AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ

ಕರ್ನಾಟಕ ಸರ್ಕಾರ ಪರಿಚಯಿಸಿದ ವಾಟ್ಸ್​ಆ್ಯಪ್ ಚಾಟ್‌ಬಾಟ್ ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಹೇಗೆ ನೆರವಾಗುತ್ತದೆ ಎಂಬ ಮಾಹಿತಿ ಇಲ್ಲಿದೆ.

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ವಾಟ್ಸ್​​ಆ್ಯಪ್ ಚಾಟ್​ಬಾಟ್; ಬಳಸುವುದು ಹೇಗೆ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
TV9 Web
| Updated By: Ganapathi Sharma|

Updated on:Aug 04, 2023 | 8:30 PM

Share

ಬೆಂಗಳೂರು: ಗೃಹ ಲಕ್ಷ್ಮಿ (Gruha Lakshmi Scheme) ಯೋಜನೆಗೆ ಅರ್ಜಿ ಸಲ್ಲಿಸಲು ನಾಗರಿಕರಿಗೆ ಸಹಾಯ ಮಾಡಲು ಕರ್ನಾಟಕ ಸರ್ಕಾರ ಪರಿಚಯಿಸಿದ ವಾಟ್ಸ್​ಆ್ಯಪ್ ಚಾಟ್‌ಬಾಟ್ (WhatsApp Chatbot) ಸುಮಾರು ಏಳು ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಅರ್ಜಿ ಸಲ್ಲಿಸಲು ನೆರವಾಗಿದೆ. ಇ-ಆಡಳಿತಕ್ಕಾಗಿ ಕೇಂದ್ರವು ಅಭಿವೃದ್ಧಿಪಡಿಸಿದ ಚಾಟ್‌ಬಾಟ್ ಅರ್ಜಿ ಸಲ್ಲಿಸುವ ಮಹಿಳೆಯರ ಜತೆ ಸಂವಹನ ನಡೆಸುತ್ತದೆ ಮತ್ತು ಅವರಿಗೆ ಮಾರ್ಗದರ್ಶನ ನೀಡುತ್ತದೆ. ಅರ್ಜಿದಾರರು ಎಲ್ಲಾ ದಾಖಲೆಗಳನ್ನು ಸಿದ್ಧಪಡಿಸಿ ಇಟ್ಟುಕೊಂಡಿದ್ದರೆ, ಚಾಟ್‌ಬಾಟ್‌ನ ಸಹಾಯದಿಂದ ಮೂರು ನಿಮಿಷಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಚಾಟ್‌ಬಾಟ್ ಹೇಗೆ ಕೆಲಸ ಮಾಡುತ್ತದೆ?

ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಮಹಿಳೆಯರು ವಾಟ್ಸ್​ಆ್ಯಪ್​​​ನಲ್ಲಿ ಪಠ್ಯ ಸಂದೇಶಗಳ ಮೂಲಕ ಚಾಟ್‌ಬಾಟ್‌ನೊಂದಿಗೆ ಸಂವಹನ ನಡೆಸಬಹುದು. 8147500500 ಫೋನ್ ಸಂಖ್ಯೆಗೆ ಲಿಂಕ್ ಮಾಡಲಾದ ಚಾಟ್‌ಬಾಟ್ ಅರ್ಜಿಗಳನ್ನು ಸಲ್ಲಿಸಲು ನಾಗರಿಕರಿಗೆ ಸಹಾಯ ಮಾಡುತ್ತದೆ. ಅಪ್ಲಿಕೇಶನ್‌ಗಳನ್ನು ಸ್ವೀಕರಿಸಲು ಚಾಟ್‌ಬಾಟ್ ಅನ್ನು ಬೆಂಗಳೂರುಒನ್, ಕರ್ನಾಟಕಒನ್ ಮತ್ತು ಗ್ರಾಮಒನ್ ಕಚೇರಿಗಳಲ್ಲಿ ಬಳಸಲಾಗುತ್ತಿದೆ. ಚಾಟ್‌ಬಾಟ್‌ಗಳನ್ನು ಸಾಮಾನ್ಯವಾಗಿ ಕಂಪನಿಗಳು ಗ್ರಾಹಕರ ನೆರವಿಗಾಗಿ ಬಳಸುತ್ತವೆ, ಆದರೆ ವರದಿಗಳ ಪ್ರಕಾರ ಸರ್ಕಾರವು ಚಾಟ್‌ಬಾಟ್ ಅನ್ನು ಬಳಸುತ್ತಿರುವುದು ಇದೇ ಮೊದಲು.

ಇದನ್ನೂ ಓದಿ: Gruha Lakshmi Scheme: ಯಜಮಾನಿಗೆ 2000 ರೂ. ಗೃಹಲಕ್ಷ್ಮೀ ಯೋಜನೆಯ ಮಾರ್ಗಸೂಚಿ ಒಮ್ಮೆ ನೋಡಿ

ಗೃಹ ಲಕ್ಷ್ಮಿಯು ಕಾಂಗ್ರೆಸ್ ಸರ್ಕಾರವು ಪ್ರಾರಂಭಿಸಿದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದೆ. ಇದರ ಅಡಿಯಲ್ಲಿ ಕುಟುಂಬದ ಯಜಮಾನಿಯು ಸರ್ಕಾರದಿಂದ ಮಾಸಿಕ ರೂ 2,000 ಸಹಾಯಧನಕ್ಕೆ ಅರ್ಹರಾಗಿದ್ದಾರೆ. ಕಳೆದ ವಾರದವರೆಗೆ 94 ಲಕ್ಷಕ್ಕೂ ಹೆಚ್ಚು ಮಹಿಳೆಯರು ಗೃಹ ಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದಾರೆ. ಚಾಟ್‌ಬಾಟ್ ಮೂಲಕ ಏಳು ಲಕ್ಷಕ್ಕೂ ಹೆಚ್ಚು ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಗೃಹ ಲಕ್ಷ್ಮಿ ಯೋಜನೆಯಿಂದ ಸರ್ಕಾರದ ಬೊಕ್ಕಸಕ್ಕೆ ವಾರ್ಷಿಕ 17,500 ಕೋಟಿ ರೂ. ಹೊರೆಯಾಗುತ್ತದೆ.

ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್‌ಗಳ ಯೋಜನೆಗೆ ಅರ್ಜಿಗಳನ್ನು ಸ್ವೀಕರಿಸಲು ಚಾಟ್‌ಬಾಟ್‌ಗಳನ್ನು ಬಳಸಲು ಸರ್ಕಾರ ಯೋಜಿಸುತ್ತಿದೆ ಎಂದು ವರದಿಯಾಗಿದೆ. ಈ ಯೋಜನೆ ಅಡಿಯಲ್ಲಿ ಕರ್ನಾಟಕದ ಮಹಿಳೆಯರು ಸರ್ಕಾರಿ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:26 pm, Fri, 4 August 23

ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
ಪೂಜೆ ಮಾಡಿದರೆ ಇಷ್ಟಾರ್ಥಗಳು ನೆರವೇರುತ್ತವೆ ಎನ್ನುವ ಗೃಹಿಣಿಯರು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
‘ನಮ್ಮ ಮನೆ ಹತ್ತಿರವೇ ಅಟ್ಯಾಕ್ ಆಗಿದೆ’: ಪೊಲೀಸ್ ಎದುರು ಪ್ರಥಮ್ ಅಳಲು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
PM Modi Speech Live: ಪ್ರಧಾನಿ ನರೇಂದ್ರ ಮೋದಿ ಲೋಕಸಭಾ ಭಾಷಣದ ನೇರಪ್ರಸಾರ
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ದರ್ಶನ್ ವಿಗ್ ಧರಿಸುತ್ತಾರೆ, ಅದನ್ನು ಹೇಗೆ ಕಿತ್ತುಕೊಳ್ಳಲಾದೀತು? ಪ್ರಥಮ್
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಹಿಮಾಚಲ ಪ್ರದೇಶದ ಮಂಡಿಯಲ್ಲಿ ಮೇಘಸ್ಫೋಟ; ದಿಢೀರ್ ಪ್ರವಾಹದಿಂದ ಮೂವರು ಸಾವು
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಪಹಲ್ಗಾಮ್ ದಾಳಿಗೆ ಭದ್ರತಾ ಲೋಪವೇ ಕಾರಣ: ಖರ್ಗೆ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಕಾಂಗ್ರೆಸ್​ನ ದಲಿತ ವಿರೋಧಿ ನೀತಿಯಿಂದ ಖರ್ಗೆ ಸಿಎಂ ಆಗಲಿಲ್ಲ: ಜ್ಞಾನೇಂದ್ರ
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಅವಮಾನಗಳ ಹೊರತಾಗಿಯೂ ಸಿಎಂ ವಿರುದ್ಧ ಮಾತಾಡದ ಶಿವಕುಮಾರ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್
ಖರ್ಗೆಯವರ ಪೂರ್ತಿ ಹೇಳಿಕೆ ಕೇಳಿಸಿಕೊಂಡರೆ ವಿಷಯ ಅರ್ಥವಾಗುತ್ತದೆ: ಪ್ರಿಯಾಂಕ್