AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ: ಆದರೂ ಮುಗಿಯದ ಗೋಳು!

ಕರ್ನಾಟಕ ಕಾಂಗ್ರೆಸ್ ಸರ್ಕಾರದ ಐದು ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಜೂನ್ ತಿಂಗಳ ಹಣ ಮನೆ ಯಜಮಾನಿಯರ ಬ್ಯಾಂಕ್ ಖಾತೆಗೆ ಸಂದಾಯವಾಗಿದೆ. ಆದಾಗ್ಯೂ, ಮಹಿಳೆಯರ ಗೋಳು ತಪ್ಪಿಲ್ಲ. ಯಾಕೆಂದರೆ ಇನ್ನೆರಡು ತಿಂಗಳ ಬಾಕಿ ಹಣ ಜಮೆಯಾಗಲು ಇನ್ನೂ ಸಮಯ ಬೇಕಂತೆ!

ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ: ಆದರೂ ಮುಗಿಯದ ಗೋಳು!
ಕೊನೆಗೂ ಗೃಹಲಕ್ಷ್ಮಿಯರ ಖಾತೆಗೆ ಬಂತು ಹಣ
Poornima Agali Nagaraj
| Edited By: |

Updated on: Sep 10, 2024 | 11:13 AM

Share

ಬೆಂಗಳೂರು, ಸೆಪ್ಟೆಂಬರ್ 10: ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾವಣೆಯಾಗದ ವಿಚಾರ ಕಳೆದ ಕೆಲವು ತಿಂಗಳುಗಳಿಂದ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಗ್ಯಾರಂಟಿಗಳ ಹೆಸರಿನಲ್ಲಿ ಕಾಂಗ್ರೆಸ್ ಪಕ್ಷವು ಜನರನ್ನು ವಂಚಿಸುತ್ತಿದೆ ಎಂದು ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್ ಟೀಕಿಸಿದ್ದವು. ಆದರೆ, ತಾಂತ್ರಿಕ ಕಾರಣಗಳಿಂದ ಗೃಹಲಕ್ಷ್ಮಿ ಹಣ ವರ್ಗಾವಣೆಯಾಗುತ್ತಿದೆ. ಖಂಡಿತವಾಗಿಯೂ ಸರ್ಕಾರವು 2000 ರೂ. ವರ್ಗಾವಣೆ ಮಾಡಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದರು. ಇದೀಗ ಕೊನೆಗೂ ಜೂನ್ ತಿಂಗಳ ಹಣ ಮಹಿಳೆಯರ ಖಾತೆಗಳಿಗೆ ವರ್ಗಾವಣೆಯಾಗಿದೆ.

ಮೂರು ತಿಂಗಳ‌ ಬಳಿಕ‌ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆ ಸೇರಿದೆ. ಆದರೆ, ಬಾಕಿ ಇರುವ ಇನ್ನೆರಡು ತಿಂಗಳ‌ ಹಣ ಖಾತೆ ಸೇರುವುದು ವಿಳಂಬವಾಗಲಿದೆ. ಸದ್ಯ ಜುಲೈ, ಆಗಸ್ಟ್ ತಿಂಗಳ ಹಣ ಖಾತೆಗಳಿಗೆ ವರ್ಗಾವಣೆಯಾಗುವುದು ಬಾಕಿ ಉಳಿದಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳುವುದೇನು?

ಜುಲೈ ಹಾಗೂ ಆಗಸ್ಟ್​ ತಿಂಗಳ ಗೃಹಲಕ್ಷ್ಮಿ ಹಣವನ್ನು ಖಾತೆಗೆ ವರ್ಗಾಯಿಸುವ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಾಗಿ ಜುಲೈ ತಿಂಗಳ‌ ಬರುವುದು ವಿಳಂಬವಾಗುವ ಸಾಧ್ಯತೆ ಇದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಸದ್ಯ ಮಹಿಳಾ ಮತ್ತು ಮಕ್ಕಳ ಇಲಾಖೆಯಯಿಂದ ಈಗಾಗಲೇ ಜುಲೈ ತಿಂಗಳ ಹಣಕ್ಕೆ ಪತ್ರ ಬರೆಯಲಾಗಿದೆ. ಇನ್ನೂ ಹಣ ಬಿಡುಗಡೆ ಮಾಡಿಲ್ಲ.‌ ಹೀಗಾಗಿ ಜುಲೈ ತಿಂಗಳ ಹಣ ಬರುವುದು ತಡವಾಗಲಿದೆ. ಸರ್ಕಾರ ನಮಗೆ ಬೇಗ ಕೊಟ್ಟರೆ ನಾವು ಖಾತೆಗಳಿಗೆ ವರ್ಗಾವಣೆ ಮಾಡುತ್ತೇವೆ. ಆದರೆ, ಸರ್ಕಾರದಿಂದ ಹಣ ಬಿಡುಗಡೆ ಮಾಡುವುದು ತಡವಾಗುತ್ತಿದೆ ಎಂದಿದ್ದಾರೆ.

ಜೂನ್ ತಿಂಗಳಲ್ಲಿ ಎಸ್ಸಿ, ಎಸ್ಟಿ ಫಾಲಾನುಭವಿಗಳ‌ ಪೋರ್ಟಲ್​ನಲ್ಲಿ ಒಂದಷ್ಟು ಸಮಸ್ಯೆಗಳು ಕಂಡುಬಂದಿದ್ದವು. ಅವುಗಳನ್ನು ಸರಿಪಡಿಸಿ ಈಗ ಖಾತೆಗೆ ಹಣಹಾಕಲಾಗುತ್ತಿದೆ. ಈ ಮಧ್ಯೆ, ಜೂನ್ ತಿಂಗಳ ಹಣದ ಜತೆಗೇ ಜುಲೈ ಹಣ ಕೂಡ ಬರಲಿದೆ ಎಂದು ಕಾಯುತ್ತಿದ್ದ ಫಾಲಾನುಭವಿಗಳಿಗೆ ನಿರಾಸೆಯಾಗಿದೆ.

ದುಡ್ಡಿನ ಕೊರತೆ ಇಲ್ಲವೆಂದ ಹೆಬ್ಬಾಳ್ಕರ್

ಜೂನ್ ತಿಂಗಳದ್ದು 80,000 ಜನರಿಗೆ ಹಣ ಬಂದಿರಲಿಲ್ಲ. ಅದು ಕೂಡ ಈಗಾಗಲೇ ವರ್ಗಾವಣೆಯಾಗಿದೆ. ಎಸ್ಸಿ, ಎಸ್ಟಿ ಪೋರ್ಟಲ್ ಬೇರೆ, ಹೀಗಾಗಿ ಅವರಿಗೆ ತೊಂದರೆ ಆಗಿತ್ತು. ಸರ್ಕಾರಕ್ಕೆ ದುಡ್ಡಿನ ಸಮಸ್ಯೆ ಇಲ್ಲ. ವಿರೋಧ ಪಕ್ಷಗಳು ವೃಥಾ ಆರೋಪ ಮಾಡುತ್ತಿವೆ ಎಂದು ಲಕ್ಷ್ಮೀ ಹೆಬ್ಬಾಳ್ಕರ್ ‘ಟಿವಿ9’ಗೆ ತಿಳಿಸಿದ್ದಾರೆ.

ಇದನ್ನೂ ಓದಿ: 350ಕ್ಕೂ ಹೆಚ್ಚು ಪ್ರಭಾವಿ ಅಧಿಕಾರಿಗಳಿಗೆ ಸೈಟ್​​​ ಹಂಚಿಕೆ ಆರೋಪ: ಮುಡಾದ 18 ಅಧಿಕಾರಿಗಳಿಗೆ ಮೈಸೂರು ಲೋಕಾಯುಕ್ತ ನೋಟಿಸ್

ಗೃಹಲಕ್ಷ್ಮಿ ಯೋಜನೆ ಒಂದು ಮಹತ್ವಾಕಾಂಕ್ಷೆಯ ಯೋಜನೆ. ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಸಿಎಂ ಬಳಿಯೂ ಹಣ ಬಿಡುಗಡೆ ವಿಚಾರವಾಗಿ ಮಾತುಕತೆ ನಡೆಸಿದ್ದೇನೆ. ತಾಂತ್ರಿಕ ದೋಷವಾದಾಗ ಹಚ್ಚುಕಡಿಮೆ ಆಗುತ್ತದೆ. ಹಾಗೆಂದು ಹಣ ವರ್ಗಾವಣೆ ಮಾಡಿಯೇ ಮಾಡುತ್ತೇವೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
ರೂಪಾಯಿಗೆ ಬಿಗ್ ಶಾಕ್, ಮೊದಲ ಬಾರಿಗೆ 93ರ ಗಡಿ ದಾಟಿದ ಭಾರತೀಯ ಕರೆನ್ಸಿ
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
‘ಡಿಕೆಡಿ 5’ ಕ್ವಾಟರ್​ ಫಿನಾಲೆ; ಫಿನಾಲೆ ಟಿಕೆಟ್​ ಸಿಗೋದು ಯಾರಿಗೆ?
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕೈಲಾದೇವಿ ಯಾತ್ರೆ ಮುಗಿಸಿ ವಾಪಸಾಗುತ್ತಿದ್ದ ವಾಹನ ಅಪಘಾತ
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಕಾಲಿಗೆ ಬೀಳ್ತೀವಿ, ಸಾರಾಯಿ ಬಂದ್ ಮಾಡಿಸಿ: ಶಾಸಕರ ಮುಂದೆ ಮಹಿಳೆಯರು ಕಣ್ಣೀರು
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಇಸ್ರೇಲ್​​ನ ಹೈಫಾ ತೈಲ ಸಂಸ್ಕರಣಾಗಾರದ ಮೇಲೆ ಇರಾನ್ ಕ್ಷಿಪಣಿ ದಾಳಿ
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
ಟಿಕೆಟ್​​ ಘೋಷಣೆಗೂ ಮುನ್ನವೇ ನಾಮಪತ್ರ ಸಲ್ಲಿಕೆಗೆ ಮುಂದಾದ ಸಚಿವರ ಪುತ್ರ!
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
‘ಧುರಂಧರ್ 2’ ನೋಡಲು ದುಬೈನಿಂದ ಭಾರತಕ್ಕೆ ಬಂದ ಖ್ಯಾತ ಇನ್​​ಫ್ಲುಯೆನ್ಸರ್
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಮೆಡಿಕಲ್ ವಿದ್ಯಾರ್ಥಿಯ ಅಜಾಗರೂಕ ಚಾಲನೆಗೆ ಬೈಕ್ ಸವಾರ ಸ್ಥಳದಲ್ಲೇ ಸಾವು!
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಸಂಚಾರ ನಿಯಂತ್ರಕರ ಕೊಠಡಿಗೇ ನುಗ್ಗಿದ BMTC ಬಸ್! ವಿಡಿಯೋ ನೋಡಿ
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿಗಾಗಿ ಜನರ ಸಾಗರ!
ಬೊಮ್ಮನಹಳ್ಳಿಯಲ್ಲಿ ಉಚಿತ ಕೋಳಿಗಾಗಿ ಜನರ ಸಾಗರ!