AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​

ಇಲ್ಲಸಲ್ಲದ ನೆಪ ಹೇಳಿ ಗೃಹಲಕ್ಷ್ಮಿ ಯೋಜನೆಯಿಂದ ರಾಜ್ಯ ಸರ್ಕಾರ ತಾಯಂದಿರ ಹೆಸರನ್ನು ಕೈಬಿಡುತ್ತಿರುವುದಾಗಿ ಎಕ್ಸ್​​ ಪೋಸ್ಟ್​ ಮೂಲಕ ಜೆಡಿಎಸ್ ಆಕ್ರೋಶ ವ್ಯಕ್ತಪಡಿಸಿದೆ. ಇದನ್ನು 'ವೋಟ್ ಬ್ಯಾಂಕ್ ವಂಚನೆ' ಎಂದು ಕರೆದಿರುವ ಜೆಡಿಎಸ್​​, 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿದೆ ಎಂದು ಕಿಡಿ ಕಾರಿದೆ.

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ: ಎಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​
ಕ್ಸ್​​ ಪೋಸ್ಟ್​ ಮೂಲಕ ಕಾಂಗ್ರೆಸ್​​ಗೆ ಕುಟುಕಿದ ಜೆಡಿಎಸ್​​ Image Credit source: JDS X Account
ಪ್ರಸನ್ನ ಹೆಗಡೆ
|

Updated on: Jun 11, 2026 | 10:47 AM

Share

ಬೆಂಗಳೂರು, ಜೂನ್​​ 12: ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳು ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಣ ಪಡೆಯಲು ಬಯೋಮೆಟ್ರಿಕ್ ದೃಢೀಕರಣ ಸೇರಿದಂತೆ ಕೆಲ ದಾಖಲೆಗಳು ಇನ್ನು ಅಗತ್ಯ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಪ್ರಸ್ತುತ ರಾಜ್ಯದಲ್ಲಿ 1.30 ಕೋಟಿ ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಇದರಲ್ಲಿ ಸುಮಾರು 1.48 ಲಕ್ಷ ಫಲಾನುಭವಿಗಳು ಮೃತಪಟ್ಟಿದ್ದರೂ ಅವರ ಖಾತೆಗೆ ಕಳೆದ ಐದು ತಿಂಗಳುಗಳಿಂದ ಹಣ ಸಂದಾಯವಾಗುತ್ತಿರುವ ಮಾಹಿತಿಯ ಆಧಾರದಲ್ಲಿ ಕೆಲ ನಿಯಮಗಳ ಪರಿಷ್ಕರಣೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ರಾಜ್ಯ ಸಕರ್ಕರದ ವಿರುದ್ಧ ಜೆಡಿಎಸ್​​ ವಾಗ್ದಾಳಿ ನಡೆಸಿದ್ದು, ವಚನಭ್ರಷ್ಟ ಕಾಂಗ್ರೆಸ್‌ನ ಗ್ಯಾರಂಟಿಗಳ ಅಸಲಿ ಬಣ್ಣ ಬಯಲಾಗಿದೆ ಎಂದು ಆರೋಪಿಸಿದೆ.

ಎಕ್ಸ್​​ ಪೋಸ್ಟ್​​ ಮೂಲಕ ಜೆಡಿಎಸ್​​ ಕಿಡಿ

ಚುನಾವಣೆಗೂ ಮುನ್ನ ಯೋಜನೆಗೆ ಯಾವ ಷರತ್ತೂ ಇರಲಿಲ್ಲ. ಪ್ರತಿ ಮನೆಯೊಡತಿಗೆ 2,000 ಎಂದು ರಾಜ್ಯದ ತಾಯಂದಿರ ಕಿವಿಗೆ ಹೂವಿಟ್ಟ ಕಾಂಗ್ರೆಸ್​​ ಸರ್ಕಾರ ಇದೀಗ 17 ಜಿಲ್ಲೆಗಳಲ್ಲಿ ಬರೋಬ್ಬರಿ 1.1 ಲಕ್ಷಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ಕಿತ್ತುಹಾಕಿ ತನ್ನ ನೈಜ ಮುಖವನ್ನು ಬಹಿರಂಗಪಡಿಸಿದೆ. ಬಯೋಮೆಟ್ರಿಕ್, ಸರ್ವರ್ ಪ್ರಾಬ್ಲಮ್ ಎಂದು ಒಂದಿಲ್ಲೊಂದು ನೆಪ ಹೇಳಿ ಬಡವರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಈ ‘ಕೈ’ ಸರ್ಕಾರದ ದ್ರೋಹವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ ಎಂದು ಜೆಡಿಎಸ್​​ ಹೇಳಿದೆ.

ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ; ಬಯೋಮೆಟ್ರಿಕ್ ದೃಢೀಕರಣದ ಜೊತೆ ಈ ಎಲ್ಲ ದಾಖಲೆ ಕಡ್ಡಾಯ

‘ಇದು ಕೇವಲ ವೋಟ್ ಬ್ಯಾಂಕ್​​ಗಾಗಿ ಮಾಡಿದ ವಂಚನೆ’

ಇದಕ್ಕಿಂತ ನಾಚಿಕೆಗೇಡಿನ ಸಂಗತಿ ಎಂದರೆ, ಗೃಹಲಕ್ಷ್ಮಿ ಕಡಿತದ ಬಗ್ಗೆ ಸಾಕ್ಷಾತ್ ಮುಖ್ಯಮಂತ್ರಿಗಳನ್ನೇ ಕೇಳಿದರೆ, ನನಗೆ ಗೊತ್ತಿಲ್ಲ ಎಂಬ ಬೇಜವಾಬ್ದಾರಿ ಉತ್ತರ ಕೊಡುತ್ತಾರೆ. ಹಾಗಾದರೆ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಯಾರು? ಸಿಎಂ ಅವರಿಗೆ ಗೊತ್ತಿಲ್ಲದೆ ಇಲಾಖೆಗಳಲ್ಲಿ ಇಷ್ಟೆಲ್ಲಾ ನಡೆಯುತ್ತಿದೆಯೇ ಅಥವಾ ಗೊತ್ತಿದ್ದೂ ನಾಟಕವಾಡುತ್ತಿದ್ದಾರೆಯೇ? 5,000 ಕೋಟಿ ರೂ. ಗೃಹಲಕ್ಷ್ಮಿ ಹಣವನ್ನು ತಿಂದು ತೇಗಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ, ಮತಕ್ಕಾಗಿ ಮಹಿಳೆಯರನ್ನು ಯಾಮಾರಿಸಿ ಅಧಿಕಾರ ಸಿಕ್ಕ ಮೇಲೆ ಅವರನ್ನು ಅನರ್ಹರು ಎಂದು ಬೀದಿಗೆ ತಳ್ಳುವುದು ಯಾವ ರೀತಿಯ ಮಹಿಳಾ ಸಬಲೀಕರಣ? ಇದು ಕೇವಲ ವೋಟ್ ಬ್ಯಾಂಕ್​​ಗಾಗಿ ಮಾಡಿದ ವಂಚನೆಯಾಗಿದ್ದು, ಕಾಂಗ್ರೆಸ್ ಸರ್ಕಾರ ತಾಯಂದಿರ ಕ್ಷಮೆ ಕೇಳಬೇಕು. ಕೊಟ್ಟ ಮಾತಿಗೆ ತಪ್ಪಿದವರನ್ನು ಈ ನಾಡಿನ ಜನತೆ ಎಂದಿಗೂ ಕ್ಷಮಿಸುವುದಿಲ್ಲ ಎಂದು ಜೆಡಿಎಸ್​​ ವಾಗ್ದಾಳಿ ನಡೆಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಪ್ರಸನ್ನ ಹೆಗಡೆ
ಪ್ರಸನ್ನ ಹೆಗಡೆ

ಪ್ರಸನ್ನ ಹೆಗಡೆ ಹುಟ್ಟಿದ್ದು ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕು. 9 ವರ್ಷಗಳಿಂದ ಪತ್ರಕರ್ತನಾಗಿ ಕೆಲಸ ಮಾಡಿರುವ ಅನುಭವವಿದೆ. ಮುದ್ರಣ, ಟಿವಿ ಮತ್ತು ಡಿಜಿಟಲ್​ ಮಾಧ್ಯಮಗಳಲ್ಲಿ ವಿವಿಧ ಜವಾಬ್ದಾರಿ ನಿಭಾಯಿಸಿದ್ದೇನೆ. ರಾಜಕೀಯ, ಸಿನಿಮಾ ವಿಷಯಗಳಲ್ಲಿ ಹೆಚ್ಚಿನ ಆಸಕ್ತಿ ಇದೆ. ಕವನಗಳ ರಚನೆ, ಪುಸ್ತಕಗಳನ್ನ ಓದುವುದು ನೆಚ್ಚಿನ ಹವ್ಯಾಸಗಳು.

Read More