ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ ಜುಲೈ ತಿಂಗಳಿನಿಂದ ಆರಂಭವಾಗಿದ್ದು, ಆಗಸ್ಟ್ ತಿಂಗಳಿನಿಂದ ಗ್ರಾಹಕರ ಮನೆಬಾಗಿಲಿಗೆ ಶೂನ್ಯ ವಿದ್ಯುತ್ ಬಿಲ್ ಬರಲಿದೆ.

ಗೃಹಜ್ಯೋತಿ ಯೋಜನೆ: ಆಗಸ್ಟ್​ನಿಂದ ಗ್ರಾಹಕರ ಕೈಸೇರಲಿದೆ ಶೂನ್ಯ ವಿದ್ಯುತ್ ಬಿಲ್
ಆಗಸ್ಟ್ ಒಂದರಿಂದ ಗೃಹಜ್ಯೋತಿ ಯೋಜನೆ ಅಧಿಕೃವಾಗಿ ಆರಂಭImage Credit source: Pixabay
Follow us
| Updated By: Rakesh Nayak Manchi

Updated on:Jul 29, 2023 | 4:30 PM

ಬೆಂಗಳೂರು, ಜುಲೈ 29: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವದ ಗೃಹಜ್ಯೋತಿ ಯೋಜನೆ (Gruha Jyothi Scheme) ಜುಲೈ ತಿಂಗಳಿನಿಂದ ಆರಂಭವಾಗಲಿದ್ದು, ಆಗಸ್ಟ್ ತಿಂಗಳಲ್ಲಿ ಶೂನ್ಯ ಬಿಲ್ ಪಡೆಯಲು ಗ್ರಾಹಕರು ಕಾತರರಾಗಿದ್ದಾರೆ. ಜೂನ್ 25 ರ ಒಳಗಾಗಿ ಅರ್ಜಿ ಸಲ್ಲಿಕೆ ಮಾಡಿರುವ ಫಲಾನುಭವಿಗಳಿಗೆ ಮಾತ್ರ ಉಚಿತ ವಿದ್ಯುತ್​ನ ಲಾಭ ದೊರೆಯಲಿದೆ.

ಗೃಹಜ್ಯೋತಿ ಯೋಜನೆಗೆ 1,18,50, 474 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದಾರೆ. ಅಂದರೆ ಎರಡೂವರೆ ಕೋಟಿ ಫಲಾನಿಭವಿಗಳ ಪೈಕಿ ಶೇ.60 ರಷ್ಟು ಮಾತ್ರ ಜನರು ಅರ್ಜಿ ಸಲ್ಲಿಸಿದ್ದಾರೆ. ಇನ್ನು ಶೇ.40 ರಷ್ಟು ಗ್ರಾಹಕರು ಅರ್ಜಿ ಸಲ್ಲಿಸಲು ಬಾಕಿ ಉಳಿದಿದ್ದರು. ಜುಲೈ 25 ರ ನಂತರ ಅರ್ಜಿ ಸಲ್ಲಿದ ಫಲಾನುಭವಿಗಳಿಗೆ ಈ ಯೋಜನೆಯ ಲಾಭ ಸೆಪ್ಟೆಂಬರ್ ತಿಂಗಳಲ್ಲಿ ಸಿಗಲಿದೆ.

ಗೃಹಜ್ಯೋತಿ ಅರ್ಜಿ ಸಲ್ಲಿಸಲು ಆಗುತ್ತಿರುವ ಸಮಸ್ಯೆಗಳು

  • ಆರ್.ಆರ್ ನಂಬರನಲ್ಲಿರುವ ಹೆಸರು, ಆಧಾರ್ ಹೆಸರು ಹೊಂದಾಣಿಕೆ ಆಗದೇ ಇರುವುದು
  • ಶೇಕಡಾ 25ರಷ್ಟು ಕರೆಂಟ್ ಮೀಟರ್ ಪೂರ್ವಿಕರ ಹೆಸರಲ್ಲಿರಲಿದ್ದು, ಈ ಪೈಕಿ ಸಾವನ್ನಪ್ಪಿದವರ ಹೆಸರಿನ ಸಂಖ್ಯೆಯೇ ಹೆಚ್ಚಿದೆ. ಹೀಗಾಗಿ ಮೀಟರ್ ಹೆಸರು ಬದಲಾಯಿಸಲು ಅರ್ಜಿ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ
  • ಆಧಾರ್​ಗೆ ನೀಡಿರುವ ಮೊಬೈಲ್ ಸಂಖ್ಯೆ ಅಲಭ್ಯವಾಗಿರುವುದು
  • ಬಹುತೇಕ ಜನರು ಮಾಲೀಕರು ಅಂತನೇ ಅರ್ಜಿ ಸಲ್ಲಿಕೆಗೆ ಕಾಯುತ್ತಿದ್ದಾರೆ
  • ಎಸ್ಕಾಂಗಳಿಗೆ ಕೊಡಲೇ ಗ್ರಾಹಕರ ಹೆಸರು ಬದಲಾವಣೆಗೆ ಅಸಾಧ್ಯ
  • ಉಚಿತ ವಿದ್ಯುತ್ ಪಡೆಯಲು ಹೋಗಿ ಮನೆ ಮಾಲೀಕರಿಗೆ ಅನುಮಾನ ಬಂದರೇ ಎಂಬ ಆತಂಕ
  • ಕೆಲವು ಗ್ರಾಹಕರು 200 ಯೂನಿಟ್​ಗಿಂತ ಹೆಚ್ಚು ಬಳಕೆ ಮಾಡುತ್ತಿದ್ದಾರೆ
  • ಸರ್ಕಾರಿ‌ ಅಧಿಕಾರಿಗಳು ಹಾಗೂ ಶ್ರೀಮಂತರು ಅರ್ಜಿ ಸಲ್ಲಿಸಲ್ಲ
  • 40 ಯೂನಿಟ್ ಒಳಗೆ ಬಳಸುವ ಅತಿ ಕಡು ಬಡವರಿಗೆ ಈಗಾಗಲೇ ಸರ್ಕಾರದ ಉಚಿತ ಕರೆಂಟ್ ನೀಡಲಾಗಿದೆ

ಇದನ್ನೂ ಓದಿ: Gruha Jyothi Scheme: ಹಿಂಬಾಕಿ ಉಳಿಸಿಕೊಂಡಿದ್ದರೂ ಗೃಹಜ್ಯೋತಿ ಪ್ರಯೋಜನ ಪಡೆಯಬಹುದು: ಬೆಸ್ಕಾಂ

ಪರಿಹಾರವೇನು?

  • ಸದ್ಯಕ್ಕೆ ಮನೆ‌ ಮಾಲೀಕರೂ ಅಂತನೇ ಅರ್ಜಿ‌ ಸಲ್ಲಿಸುವ ಅವಶ್ಯಕತೆಯಿಲ್ಲ
  • ಮನೆ ಮಾಲೀಕರು ಲಾಭ ಪಡೆಯಲು ಅರ್ಜಿ ಸಲ್ಲಿಕೆ ವೇಳೆ ಇತರ ಆಯ್ಕೆ ಬಳಸಿಕೊಳ್ಳಬಹುದು
  • ತಾತ್ಕಲಿಕವಾಗಿ ಬಾಡಿಗೆದಾರರು ಹಾಗೂ‌ ಸಂಬಂಧಿಗಳು ಅಂತ ಅರ್ಜಿ ಸಲ್ಲಿಸಬಹುದು
  • ಮುಂದಿನ ದಿನದಲ್ಲಿ ಆರ್​ಆರ್ ನಂಬರ್ ಬದಲಾವಣೆ ನಂತರ‌ ಮಾಲೀಕ ಅಂತ ಬದಲಾಯಿಸಬಹುದು
  • ಬಾಡಿಗೆದಾರರು ಆಧಾರ್ ಲಿಂಕ್ ಆಗದಿದ್ದರೆ‌ ಮನೆಯ ಇತರ ಸದಸ್ಯರ ಹೆಸರಿನ ಮೂಲಕವೂ ಅರ್ಜಿ ಸಲ್ಲಿಸಬಹುದು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:16 pm, Sat, 29 July 23

ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ