನೆಯಿಂದ ವಂಚಿತರಾಗಿದ್ದಾರೆ.

ಇದನ್ನೂ ಓದಿ: ಉಚಿತ ವಿದ್ಯುತ್ ಬೇಡ, ಸರಿಯಾಗಿ ವಿದ್ಯುತ್ ಪೂರೈಕೆ ಮಾಡಿ: ರಾಜ್ಯ ಸರ್ಕಾರಕ್ಕೆ ಪ್ರಜ್ವಲ್‌ ರೇವಣ್ಣ ಮನವಿ

ರಾಜ್ಯ ಸರ್ಕಾರವು 1 ಕೋಟಿ 19 ಲಕ್ಷ ಜನರಿಗೆ ಗೃಹಜ್ಯೋತಿ ಬಿಲ್ ನೀಡಿದ್ದು, ಇದರಲ್ಲಿ ಶೇ.62.06 ರಷ್ಟು ಅಂದರೆ, 74 ಲಕ್ಷದ 8 ಸಾವಿರ ಜನರು ಸರ್ಕಾರ ನೀಡಿರುವ ಸರಾಸರಿ ಹಾಗೂ ಅದಕ್ಕಿಂತ ಕಡಿಮೆ ಯೂನಿಟ್ ಬಳಸಿದ್ದಾರೆ.

ಇನ್ನು, ಈಗಾಗಲೇ ಜುಲೈ ತಿಂಗಳ‌ ಶೂನ್ಯ ಬಿಲ್​​ಗಾಗಿ ಸರ್ಕಾರದಿಂದ ಎಲ್ಲಾ ಎಸ್ಕಾಂಗಳಿಗಾಗಿ ಒಟ್ಟು 650 ಕೋಟಿ ರೂ. ಹಣ ಬಿಡುಗಡೆಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಎಲ್ಲರ ಆಶೀರ್ವಾದ ಮಗ ದರ್ಶನ್ ಮೇಲಿರಲಿ: ಮೀನಾ ತೂಗುದೀಪ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ