GST ದರ ಕಡಿತದಿಂದ ರಾಜ್ಯಗಳ ಆದಾಯಕ್ಕೆ ಹೊಡೆತ: ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಕೇಂದ್ರ ಜಿಎಸ್ಟಿ ದರ ಕಡಿತದಿಂದ ಜನಾಸಾಮಾನ್ಯರಿಗೆ ರಿಲೀಫ್ ನೀಡಿದೆ. ಆದರೆ ಇದು ರಾಜ್ಯಗಳಿಗೆ ಬಿಗ್ ಶಾಕ್ ಉಂಟು ಮಾಡಿದೆ. ಕರ್ನಾಟಕ ರಾಜ್ಯದ ಜಿಎಸ್ಟಿ ಸಂಗ್ರಹಣೆಯೂ ಕುಸಿದಿದೆ. ಹೀಗಾಗಿ ಪ್ರಧಾನಿ ನರೇಂದ್ರ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದು, ಸೆಸ್ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು, ಡಿಸೆಂಬರ್ 05: ಕೇಂದ್ರ ಸರ್ಕಾರ ಸರಕು ಮತ್ತು ಸೇವಾ ತೆರಿಗೆ ಪರಿಷ್ಕರಣೆ ಮಾಡಿರುವುದರಿಂದ ರಾಜ್ಯಗಳಿಗೆ ನಷ್ಟವಾಗಲಿದೆ ಎಂದು ಕರ್ನಾಟಕ ಸೇರಿದಂತೆ 8 ರಾಜ್ಯ ಸರ್ಕಾರಗಳು ಕಳವಳ ವ್ಯಕ್ತಪಡಿಸಿದ್ದವು. ಈ ಹಿಂದೆಯೇ ಸಿಎಂ ಸಿದ್ದರಾಮಯ್ಯ (Siddaramaiah), ಜಿಎಸ್ಟಿ ಪರಿಷ್ಕರಣೆಯಿಂದಾಗಿ ರಾಜ್ಯಕ್ಕೆ 18,500 ಕೋಟಿ ರೂ, ನಷ್ಟವಾಗಲಿದೆ ಎಂದು ಹೇಳಿದ್ದರು. ಈ ಮೂಲಕ ಜಿಎಸ್ಟಿ ಇಳಿಕೆಗೆ ವಿರೋಧ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ, ಅಧಿಕೃತವಾಗಿ ಪ್ರಧಾನಿ ನರೇಂದ್ರ ಮೋದಿಗೆ (Narendra Modi) ಪತ್ರ ಬರೆದಿದ್ದು, ಸೆಸ್ನಿಂದ ಸಂಗ್ರಹವಾಗುವ ಆದಾಯದ ಅರ್ಧದಷ್ಟು ಭಾಗವನ್ನು ರಾಜ್ಯದೊಂದಿಗೆ ಹಂಚಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. GST ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ GST ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಟ್ವೀಟ್
We supported the GST rate rationalisation in the larger public interest, despite expressing serious concerns about the potential fiscal impact on States. Unfortunately, the subsequent trends have confirmed these apprehensions.
Karnataka has recorded a sharp decline in Net GST… pic.twitter.com/jvS4tAC0Cv
— Siddaramaiah (@siddaramaiah) December 5, 2025
ನ.2025-26ರಲ್ಲಿ GST ಸಂಗ್ರಹದಲ್ಲಿ 2% ಕುಸಿತ ದಾಖಲಾಗಿದೆ. ಕಳೆದ ವರ್ಷ ನವೆಂಬರ್ 2024ರಲ್ಲಿ GST 9.3% ಬೆಳವಣಿಗೆ ಆಗಿತ್ತು. ನಿವ್ವಳ ದೇಶೀಯ GST ಬೆಳವಣಿಗೆ ದರ ಇಳಿಕೆಯಾಗಿದೆ. ದರ ಸರಳೀಕರಣ ಬಳಿಕ 3 ತಿಂಗಳಲ್ಲಿ 1.7% ಮಾತ್ರ ಬೆಳವಣಿಗೆ ಆಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 8.9% ಬೆಳವಣಿಗೆ ಇತ್ತು. ಇದರಿಂದ ಕರ್ನಾಟಕದ ಬೊಕ್ಕಸಕ್ಕೆ 18,500 ಕೋಟಿ ರೂ ನಷ್ಟವಾಗಿದೆ ಎಂದಿದ್ದಾರೆ.
ಇದನ್ನೂ ಓದಿ: ಜಿಎಸ್ಟಿ ಪರಿಷ್ಕರಣೆಯ ಲಾಭ ನಷ್ಟದ ಲೆಕ್ಕಾಚಾರ: ರಾಜ್ಯಗಳಿಗೆ ನಿಜಕ್ಕೂ ಭಾರಿ ನಷ್ಟವೇ? ಕೇಂದ್ರ ಸರ್ಕಾರ, ತಜ್ಞರು ಹೇಳಿದ್ದಿಷ್ಟು
ಕರ್ನಾಟಕ ರಾಜ್ಯದ ಜಿಎಸ್ಟಿ ಸಂಗ್ರಹಣೆಯೂ ಕುಸಿದಿದೆ. ರಾಜ್ಯದ ನಿವ್ವಳ GST ಸಂಗ್ರಹಣೆಯಲ್ಲಿ 3.1% ಬೆಳವಣಿಗೆ ಹೊಂದಿದ್ದು, ರಾಜ್ಯದ ಬೊಕ್ಕಸಕ್ಕೆ 18,500 ಕೋಟಿ ರೂ. ನಷ್ಟದ ಭೀತಿ ಎದುರಾಗಿದೆ. ಈ ವರ್ಷ 9,000 ಕೋಟಿಗಳ ಆದಾಯ ಕೊರತೆ ಸಾಧ್ಯತೆ ಇದೆ. ವಿಲೀನಗೊಳಿಸದಿರುವಿಕೆಯಿಂದ 9,500 ಕೋಟಿ ರೂ. ನಷ್ಟವಾಗಲಿದೆ. ಈ ನಷ್ಟವನ್ನು ಕೇಂದ್ರವು ರಾಜ್ಯಗಳಿಗೆ ಸರಿದೂಗಿಸಬೇಕು. ಪಾನ್ ಮಸಾಲಾ ಸೆಸ್ ಆದಾಯವನ್ನು 50:50 ಆಧಾರದ ಮೇಲೆ ರಾಜ್ಯಗಳೊಂದಿಗೆ ಹಂಚಿಕೆಗೆ ಪರಿಗಣಿಸಬೇಕೆಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:21 pm, Fri, 5 December 25



