AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಜುಲೈ ತಿಂಗಳಿನಿಂದ ಆರಂಭವಾಗಿದ್ದು, ಆಗಸ್ಟ್ ತಿಂಗಳಿನಿಂದ ಗ್ರಾಹಕರ ಮನೆಬಾಗಿಲಿಗೆ ಶೂನ್ಯ ವಿದ್ಯುತ್ ಬಿಲ್ ಬರಲಿದೆ.

ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್
ಆಗಸ್ಟ್ ಒಂದರಿಂದ ಗೃಹಜ್ಯೋತಿ ಯೋಜನೆ ಅಧಿಕೃವಾಗಿ ಆರಂಭImage Credit source: Pixabay
Poornima Agali Nagaraj
| Edited By: |

Updated on:Jul 29, 2023 | 4:30 PM

Share

ಬೆಂಗಳೂರು, ಜುಲೈ 29: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ (Gruha Jyothi Scheme) ಜುಲೈ ತಿಂಗಳಿನಿಂದ ಆರಂಭವಾಗಲಿದ್ದು, ಆಗಸ್ಟ್ ತಿಂಗಳಲ್ಲಿ ಶೂನ್ಯ ಬಿಲ್ ಪಡೆಯಲು ಗ್ರಾಹಕರು ಕಾತರರಾಗಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಉಚಿತ ವಿದ್ಯುತ್​ನ ಲಾಭ ದೊರೆಯಲಿದೆ.

ಗೃಹಜ್ಯೋತಿ ಯೋಜನೆಗೆ 1,18,50, 474 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಅಂದರೆ ಎರಡೂವರೆ ಕೋಟಿ ಫಲಾನಿಭವಿಗಳ ಪೈಕಿ ಶೇ.60 ರಷ್ಟು ಮಾತ್ರ ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಶೇ.40 ರಷ್ಟು ಗ್ರಾಹಕರು ಅರ್ಜಿ ಸಲ್ಲಿಸಲು ಬಾಕಿ ಉಳಿದಿದ್ದರು. ಜುಲೈ 25 ರ ನಂತರ ಅರ್ಜಿ ಸಲ್ಲಿದ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸೆಪ್ಟೆಂಬರ್ ತಿಂಗಳಲ್ಲಿ ಸಿಗಲಿದೆ.

ಗೃಹಜ್ಯೋತಿ ಅರ್ಜಿ ಸಲ್ಲಿಸಲು ಆಗುತ್ತಿರುವ ಸಮಸ್ಯೆಗಳು

  • ಆರ್.ಆರ್ ನಂಬರನಲ್ಲಿರುವ ಹೆಸರು, ಆಧಾರ್ ಹೆಸರು ಹೊಂದಾಣಿಕೆ ಆಗದೇ ಇರುವುದು
  • ಶೇಕಡಾ 25ರಷ್ಟು ಕರೆಂಟ್ ಮೀಟರ್ ಪೂರ್ವಿಕರ ಹೆಸರಲ್ಲಿರಲಿದ್ದು, ಈ ಪೈಕಿ ಸಾವನ್ನಪ್ಪಿದವರ ಹೆಸರಿನ ಸಂಖ್ಯೆಯೇ ಹೆಚ್ಚಿದೆ. ಹೀಗಾಗಿ ಮೀಟರ್ ಹೆಸರು ಬದಲಾಯಿಸಲು ಅರ್ಜಿ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ
  • ಆಧಾರ್​ಗೆ ನೀಡಿರುವ ಮೊಬೈಲ್ ಸಂಖ್ಯೆ ಅಲಭ್ಯವಾಗಿರುವುದು
  • ಬಹುತೇಕ ಜನರು ಮಾಲೀಕರು ಅಂತನೇ ಅರ್ಜಿ ಸಲ್ಲಿಕೆಗೆ ಕಾಯುತ್ತಿದ್ದಾರೆ
  • ಎಸ್ಕಾಂಗಳಿಗೆ ಕೊಡಲೇ ಗ್ರಾಹಕರ ಹೆಸರು ಬದಲಾವಣೆಗೆ ಅಸಾಧ್ಯ
  • ಉಚಿತ ವಿದ್ಯುತ್ ಪಡೆಯಲು ಹೋಗಿ ಮನೆ ಮಾಲೀಕರಿಗೆ ಅನುಮಾನ ಬಂದರೇ ಎಂಬ ಆತಂಕ
  • ಕೆಲವು ಗ್ರಾಹಕರು 200 ಯೂನಿಟ್​ಗಿಂತ ಹೆಚ್ಚು ಬಳಕೆ ಮಾಡುತ್ತಿದ್ದಾರೆ
  • ಸರ್ಕಾರಿ‌ ಅಧಿಕಾರಿಗಳು ಹಾಗೂ ಶ್ರೀಮಂತರು ಅರ್ಜಿ ಸಲ್ಲಿಸಲ್ಲ
  • 40 ಯೂನಿಟ್ ಒಳಗೆ ಬಳಸುವ ಅತಿ ಕಡು ಬಡವರಿಗೆ ಈಗಾಗಲೇ ಸರ್ಕಾರದ ಉಚಿತ ಕರೆಂಟ್ ನೀಡಲಾಗಿದೆ

ಇದನ್ನೂ ಓದಿ: Gruha Jyothi Scheme: ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

ಪರಿಹಾರವೇನು?

  • ಸದ್ಯಕ್ಕೆ ಮನೆ‌ ಮಾಲೀಕರೂ ಅಂತನೇ ಅರ್ಜಿ‌ ಸಲ್ಲಿಸುವ ಅವಶ್ಯಕತೆಯಿಲ್ಲ
  • ಮನೆ ಮಾಲೀಕರು ಲಾಭ ಪಡೆಯಲು ಅರ್ಜಿ ಸಲ್ಲಿಕೆ ವೇಳೆ ಇತರ ಆಯ್ಕೆ ಬಳಸಿಕೊಳ್ಳಬಹುದು
  • ತಾತ್ಕಲಿಕವಾಗಿ ಬಾಡಿಗೆದಾರರು ಹಾಗೂ‌ ಸಂಬಂಧಿಗಳು ಅಂತ ಅರ್ಜಿ ಸಲ್ಲಿಸಬಹುದು
  • ಮುಂದಿನ ದಿನದಲ್ಲಿ ಆರ್​ಆರ್ ನಂಬರ್ ಬದಲಾವಣೆ ನಂತರ‌ ಮಾಲೀಕ ಅಂತ ಬದಲಾಯಿಸಬಹುದು
  • ಬಾಡಿಗೆದಾರರು ಆಧಾರ್ ಲಿಂಕ್ ಆಗದಿದ್ದರೆ‌ ಮನೆಯ ಇತರ ಸದಸ್ಯರ ಹೆಸರಿನ ಮೂಲಕವೂ ಅರ್ಜಿ ಸಲ್ಲಿಸಬಹುದು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Sat, 29 July 23

ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!